ರಾಜ್ಯ

ಬೇಜವಬ್ದಾರಿ ಸಂಸದರನ್ನು ಮೊದಲು ವಜಾಗೊಳಿಸಿ : ಪ್ರತಾಪ್‌ಸಿಂಹ ವಿರುದ್ಧ ಗುಡುಗಿದ ಹೆಚ್‌.ವಿಶ್ವನಾಥ್‌

ಮೈಸೂರು: ದೇಶದಲ್ಲೇ ಹೆಚ್ಚು ಭದ್ರತೆ ಇರುವ ಸಂಸತ್‌ ಭವನದಲ್ಲಿ,  ಭದ್ರತಾಲೋಪದಿಂದ ನಿನ್ನೆ ನಡೆದ ಘಟನೆ ಸಂಬಂಧಿಸಿದಂತೆ ಮೈಸೂರು-ಕೊಡಗು ಸಂಸದ ಪ್ರತಾಪ್‌ ಸಿಂಹ ಅವರನ್ನು ಈ ಕೂಡಲೆ ಸಂಸದ ಸ್ಥಾನದಿಂದ ವಜಾಗೊಳಿಸಬೇಕು ಎಂದು ಬಿಜೆಪಿ ಎಂಎಲ್‌ಸಿ ಹೆಚ್‌.ವಿಶ್ವನಾಥ್‌ ಆಗ್ರಹಿಸಿದ್ದಾರೆ.

ಘಟನೆ ಬಗ್ಗೆ  ಆಂದೋಲನ ಪತ್ರಿಕೆಗೆ ಪ್ರತಿಕ್ರಿಯೆ ನೀಡಿದ ಹೆಚ್.ವಿಶ್ವನಾಥ್‌, ನಿನ್ನೆ ಸಂಸತ್‌ನಲ್ಲಿ ನಡೆದ ಘಟನೆ ಖಂಡನೀಯ. ದೇಶದಲ್ಲೇ ಅತೀ ಹೆಚ್ಚು ಭದ್ರತೆ ಇರುವ ಸ್ಥಳದಲ್ಲೇ ಭದ್ರತಾಲೋಪವಾಗಿರುವುದು ವಿಪರ್ಯಾಸ ಎಂದಿದ್ದಾರೆ.

ಜವಬ್ಧಾರಿಯುತ ಸಂಸತ್‌ ಸದಸ್ಯರು ಯಾರಿಗೆ ಪಾಸ್‌ ನೀಡಬೇಕು ಎಂಬುದರ ಬಗ್ಗೆ ಸರಿಯಾದ ರೀತಿಯಲ್ಲಿ ತೀರ್ಮಾನ ಕೈಗೊಳ್ಳದಿದ್ದರೇ ಏನೆಲ್ಲಾ ಅನಾಹುತಗಳು ಆಗಬಹುದು ಎಂಬುದಕ್ಕೆ ನಿನ್ನೆ ನಡೆದ ಘಟನೆಯೇ ಸಾಕ್ಷಿ. ನಮ್ಮೂರಿನವರೇ ಆದಂತ ಸಂಸದ ಪ್ರತಾಪ್‌ ಸಿಂಹ, ಪಾಸ್‌ ನೀಡುವಂತ ಸಂದರ್ಭದಲ್ಲಿ ಅವರ ಪೂರ್ವಪರಗಳನ್ನು ತಿಳಿದಿರಬೇಕು .ನಾನೂ ಕೂಡ ಒಬ್ಬ ಸಂಸತ್‌ ಸದಸ್ಯನಾಗಿ ಕೆಲಸ ಮಾಡಿದವನು, ಒಬ್ಬ ಸಂಸತ್‌ ಸದಸ್ಯನಿಗೆ, ಸಂಸತ್‌ಗೆ ಭೇಟಿ ನೀಡುವವರಿಗೆ ಪಾಸ್‌ ನೀಡುವ ಅಧಿಕಾರವನ್ನು ನೀಡಲಾಗಿದೆ.

ಆದರೇ ಆ ಅಧಿಕಾರವನ್ನು ಸರಿಯಾಗಿ ಉಪಯೋಗ ಮಾಡಿಕೊಳ್ಳಬೇಕು. ಅದನ್ನು ಬಿಟ್ಟು ಎಲ್ಲರಿಗೂ ಒಳಗೆ ಪ್ರವೇಶ ನೀಡಿದರೆ ಏನೆಲ್ಲಾ ಅನಾಹುತವಾಗಹುದು ಎಂಬುದಕ್ಕೆ ಇದೇ ಸಾಕ್ಷಿ. ಈ ಕೂಡಲೇ ಸಂಸದ ಪ್ಎಂರತಾಪ್ದ‌ ಸಿಂಹ ಅವರನ್ರುನು ಸಂಸದ ಸ್ಥಾನದಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿದರು.

