ರಾಜ್ಯ

ಬೇಜವಬ್ದಾರಿ ಸಂಸದರನ್ನು ಮೊದಲು ವಜಾಗೊಳಿಸಿ : ಪ್ರತಾಪ್‌ಸಿಂಹ ವಿರುದ್ಧ ಗುಡುಗಿದ ಹೆಚ್‌.ವಿಶ್ವನಾಥ್‌

ಮೈಸೂರು: ದೇಶದಲ್ಲೇ ಹೆಚ್ಚು ಭದ್ರತೆ ಇರುವ ಸಂಸತ್‌ ಭವನದಲ್ಲಿ,  ಭದ್ರತಾಲೋಪದಿಂದ ನಿನ್ನೆ ನಡೆದ ಘಟನೆ ಸಂಬಂಧಿಸಿದಂತೆ ಮೈಸೂರು-ಕೊಡಗು ಸಂಸದ ಪ್ರತಾಪ್‌ ಸಿಂಹ ಅವರನ್ನು ಈ ಕೂಡಲೆ ಸಂಸದ ಸ್ಥಾನದಿಂದ ವಜಾಗೊಳಿಸಬೇಕು ಎಂದು ಬಿಜೆಪಿ ಎಂಎಲ್‌ಸಿ ಹೆಚ್‌.ವಿಶ್ವನಾಥ್‌ ಆಗ್ರಹಿಸಿದ್ದಾರೆ.

ಘಟನೆ ಬಗ್ಗೆ  ಆಂದೋಲನ ಪತ್ರಿಕೆಗೆ ಪ್ರತಿಕ್ರಿಯೆ ನೀಡಿದ ಹೆಚ್.ವಿಶ್ವನಾಥ್‌, ನಿನ್ನೆ ಸಂಸತ್‌ನಲ್ಲಿ ನಡೆದ ಘಟನೆ ಖಂಡನೀಯ. ದೇಶದಲ್ಲೇ ಅತೀ ಹೆಚ್ಚು ಭದ್ರತೆ ಇರುವ ಸ್ಥಳದಲ್ಲೇ ಭದ್ರತಾಲೋಪವಾಗಿರುವುದು ವಿಪರ್ಯಾಸ ಎಂದಿದ್ದಾರೆ.

ಜವಬ್ಧಾರಿಯುತ ಸಂಸತ್‌ ಸದಸ್ಯರು ಯಾರಿಗೆ ಪಾಸ್‌ ನೀಡಬೇಕು ಎಂಬುದರ ಬಗ್ಗೆ ಸರಿಯಾದ ರೀತಿಯಲ್ಲಿ ತೀರ್ಮಾನ ಕೈಗೊಳ್ಳದಿದ್ದರೇ ಏನೆಲ್ಲಾ ಅನಾಹುತಗಳು ಆಗಬಹುದು ಎಂಬುದಕ್ಕೆ ನಿನ್ನೆ ನಡೆದ ಘಟನೆಯೇ ಸಾಕ್ಷಿ. ನಮ್ಮೂರಿನವರೇ ಆದಂತ ಸಂಸದ ಪ್ರತಾಪ್‌ ಸಿಂಹ, ಪಾಸ್‌ ನೀಡುವಂತ ಸಂದರ್ಭದಲ್ಲಿ ಅವರ ಪೂರ್ವಪರಗಳನ್ನು ತಿಳಿದಿರಬೇಕು .ನಾನೂ ಕೂಡ ಒಬ್ಬ ಸಂಸತ್‌ ಸದಸ್ಯನಾಗಿ ಕೆಲಸ ಮಾಡಿದವನು, ಒಬ್ಬ ಸಂಸತ್‌ ಸದಸ್ಯನಿಗೆ, ಸಂಸತ್‌ಗೆ ಭೇಟಿ ನೀಡುವವರಿಗೆ ಪಾಸ್‌ ನೀಡುವ ಅಧಿಕಾರವನ್ನು ನೀಡಲಾಗಿದೆ.

ಆದರೇ ಆ ಅಧಿಕಾರವನ್ನು ಸರಿಯಾಗಿ ಉಪಯೋಗ ಮಾಡಿಕೊಳ್ಳಬೇಕು. ಅದನ್ನು ಬಿಟ್ಟು ಎಲ್ಲರಿಗೂ ಒಳಗೆ ಪ್ರವೇಶ ನೀಡಿದರೆ ಏನೆಲ್ಲಾ ಅನಾಹುತವಾಗಹುದು ಎಂಬುದಕ್ಕೆ ಇದೇ ಸಾಕ್ಷಿ. ಈ ಕೂಡಲೇ ಸಂಸದ ಪ್ಎಂರತಾಪ್ದ‌ ಸಿಂಹ ಅವರನ್ರುನು ಸಂಸದ ಸ್ಥಾನದಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿದರು.

