ರಾಜ್ಯ

ಬೇಜವಬ್ದಾರಿ ಸಂಸದರನ್ನು ಮೊದಲು ವಜಾಗೊಳಿಸಿ : ಪ್ರತಾಪ್‌ಸಿಂಹ ವಿರುದ್ಧ ಗುಡುಗಿದ ಹೆಚ್‌.ವಿಶ್ವನಾಥ್‌

ಮೈಸೂರು: ದೇಶದಲ್ಲೇ ಹೆಚ್ಚು ಭದ್ರತೆ ಇರುವ ಸಂಸತ್‌ ಭವನದಲ್ಲಿ,  ಭದ್ರತಾಲೋಪದಿಂದ ನಿನ್ನೆ ನಡೆದ ಘಟನೆ ಸಂಬಂಧಿಸಿದಂತೆ ಮೈಸೂರು-ಕೊಡಗು ಸಂಸದ ಪ್ರತಾಪ್‌ ಸಿಂಹ ಅವರನ್ನು ಈ ಕೂಡಲೆ ಸಂಸದ ಸ್ಥಾನದಿಂದ ವಜಾಗೊಳಿಸಬೇಕು ಎಂದು ಬಿಜೆಪಿ ಎಂಎಲ್‌ಸಿ ಹೆಚ್‌.ವಿಶ್ವನಾಥ್‌ ಆಗ್ರಹಿಸಿದ್ದಾರೆ.

ಘಟನೆ ಬಗ್ಗೆ  ಆಂದೋಲನ ಪತ್ರಿಕೆಗೆ ಪ್ರತಿಕ್ರಿಯೆ ನೀಡಿದ ಹೆಚ್.ವಿಶ್ವನಾಥ್‌, ನಿನ್ನೆ ಸಂಸತ್‌ನಲ್ಲಿ ನಡೆದ ಘಟನೆ ಖಂಡನೀಯ. ದೇಶದಲ್ಲೇ ಅತೀ ಹೆಚ್ಚು ಭದ್ರತೆ ಇರುವ ಸ್ಥಳದಲ್ಲೇ ಭದ್ರತಾಲೋಪವಾಗಿರುವುದು ವಿಪರ್ಯಾಸ ಎಂದಿದ್ದಾರೆ.

ಜವಬ್ಧಾರಿಯುತ ಸಂಸತ್‌ ಸದಸ್ಯರು ಯಾರಿಗೆ ಪಾಸ್‌ ನೀಡಬೇಕು ಎಂಬುದರ ಬಗ್ಗೆ ಸರಿಯಾದ ರೀತಿಯಲ್ಲಿ ತೀರ್ಮಾನ ಕೈಗೊಳ್ಳದಿದ್ದರೇ ಏನೆಲ್ಲಾ ಅನಾಹುತಗಳು ಆಗಬಹುದು ಎಂಬುದಕ್ಕೆ ನಿನ್ನೆ ನಡೆದ ಘಟನೆಯೇ ಸಾಕ್ಷಿ. ನಮ್ಮೂರಿನವರೇ ಆದಂತ ಸಂಸದ ಪ್ರತಾಪ್‌ ಸಿಂಹ, ಪಾಸ್‌ ನೀಡುವಂತ ಸಂದರ್ಭದಲ್ಲಿ ಅವರ ಪೂರ್ವಪರಗಳನ್ನು ತಿಳಿದಿರಬೇಕು .ನಾನೂ ಕೂಡ ಒಬ್ಬ ಸಂಸತ್‌ ಸದಸ್ಯನಾಗಿ ಕೆಲಸ ಮಾಡಿದವನು, ಒಬ್ಬ ಸಂಸತ್‌ ಸದಸ್ಯನಿಗೆ, ಸಂಸತ್‌ಗೆ ಭೇಟಿ ನೀಡುವವರಿಗೆ ಪಾಸ್‌ ನೀಡುವ ಅಧಿಕಾರವನ್ನು ನೀಡಲಾಗಿದೆ.

ಆದರೇ ಆ ಅಧಿಕಾರವನ್ನು ಸರಿಯಾಗಿ ಉಪಯೋಗ ಮಾಡಿಕೊಳ್ಳಬೇಕು. ಅದನ್ನು ಬಿಟ್ಟು ಎಲ್ಲರಿಗೂ ಒಳಗೆ ಪ್ರವೇಶ ನೀಡಿದರೆ ಏನೆಲ್ಲಾ ಅನಾಹುತವಾಗಹುದು ಎಂಬುದಕ್ಕೆ ಇದೇ ಸಾಕ್ಷಿ. ಈ ಕೂಡಲೇ ಸಂಸದ ಪ್ಎಂರತಾಪ್ದ‌ ಸಿಂಹ ಅವರನ್ರುನು ಸಂಸದ ಸ್ಥಾನದಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿದರು.

