ರಾಜ್ಯ

ಬೇಜವಬ್ದಾರಿ ಸಂಸದರನ್ನು ಮೊದಲು ವಜಾಗೊಳಿಸಿ : ಪ್ರತಾಪ್‌ಸಿಂಹ ವಿರುದ್ಧ ಗುಡುಗಿದ ಹೆಚ್‌.ವಿಶ್ವನಾಥ್‌

ಮೈಸೂರು: ದೇಶದಲ್ಲೇ ಹೆಚ್ಚು ಭದ್ರತೆ ಇರುವ ಸಂಸತ್‌ ಭವನದಲ್ಲಿ,  ಭದ್ರತಾಲೋಪದಿಂದ ನಿನ್ನೆ ನಡೆದ ಘಟನೆ ಸಂಬಂಧಿಸಿದಂತೆ ಮೈಸೂರು-ಕೊಡಗು ಸಂಸದ ಪ್ರತಾಪ್‌ ಸಿಂಹ ಅವರನ್ನು ಈ ಕೂಡಲೆ ಸಂಸದ ಸ್ಥಾನದಿಂದ ವಜಾಗೊಳಿಸಬೇಕು ಎಂದು ಬಿಜೆಪಿ ಎಂಎಲ್‌ಸಿ ಹೆಚ್‌.ವಿಶ್ವನಾಥ್‌ ಆಗ್ರಹಿಸಿದ್ದಾರೆ.

ಘಟನೆ ಬಗ್ಗೆ  ಆಂದೋಲನ ಪತ್ರಿಕೆಗೆ ಪ್ರತಿಕ್ರಿಯೆ ನೀಡಿದ ಹೆಚ್.ವಿಶ್ವನಾಥ್‌, ನಿನ್ನೆ ಸಂಸತ್‌ನಲ್ಲಿ ನಡೆದ ಘಟನೆ ಖಂಡನೀಯ. ದೇಶದಲ್ಲೇ ಅತೀ ಹೆಚ್ಚು ಭದ್ರತೆ ಇರುವ ಸ್ಥಳದಲ್ಲೇ ಭದ್ರತಾಲೋಪವಾಗಿರುವುದು ವಿಪರ್ಯಾಸ ಎಂದಿದ್ದಾರೆ.

ಜವಬ್ಧಾರಿಯುತ ಸಂಸತ್‌ ಸದಸ್ಯರು ಯಾರಿಗೆ ಪಾಸ್‌ ನೀಡಬೇಕು ಎಂಬುದರ ಬಗ್ಗೆ ಸರಿಯಾದ ರೀತಿಯಲ್ಲಿ ತೀರ್ಮಾನ ಕೈಗೊಳ್ಳದಿದ್ದರೇ ಏನೆಲ್ಲಾ ಅನಾಹುತಗಳು ಆಗಬಹುದು ಎಂಬುದಕ್ಕೆ ನಿನ್ನೆ ನಡೆದ ಘಟನೆಯೇ ಸಾಕ್ಷಿ. ನಮ್ಮೂರಿನವರೇ ಆದಂತ ಸಂಸದ ಪ್ರತಾಪ್‌ ಸಿಂಹ, ಪಾಸ್‌ ನೀಡುವಂತ ಸಂದರ್ಭದಲ್ಲಿ ಅವರ ಪೂರ್ವಪರಗಳನ್ನು ತಿಳಿದಿರಬೇಕು .ನಾನೂ ಕೂಡ ಒಬ್ಬ ಸಂಸತ್‌ ಸದಸ್ಯನಾಗಿ ಕೆಲಸ ಮಾಡಿದವನು, ಒಬ್ಬ ಸಂಸತ್‌ ಸದಸ್ಯನಿಗೆ, ಸಂಸತ್‌ಗೆ ಭೇಟಿ ನೀಡುವವರಿಗೆ ಪಾಸ್‌ ನೀಡುವ ಅಧಿಕಾರವನ್ನು ನೀಡಲಾಗಿದೆ.