ಪ್ರತಾಪ್‌ ಸಿಂಹಗೆ ಪರಿಚಯಸ್ಥ ಹುಡುಗ:
ನಿನ್ನೆ ಸಂಸತ್‌ನಲ್ಲಿ ನಿರ್ಮಾಣವಾದ ಆತಂಕಕಾರಿ ಘಟನೆಯ ಆರೋಪಿಯಾಗಿರುವ ಮೈಸೂರಿನ ಹುಡುಗ ಮನೋರಂಜನ್‌ ಸಂಸದ ಪ್ರತಾಪ್‌ ಸಿಂಹ ಅವರಿಗೆ ತೀರ ಹತ್ತಿರದ ಒಡನಾಡಿ. ಈ ಬಗ್ಗೆ ಮನೋರಂಜನ್‌ ತಂದೆಯೇ ಹೇಳಿಕೆ ನೀಡಿದ್ದಾರೆ. ಆ ಹುಡುಗನ ನಡವಳಿಕೆ ಬಗ್ಗೆ ಪ್ರತಾಪ್‌ ಸಿಂಹರಿಗೆ ಚೆನ್ನಾಗಿಯೇ ತಿಳಿದಿರುತ್ತದೆ. ಒಂದು ವೇಳೆ ಪ್ರತಾಪ್‌ ಸಿಂಹ ಆ ಹುಡುಗ ಪರಿಚಯ ಇಲ್ಲ ಎಂದರೇ ಅದು ಶುದ್ಧ ಸುಳ್ಳು ಎಂದರು.

ಸಂಸತ್‌ನಲ್ಲಿ ಅಧಿಕಾರಿಗಳ  ಸಮಸ್ಯೆ: ಭದ್ರತೆಗೆ  ಸಂಬಂಧಿಸಿದಂತೆ ಸಂಸತ್‌ ಭವನದಲ್ಲಿ ಕೆಳ ಹಂತದ ಅಧಿಕಾರಿಗಳ ಕೊರತೆ ಇದೆ. ಮೇಲಧಿಕಾರಿಗಳು ಹೆಚ್ಚಾಗಿದ್ದಾರೆ ಹೊರತು ಕೆಳಹಂತದ ಅಧಿಕಾರಿಗಳು ಕಡಿಮೆ. ಕಾಯುವವರಿಗಿಂತಾ, ಕಾಯುವವರನ್ನು ಕಾಯುವ ಅಧಿಕಾರಿಗಳಿದ್ದಾರೆ. ಭದ್ರತಾಲೋಪಕ್ಕೆ ಇದೂ ಒಂದು ಕಾರಣವಾಗಿದೆ ಎಂದು ಹೆಚ್‌.ವಿಶ್ವನಾಥ್‌ ಆರೋಪಿಸಿದರು

ಸರ್ಕಾರದ ಮೇಲೆ ಜನರಿಗೆ ಅಪನಂಬಿಕೆ:  ಈ ರೀರತಿಯ ಘಟನೆಗಳು ಪದೇ ಪದೇ ಆಗಿದ್ದರೂ ಮತ್ತೆ ಅದೇ ತಪ್ಪುಗಳನ್ನು ಮಾಡುತ್ತಿದ್ದೇವೆ. ಸಾವಿರಾರು ಕೋಟಿ ಕರ್ಚು ಮಾಡಿ ಕಟ್ಟಿರುವ ನೂತನ ಸಂಸತ್‌ ಭವನವನ್ನು ಇಂತಹ ಮನಸ್ಥಿತಿ ಇರುವ ಯುವಕರು ಒಂದು ವೇಳೆ ಒಡೆದು ಹಾಕಿದರೆ, ಸಂಸತ್‌ ಭವನವನ್ನೇ ರಕ್ಷಣೆ ಮಾಡದಂತ ಸರ್ಕಾರ ಭಾರತೀಯರಿಗೆ ಯಾವ ರೀತಿ ರಕ್ಷಣೆ ನೀಡುತ್ತದೆ ಎಂಬ ಪ್ರಶ್ನೆ ಜನರಲ್ಲಿ ಮೂಡುತ್ತದೆ. ಈಗಾಗಲೇ ಆ ರೀತಿಯ ಪ್ರಶ್ನೆ ಜನರಲ್ಲಿ ಮೂಡಿದೆ ಎಂದರು.

