ಇನ್ನೊಂದು ವಾರದಲ್ಲಿ ರೈತರ ಖಾತೆಗೆ ಬರಪರಿಹಾರದ ಮೊದಲ ಕಂತಿನ ಹಣ ಜಮೆಯಾಗಲಿದೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ತಿಳಿಸಿದ್ದಾರೆ.
ರಾಯಚೂರಿನಲ್ಲಿ ಮಾತನಾಡಿದ ಅವರು ಈ ಹಿಂದೆ ಬರಪರಿಹಾರ ಹಾಗೂ ಅತಿವೃಷ್ಟಿ ಪರಿಹಾರ ನೀಡುವಲ್ಲಿ ಸಾಕಷ್ಟು ನ್ಯೂನತೆಗಳಿದ್ದವು. ಬೆಳೆ ಬೆಳೆಯದ ಎಷ್ಟೋ ಜನರಿಗೆ ಪರಿಹಾರದ ಹಣ ಸಿಗುತ್ತಿತ್ತು. ನಿಜವಾಗಿಯೂ ಬೆಲೆಗಳು ಹಾನಿಯಾದ ರೈತನಿಗೆ ಪರಿಹಾರ ಸಿಗುತ್ತಿರಲಿಲ್ಲ. ಈ ಹಿಂದಿನ ಸರ್ಕಾರ ಇದ್ದಾಗ ಹಾಗೂ ನಾನು ಈ ಹಿಂದೆ ಕೃಷಿ ಸಚಿವನಾಗಿದ್ದಾಗಲೂ ಇಂತಹದ್ದನ್ನು ನೋಡಿದ್ದೇನೆ. ಯಾರದ್ದೋ ಜಮೀನು, ಇನ್ಯಾರದ್ದೋ ಖಾತೆಗೆ ಹಣ ಜಮಾವಣೆಯಾಗಿದೆ. ರೈತರು ಬೆಳೆದಿದ್ದ ಬೆಳೆಯೇ ಬೇರೆ, ಅವರಿಗೆ ಬಂದಿದ್ದ ಪರಿಹಾರದ ಹಣವೇ ಬೇರೆ. ಅಧಿಕಾರಿಗಳು ಬೆಲೆ ಮಾಹಿತಿ ಸಂಗ್ರಹಿಸುವಾಗ ತಪ್ಪುಗಳಾಗುತ್ತಿದ್ದವು. ಇದೆಲ್ಲವನ್ನೂ ಸರಿ ಮಾಡಿ ಬೆಳೆ ಸಮೀಕ್ಷೆ ಆಧಾರದಲ್ಲಿ ಹಣ ಪಾವತಿ ಮಾಡಲಾಗಲಿದೆ ಎಂದು ತಿಳಿಸಿದರು.
ಇದನ್ನು ಸರಿಪಡಿಸಲು ಎರಡು ತಿಂಗಳು ತಡವಾಗಿದೆ. ಮುಂದಿನ ಒಂದು ವಾರದಲ್ಲಿ ಮೊದಲ ಕಂತಿನ ಹಣ ಜಮಾ ಆಗಲಿದೆ. 12 ಲಕ್ಷ ರೈತರಿಗೆ ಹಣ ಪಾವತಿ ಮಾಡಲು ಆರ್ಬಿಐಗೆ ಪೇಮೆಂಟ್ ಆರ್ಡರ್ ಕಳುಹಿಸಿದ್ದೇವೆ. ಇನ್ನೂ 20 ಲಕ್ಷ ರೈತರ ಪೇಮೆಂಟ್ ಆರ್ಡರ್ ಅನ್ನು ಮುಂದಿನ ದಿನಗಳಲ್ಲಿ ಕಳುಹಿಸಿದ್ದೇವೆ ಎಂದು ಸಚಿವರು ತಿಳಿಸಿದ್ದಾರೆ. ಕೇಂದ್ರ ಸರ್ಕಾರಕ್ಕೆ ಬರಪರಿಹಾರ ಹಣಕ್ಕಾಗಿ ಮನವಿ ಮಾಡಿದ್ದು, ಇನ್ನೂ ಸಹ ಹಣ ಬಂದಿಲ್ಲ. ಹೀಗಾಗಿ ರಾಜ್ಯ ಸರ್ಕಾರವೇ 2000 ಹಣವನ್ನು ನೀಡಲು ಮುಂದಾಗಿದೆ ಎಂದೂ ಸಹ ತಿಳಿಸಿದರು.
ಮೈಸೂರು : ನಗರವನ್ನು ಡ್ರಗ್ಸ್ ಜಾಲಮುಕ್ತ ಮಾಡಬೇಕು ಎಂಬ ತೀರ್ಮಾನಕ್ಕೆ ಬಂದಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು…
ಮೈಸೂರು : ಸ್ವಚ್ಛತೆಗೆ ಸಂಬಂಧಿಸಿದಂತೆ ಮತ್ತೆ ಒಂದನೇ ಸ್ಥಾನ ಪಡೆಯುವ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಸಲುವಾಗಿ ನಗರಪಾಲಿಕೆ ವತಿಯಿಂದ…
ಬೆಂಗಳೂರು : ಮಾರ್ಚ್ ಅಂತ್ಯದೊಳಗೆ ಎಲ್ಲಾ ಗ್ರಾಮ ಪಂಚಾಯಿತಿ ಸದಸ್ಯರ ಅಧಿಕಾರ ಅವಧಿ ಮುಕ್ತಾಯವಾಗಲಿರುವುದರಿಂದ ಗ್ರಾಮ ಪಂಚಾಯಿತಿ ಚುನಾವಣೆಗೆ ಸಿದ್ಧತೆ…
19 ಬೈಕ್, ಚಿನ್ನಾಭರಣ ಸೇರಿದಂತೆ 34 ಲಕ್ಷ ರೂ.ಮೌಲ್ಯದ ವಸ್ತುಗಳು ವಶ : ಎಸ್ಪಿ ಶೋಭಾರಾಣಿ ಮಂಡ್ಯ : ಮಳವಳ್ಳಿಯಲ್ಲಿ…
ಮಂಡ್ಯ : ನಗರದ ಮಹಿಳಾ ಸರ್ಕಾರಿ ಕಾಲೇಜು (ಸ್ವಾಯುತ್ತ) ಶೈಕ್ಷಣಿಕ ಕ್ಷೇತ್ರದಲ್ಲಿ ಹೊಸ ದಾಖಲೆ ನಿರ್ಮಿಸಿದ್ದು 2025-26ನೇ ಸಾಲಿನ ವಿವಿಧ…
ಬೆಂಗಳೂರು : ಮಂಡ್ಯ ಜಿಲ್ಲೆ ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ಆದಷ್ಟು ಶೀಘ್ರವಾಗಿ ಮುಕ್ತಾಯಗೊಳಿಸುವಂತೆ ಕೃಷಿ ಸಚಿವರು…