ಆದರೇ ಆ ಅಧಿಕಾರವನ್ನು ಸರಿಯಾಗಿ ಉಪಯೋಗ ಮಾಡಿಕೊಳ್ಳಬೇಕು. ಅದನ್ನು ಬಿಟ್ಟು ಎಲ್ಲರಿಗೂ ಒಳಗೆ ಪ್ರವೇಶ ನೀಡಿದರೆ ಏನೆಲ್ಲಾ ಅನಾಹುತವಾಗಹುದು ಎಂಬುದಕ್ಕೆ ಇದೇ ಸಾಕ್ಷಿ. ಈ ಕೂಡಲೇ ಸಂಸದ ಪ್ಎಂರತಾಪ್ದ‌ ಸಿಂಹ ಅವರನ್ರುನು ಸಂಸದ ಸ್ಥಾನದಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿದರು.

ಪ್ರತಾಪ್‌ ಸಿಂಹಗೆ ಪರಿಚಯಸ್ಥ ಹುಡುಗ:
ನಿನ್ನೆ ಸಂಸತ್‌ನಲ್ಲಿ ನಿರ್ಮಾಣವಾದ ಆತಂಕಕಾರಿ ಘಟನೆಯ ಆರೋಪಿಯಾಗಿರುವ ಮೈಸೂರಿನ ಹುಡುಗ ಮನೋರಂಜನ್‌ ಸಂಸದ ಪ್ರತಾಪ್‌ ಸಿಂಹ ಅವರಿಗೆ ತೀರ ಹತ್ತಿರದ ಒಡನಾಡಿ. ಈ ಬಗ್ಗೆ ಮನೋರಂಜನ್‌ ತಂದೆಯೇ ಹೇಳಿಕೆ ನೀಡಿದ್ದಾರೆ. ಆ ಹುಡುಗನ ನಡವಳಿಕೆ ಬಗ್ಗೆ ಪ್ರತಾಪ್‌ ಸಿಂಹರಿಗೆ ಚೆನ್ನಾಗಿಯೇ ತಿಳಿದಿರುತ್ತದೆ. ಒಂದು ವೇಳೆ ಪ್ರತಾಪ್‌ ಸಿಂಹ ಆ ಹುಡುಗ ಪರಿಚಯ ಇಲ್ಲ ಎಂದರೇ ಅದು ಶುದ್ಧ ಸುಳ್ಳು ಎಂದರು.

ಸಂಸತ್‌ನಲ್ಲಿ ಅಧಿಕಾರಿಗಳ  ಸಮಸ್ಯೆ: ಭದ್ರತೆಗೆ  ಸಂಬಂಧಿಸಿದಂತೆ ಸಂಸತ್‌ ಭವನದಲ್ಲಿ ಕೆಳ ಹಂತದ ಅಧಿಕಾರಿಗಳ ಕೊರತೆ ಇದೆ. ಮೇಲಧಿಕಾರಿಗಳು ಹೆಚ್ಚಾಗಿದ್ದಾರೆ ಹೊರತು ಕೆಳಹಂತದ ಅಧಿಕಾರಿಗಳು ಕಡಿಮೆ. ಕಾಯುವವರಿಗಿಂತಾ, ಕಾಯುವವರನ್ನು ಕಾಯುವ ಅಧಿಕಾರಿಗಳಿದ್ದಾರೆ. ಭದ್ರತಾಲೋಪಕ್ಕೆ ಇದೂ ಒಂದು ಕಾರಣವಾಗಿದೆ ಎಂದು ಹೆಚ್‌.ವಿಶ್ವನಾಥ್‌ ಆರೋಪಿಸಿದರು

ಸರ್ಕಾರದ ಮೇಲೆ ಜನರಿಗೆ ಅಪನಂಬಿಕೆ:  ಈ ರೀರತಿಯ ಘಟನೆಗಳು ಪದೇ ಪದೇ ಆಗಿದ್ದರೂ ಮತ್ತೆ ಅದೇ ತಪ್ಪುಗಳನ್ನು ಮಾಡುತ್ತಿದ್ದೇವೆ. ಸಾವಿರಾರು ಕೋಟಿ ಕರ್ಚು ಮಾಡಿ ಕಟ್ಟಿರುವ ನೂತನ ಸಂಸತ್‌ ಭವನವನ್ನು ಇಂತಹ ಮನಸ್ಥಿತಿ ಇರುವ ಯುವಕರು ಒಂದು ವೇಳೆ ಒಡೆದು ಹಾಕಿದರೆ, ಸಂಸತ್‌ ಭವನವನ್ನೇ ರಕ್ಷಣೆ ಮಾಡದಂತ ಸರ್ಕಾರ ಭಾರತೀಯರಿಗೆ ಯಾವ ರೀತಿ ರಕ್ಷಣೆ ನೀಡುತ್ತದೆ ಎಂಬ ಪ್ರಶ್ನೆ ಜನರಲ್ಲಿ ಮೂಡುತ್ತದೆ. ಈಗಾಗಲೇ ಆ ರೀತಿಯ ಪ್ರಶ್ನೆ ಜನರಲ್ಲಿ ಮೂಡಿದೆ ಎಂದರು.