 

andolanait

Recent Posts

ಕೃಷಿ ಕ್ಷೇತ್ರ ಅಭಿವೃದ್ಧಿ ಅಪರಿಮಿತ ಸಾಧನೆ : ಸಚಿವ ಎನ್ ಚಲುವರಾಯಸ್ವಾಮಿ

ಬೆಂಗಳೂರು : ಕೃಷಿ ಕ್ಷೇತ್ರದ ಅಭಿವೃದ್ಧಿ-ರೈತರ ಕಲ್ಯಾಣದಲ್ಲಿ ಕರ್ನಾಟಕ ದೇಶದಲ್ಲೆ ಅತಿ ಹೆಚ್ಚಿನ ಸಾಧನೆ ಮಾಡಿದ ರಾಜ್ಯವಾಗಿದ್ದು, ಬೆಳೆ ವಿಮೆಯಲ್ಲಿ…

7 hours ago

ವಿದೇಶಿ ಉದ್ಯೋಗ ಆಮಿಷ : ವಿದ್ಯಾರ್ಥಿಗೆ 1.80 ಕೋಟಿ ವಂಚನೆ!

ಮೈಸೂರು : ವಿದೇಶದಲ್ಲಿ ಉದ್ಯೋಗ ಕೊಡಿಸುತ್ತೇನೆ ಎಂದು ನಂಬಿಸಿ ಕೆರಳ ಮೂಲದ ಇಬ್ಬರು ದುಷ್ಕರ್ಮಿಗಳು ನಗರದ ವಿದ್ಯಾರ್ಥಿಯೋರ್ವನಿಗೆ 1.80 ಕೋಟಿ…

7 hours ago

ಟಿ20 ವಿಶ್ವಕಪ್ 2026 : ಕಣದಲ್ಲಿವೆ 20 ತಂಡಗಳು

ಕೊಲಂಬೊ : ಐಸಿಸಿ ಪುರುಷರ ಟಿ20 ವಿಶ್ವಕಪ್ 2026ರ ಹತ್ತನೇ ಆವೃತ್ತಿ ನಾಳೆ (ಫೆಬ್ರವರಿ 7) ಭಾರತ ಮತ್ತು ಶ್ರೀಲಂಕಾ…

7 hours ago

ಅರಣ್ಯ ಭೂಮಿಯಲ್ಲಿ ನಿಯಮ ಬಾಹಿರ ರೆಸಾರ್ಟ್ ನಿರ್ಮಿಸಿದರೆ ನಿರ್ದಾಕ್ಷಿಣ್ಯ ಕ್ರಮ : ನಿತೇಶ್‌ ಪಾಟೀಲ್‌ ಎಚ್ಚರಿಕೆ

ಚಾಮರಾಜನಗರ : ಅರಣ್ಯ ಭೂಮಿಯಲ್ಲಿ ನಿಯಮಬಾಹಿರವಾಗಿ ರೆಸಾರ್ಟ್, ಹೋಂ ಸ್ಟೇ, ವಾಣಿಜ್ಯ ಚಟುವಟಿಕೆಗಳು ನಡೆಯುತ್ತಿದ್ದರೆ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು ಎಂದು…

8 hours ago

ಉದ್ಯಮಿ ಅರವಿಂದ್‌ ರೆಡ್ಡಿಗೆ ಕೊಲೆ ಬೆದರಿಕೆ ; ಆರೋಪಿ ಬಂಧನ

ಬೆಂಗಳೂರು : ವಿಆರ್ ಗ್ರೂಪ್‌ನ ಸಂಸ್ಥಾಪಕ ಹಾಗೂ ರಿಯಲ್ ಎಸ್ಟೇಟ್ ಉದ್ಯಮಿ ಅರವಿಂದ್ ವೆಂಕಟೇಶ್ ರೆಡ್ಡಿ ಅವರಿಗೆ ಕೊಲೆ ಬೆದರಿಕೆ…

9 hours ago

ಯತೀಂದ್ರ ನಮ್ಮ ಹೈಕಮಾಂಡ್‌, ಅವರು ಹೇಳಿದ ಮೇಲೆ ಇನ್ನೇನಿದೆ : ಡಿಸಿಎಂ ಡಿಕೆಶಿ

ಮಂಗಳೂರು : ಯತೀಂದ್ರ ಸಿದ್ದರಾಮಯ್ಯ ಅವರೇ ಈಗ ನಮ್ಮ ಹೈಕಮಾಂಡ್. ಅವರು ಹೇಳಿದ ಮೇಲೆ ಮುಗಿಯಿತು. ಈ ಬಗ್ಗೆ ನನಗೆ…

10 hours ago