ಪ್ರತಾಪ್‌ ಸಿಂಹಗೆ ಪರಿಚಯಸ್ಥ ಹುಡುಗ:
ನಿನ್ನೆ ಸಂಸತ್‌ನಲ್ಲಿ ನಿರ್ಮಾಣವಾದ ಆತಂಕಕಾರಿ ಘಟನೆಯ ಆರೋಪಿಯಾಗಿರುವ ಮೈಸೂರಿನ ಹುಡುಗ ಮನೋರಂಜನ್‌ ಸಂಸದ ಪ್ರತಾಪ್‌ ಸಿಂಹ ಅವರಿಗೆ ತೀರ ಹತ್ತಿರದ ಒಡನಾಡಿ. ಈ ಬಗ್ಗೆ ಮನೋರಂಜನ್‌ ತಂದೆಯೇ ಹೇಳಿಕೆ ನೀಡಿದ್ದಾರೆ. ಆ ಹುಡುಗನ ನಡವಳಿಕೆ ಬಗ್ಗೆ ಪ್ರತಾಪ್‌ ಸಿಂಹರಿಗೆ ಚೆನ್ನಾಗಿಯೇ ತಿಳಿದಿರುತ್ತದೆ. ಒಂದು ವೇಳೆ ಪ್ರತಾಪ್‌ ಸಿಂಹ ಆ ಹುಡುಗ ಪರಿಚಯ ಇಲ್ಲ ಎಂದರೇ ಅದು ಶುದ್ಧ ಸುಳ್ಳು ಎಂದರು.

ಸಂಸತ್‌ನಲ್ಲಿ ಅಧಿಕಾರಿಗಳ  ಸಮಸ್ಯೆ: ಭದ್ರತೆಗೆ  ಸಂಬಂಧಿಸಿದಂತೆ ಸಂಸತ್‌ ಭವನದಲ್ಲಿ ಕೆಳ ಹಂತದ ಅಧಿಕಾರಿಗಳ ಕೊರತೆ ಇದೆ. ಮೇಲಧಿಕಾರಿಗಳು ಹೆಚ್ಚಾಗಿದ್ದಾರೆ ಹೊರತು ಕೆಳಹಂತದ ಅಧಿಕಾರಿಗಳು ಕಡಿಮೆ. ಕಾಯುವವರಿಗಿಂತಾ, ಕಾಯುವವರನ್ನು ಕಾಯುವ ಅಧಿಕಾರಿಗಳಿದ್ದಾರೆ. ಭದ್ರತಾಲೋಪಕ್ಕೆ ಇದೂ ಒಂದು ಕಾರಣವಾಗಿದೆ ಎಂದು ಹೆಚ್‌.ವಿಶ್ವನಾಥ್‌ ಆರೋಪಿಸಿದರು

ಸರ್ಕಾರದ ಮೇಲೆ ಜನರಿಗೆ ಅಪನಂಬಿಕೆ:  ಈ ರೀರತಿಯ ಘಟನೆಗಳು ಪದೇ ಪದೇ ಆಗಿದ್ದರೂ ಮತ್ತೆ ಅದೇ ತಪ್ಪುಗಳನ್ನು ಮಾಡುತ್ತಿದ್ದೇವೆ. ಸಾವಿರಾರು ಕೋಟಿ ಕರ್ಚು ಮಾಡಿ ಕಟ್ಟಿರುವ ನೂತನ ಸಂಸತ್‌ ಭವನವನ್ನು ಇಂತಹ ಮನಸ್ಥಿತಿ ಇರುವ ಯುವಕರು ಒಂದು ವೇಳೆ ಒಡೆದು ಹಾಕಿದರೆ, ಸಂಸತ್‌ ಭವನವನ್ನೇ ರಕ್ಷಣೆ ಮಾಡದಂತ ಸರ್ಕಾರ ಭಾರತೀಯರಿಗೆ ಯಾವ ರೀತಿ ರಕ್ಷಣೆ ನೀಡುತ್ತದೆ ಎಂಬ ಪ್ರಶ್ನೆ ಜನರಲ್ಲಿ ಮೂಡುತ್ತದೆ. ಈಗಾಗಲೇ ಆ ರೀತಿಯ ಪ್ರಶ್ನೆ ಜನರಲ್ಲಿ ಮೂಡಿದೆ ಎಂದರು.

 

andolanait

Recent Posts

ಪೈಲ್ವಾನರ ಕಸರತ್ತಿಗೆ ಗರಡಿ ಮನೆಗಳು ಸಜ್ಜು

ಮೈಸೂರು: ಸಾಂಸ್ಕೃತಿಕ ರಾಜಧಾನಿ, ಅರಮನೆಗಳ ನಗರಿ ಎಂದು ಕರೆಯುವ ಮೈಸೂರನ್ನು ಗರಡಿ ಮನೆಗಳ ನಗರಿ ಎಂದೂ ಇತ್ತೀಚಿನ ವರ್ಷಗಳಲ್ಲಿ ಕರೆಯುವುದು…

7 mins ago

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

8 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

10 hours ago

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

10 hours ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

11 hours ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

11 hours ago