 

andolanait

Recent Posts

16 ರಾಜ್ಯಗಳಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ ಆದೇಶ

ನವದೆಹಲಿ: ಭಾರತ ಚುನಾವಣಾ ಆಯೋಗವು ಕರ್ನಾಟಕ ಸೇರಿದಂತೆ 16 ರಾಜ್ಯಗಳು ಮತ್ತು ಮೂರು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತದಾರರ ಪಟ್ಟಿಯ ವಿಶೇಷ…

32 mins ago

ಹನೂರು: ಮಹದೇಶ್ವರ ಸ್ವಾಮಿಗೆ ನೆರವೇರಿದ ಮಹಾರುದ್ರಾಭಿಷೇಕ ಪೂಜೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹದೇಶ್ವರ ಸ್ವಾಮಿಗೆ ಗುರುವಾರ…

47 mins ago

ಭೂಗತ ಕೇಬಲ್‌ ಕಾಮಗಾರಿ ; ಯೋಜನೆಯ ಪ್ರಗತಿ ಕುರಿತು ಮಾಹಿತಿ ಪಡೆದ ಸಿಎಂ

ಸೆಸ್ಕ್‌ ವತಿಯಿದ ಮೈಸೂರು ನಗರದಲ್ಲಿ ಕೈಗೊಂಡಿರುವ ಯೋಜನೆ ಮೈಸೂರು : ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ (ಸೆಸ್ಕ್)ದಿಂದ ಮೈಸೂರು…

2 hours ago

ಕೇರಳಂ | ನೂತನ ಮುಖ್ಯಮಂತ್ರಿಯಾಗಿ ವಿ.ಡಿ ಸತೀಶನ್ ಆಯ್ಕೆ

ಕೇರಳಂ : ಕೇರಳದ ನೂತನ ಮುಖ್ಯಮಂತ್ರಿಯಾಗಿ ವಿ.ಡಿ.ಸತೀಶನ್ ಆಯ್ಕೆಯಾಗಿದ್ದಾರೆ. ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ಎಐಸಿಸಿ…

3 hours ago

ಧಾರ್ಮಿಕ ಸಂಕೇತಗಳನ್ನು ವಿದ್ಯಾರ್ಥಿಗಳು ಧರಿಸಬಹುದು : ಸಿಎಂ ಸಿದ್ದರಾಮಯ್ಯ

ಮೈಸೂರು : ಪ್ರಾಥಮಿಕ ತರಗತಿಯಿಂದ 12 ನೇ ತರಗತಿಯವರೆಗೆ ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು. ಈಗಾಗಲೇ ಸಾಂಪ್ರದಾಯಿಕವಾಗಿ ಅನುಸರಿಸುವ…

3 hours ago

ಚೀನಾವನ್ನು ಹಾಡಿ ಹೊಗಳಿದ ಟ್ರಂಪ್‌ : ಜಿನ್‌ಪಿಂಗ್‌ ಪ್ರತಿಕ್ರಿಯೆ ಹೇಗಿತ್ತು?

ಬೀಚಿಂಗ್ : ಚೀನಾದ ವಿರುದ್ಧ ಬಹಿರಂಗವಾಗಿಯೇ ಆಕ್ರೋಶ ಹೊರಹಾಕುತ್ತಿದ್ದ ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಈಗ ಚೀನಾವನ್ನು ಹಾಡಿ ಹೊಗಳಿದ್ದಾರೆ.…

4 hours ago