ಪ್ರತಾಪ್‌ ಸಿಂಹಗೆ ಪರಿಚಯಸ್ಥ ಹುಡುಗ:
ನಿನ್ನೆ ಸಂಸತ್‌ನಲ್ಲಿ ನಿರ್ಮಾಣವಾದ ಆತಂಕಕಾರಿ ಘಟನೆಯ ಆರೋಪಿಯಾಗಿರುವ ಮೈಸೂರಿನ ಹುಡುಗ ಮನೋರಂಜನ್‌ ಸಂಸದ ಪ್ರತಾಪ್‌ ಸಿಂಹ ಅವರಿಗೆ ತೀರ ಹತ್ತಿರದ ಒಡನಾಡಿ. ಈ ಬಗ್ಗೆ ಮನೋರಂಜನ್‌ ತಂದೆಯೇ ಹೇಳಿಕೆ ನೀಡಿದ್ದಾರೆ. ಆ ಹುಡುಗನ ನಡವಳಿಕೆ ಬಗ್ಗೆ ಪ್ರತಾಪ್‌ ಸಿಂಹರಿಗೆ ಚೆನ್ನಾಗಿಯೇ ತಿಳಿದಿರುತ್ತದೆ. ಒಂದು ವೇಳೆ ಪ್ರತಾಪ್‌ ಸಿಂಹ ಆ ಹುಡುಗ ಪರಿಚಯ ಇಲ್ಲ ಎಂದರೇ ಅದು ಶುದ್ಧ ಸುಳ್ಳು ಎಂದರು.

ಸಂಸತ್‌ನಲ್ಲಿ ಅಧಿಕಾರಿಗಳ  ಸಮಸ್ಯೆ: ಭದ್ರತೆಗೆ  ಸಂಬಂಧಿಸಿದಂತೆ ಸಂಸತ್‌ ಭವನದಲ್ಲಿ ಕೆಳ ಹಂತದ ಅಧಿಕಾರಿಗಳ ಕೊರತೆ ಇದೆ. ಮೇಲಧಿಕಾರಿಗಳು ಹೆಚ್ಚಾಗಿದ್ದಾರೆ ಹೊರತು ಕೆಳಹಂತದ ಅಧಿಕಾರಿಗಳು ಕಡಿಮೆ. ಕಾಯುವವರಿಗಿಂತಾ, ಕಾಯುವವರನ್ನು ಕಾಯುವ ಅಧಿಕಾರಿಗಳಿದ್ದಾರೆ. ಭದ್ರತಾಲೋಪಕ್ಕೆ ಇದೂ ಒಂದು ಕಾರಣವಾಗಿದೆ ಎಂದು ಹೆಚ್‌.ವಿಶ್ವನಾಥ್‌ ಆರೋಪಿಸಿದರು

ಸರ್ಕಾರದ ಮೇಲೆ ಜನರಿಗೆ ಅಪನಂಬಿಕೆ:  ಈ ರೀರತಿಯ ಘಟನೆಗಳು ಪದೇ ಪದೇ ಆಗಿದ್ದರೂ ಮತ್ತೆ ಅದೇ ತಪ್ಪುಗಳನ್ನು ಮಾಡುತ್ತಿದ್ದೇವೆ. ಸಾವಿರಾರು ಕೋಟಿ ಕರ್ಚು ಮಾಡಿ ಕಟ್ಟಿರುವ ನೂತನ ಸಂಸತ್‌ ಭವನವನ್ನು ಇಂತಹ ಮನಸ್ಥಿತಿ ಇರುವ ಯುವಕರು ಒಂದು ವೇಳೆ ಒಡೆದು ಹಾಕಿದರೆ, ಸಂಸತ್‌ ಭವನವನ್ನೇ ರಕ್ಷಣೆ ಮಾಡದಂತ ಸರ್ಕಾರ ಭಾರತೀಯರಿಗೆ ಯಾವ ರೀತಿ ರಕ್ಷಣೆ ನೀಡುತ್ತದೆ ಎಂಬ ಪ್ರಶ್ನೆ ಜನರಲ್ಲಿ ಮೂಡುತ್ತದೆ. ಈಗಾಗಲೇ ಆ ರೀತಿಯ ಪ್ರಶ್ನೆ ಜನರಲ್ಲಿ ಮೂಡಿದೆ ಎಂದರು.

 

andolanait

Recent Posts

ಮಾದಪ್ಪನ ದರ್ಶನ ಮುಗಿಸಿ ಬರುವಾಗ ಬಸ್‌ ಪಲ್ಟಿ : ಇಬ್ಬರು ಸಾವು ; ಹಲವರು ಗಂಭೀರ

ಕೊಳ್ಳೇಗಾಲ : ಮಹದೇಶ್ವರ ಬೆಟ್ಟಕ್ಕೆ ತೆರಳಿ ದರ್ಶನ ಪಡೆದು ವಾಪಸ್ ಬರುವಾಗ ಕೆ.ಎಸ್.ಆರ್.ಟಿ.ಸಿ ಬಸ್ ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿ, 10…

24 mins ago

ಮೈಸೂರು | ವ್ಯಕ್ತಿ ಅನುಮಾನಾಸ್ಪದ ಸಾವು ; ಹೆಂಡತಿಯಿಂದಲೇ ಕೊಲೆಯ ಶಂಕೆ

ಮೈಸೂರು : ಇಲ್ಲಿನ ಕುವೆಂಪುನಗರದಲ್ಲಿ ನಡೆದಿದ್ದ ನಿತ್ಯಾನಂದ ಅವರ ಅನುಮಾನಾಸ್ಪದ ಸಾವಿನ ಪ್ರಕರಣ ಕೊಲೆ ಪ್ರಕರಣವಾಗಿ ತಿರುಗಿದ್ದು, ಪತ್ನಿ ಸುಶೀಲ…

3 hours ago

ಬಿಜೆಪಿ ವಕ್ತಾರ ಎಂ.ಜಿ.ಮಹೇಶ್‌ 6 ವರ್ಷ ಪಕ್ಷದಿಂದ ಉಚ್ಛಾಟನೆ

ಬೆಂಗಳೂರು : ಬಿಜೆಪಿ ಪಕ್ಷದ ರಾಷ್ಟೀಯ ಮತ್ತು ರಾಜ್ಯ ಮಟ್ಟದ ನಾಯಕರ ವಿರುದ್ಧ ಅವಹೇಳನಕಾರಿ ಹಾಗೂ ಆಧಾರರಹಿತ ಆರೋಪಗಳನ್ನು ಮಾಡಿ…

4 hours ago

ಅಸ್ಸಾಂನಲ್ಲಿ ಭೀಕರ ಪ್ರವಾಹ: ಜನಜೀವನ ಅಸ್ತವ್ಯಸ್ತ

ದಿಸ್ಪುರ್:‌ ನೆರೆಯ ರಾಜ್ಯ ಅರುಣಾಚಲ ಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಭೀಕರ ಪ್ರವಾಹ ಸೃಷ್ಟಿಯಾಗಿದೆ. ಭಾರೀ…

7 hours ago

ಕೈಕೊಟ್ಟ ಮುಂಗಾರು: ಕಬಿನಿ ಜಲಾಶಯದ ನೀರಿನ ಮಟ್ಟ ಮತ್ತಷ್ಟು ಕುಸಿತ

ಎಚ್.ಡಿ.ಕೋಟೆ: ಈ ಬಾರಿ ಮುಂಗಾರು ಮಳೆ ಕೈಕೊಟ್ಟ ಪರಿಣಾಮ ರಾಜ್ಯದ ಜಲಾಶಯಗಳು ಬರಿದಾಗುತ್ತಿವೆ. ರಾಜ್ಯದಲ್ಲಿ ಮೊದಲು ಭರ್ತಿಯಾಗುವ ಜಲಾಶಯ ಎಂಬ…

7 hours ago

ರಾಮಮಂದಿರದಲ್ಲಿ ಅಕ್ರಮ; ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ

ಉತ್ತರ ಪ್ರದೇಶದ ಅಯೋಧ್ಯಾ ರಾಮಮಂದಿರದಲ್ಲಿ ಕಾಣಿಕೆ ಹಣ ಹಾಗೂ ದೇಣಿಗೆಯನ್ನು ದುರ್ಬಳಕೆ ಮಾಡಿರುವುದು ಅನೂಹ್ಯ ಪ್ರಕರಣ. ಇದರಿಂದ ಕೋಟ್ಯಂತರ ಜನರ…

13 hours ago