ಇನ್ನೊಂದು ವಾರದಲ್ಲಿ ರೈತರ ಖಾತೆಗೆ ಬರಪರಿಹಾರದ ಮೊದಲ ಕಂತಿನ ಹಣ ಜಮೆಯಾಗಲಿದೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ತಿಳಿಸಿದ್ದಾರೆ.
ರಾಯಚೂರಿನಲ್ಲಿ ಮಾತನಾಡಿದ ಅವರು ಈ ಹಿಂದೆ ಬರಪರಿಹಾರ ಹಾಗೂ ಅತಿವೃಷ್ಟಿ ಪರಿಹಾರ ನೀಡುವಲ್ಲಿ ಸಾಕಷ್ಟು ನ್ಯೂನತೆಗಳಿದ್ದವು. ಬೆಳೆ ಬೆಳೆಯದ ಎಷ್ಟೋ ಜನರಿಗೆ ಪರಿಹಾರದ ಹಣ ಸಿಗುತ್ತಿತ್ತು. ನಿಜವಾಗಿಯೂ ಬೆಲೆಗಳು ಹಾನಿಯಾದ ರೈತನಿಗೆ ಪರಿಹಾರ ಸಿಗುತ್ತಿರಲಿಲ್ಲ. ಈ ಹಿಂದಿನ ಸರ್ಕಾರ ಇದ್ದಾಗ ಹಾಗೂ ನಾನು ಈ ಹಿಂದೆ ಕೃಷಿ ಸಚಿವನಾಗಿದ್ದಾಗಲೂ ಇಂತಹದ್ದನ್ನು ನೋಡಿದ್ದೇನೆ. ಯಾರದ್ದೋ ಜಮೀನು, ಇನ್ಯಾರದ್ದೋ ಖಾತೆಗೆ ಹಣ ಜಮಾವಣೆಯಾಗಿದೆ. ರೈತರು ಬೆಳೆದಿದ್ದ ಬೆಳೆಯೇ ಬೇರೆ, ಅವರಿಗೆ ಬಂದಿದ್ದ ಪರಿಹಾರದ ಹಣವೇ ಬೇರೆ. ಅಧಿಕಾರಿಗಳು ಬೆಲೆ ಮಾಹಿತಿ ಸಂಗ್ರಹಿಸುವಾಗ ತಪ್ಪುಗಳಾಗುತ್ತಿದ್ದವು. ಇದೆಲ್ಲವನ್ನೂ ಸರಿ ಮಾಡಿ ಬೆಳೆ ಸಮೀಕ್ಷೆ ಆಧಾರದಲ್ಲಿ ಹಣ ಪಾವತಿ ಮಾಡಲಾಗಲಿದೆ ಎಂದು ತಿಳಿಸಿದರು.
ಇದನ್ನು ಸರಿಪಡಿಸಲು ಎರಡು ತಿಂಗಳು ತಡವಾಗಿದೆ. ಮುಂದಿನ ಒಂದು ವಾರದಲ್ಲಿ ಮೊದಲ ಕಂತಿನ ಹಣ ಜಮಾ ಆಗಲಿದೆ. 12 ಲಕ್ಷ ರೈತರಿಗೆ ಹಣ ಪಾವತಿ ಮಾಡಲು ಆರ್ಬಿಐಗೆ ಪೇಮೆಂಟ್ ಆರ್ಡರ್ ಕಳುಹಿಸಿದ್ದೇವೆ. ಇನ್ನೂ 20 ಲಕ್ಷ ರೈತರ ಪೇಮೆಂಟ್ ಆರ್ಡರ್ ಅನ್ನು ಮುಂದಿನ ದಿನಗಳಲ್ಲಿ ಕಳುಹಿಸಿದ್ದೇವೆ ಎಂದು ಸಚಿವರು ತಿಳಿಸಿದ್ದಾರೆ. ಕೇಂದ್ರ ಸರ್ಕಾರಕ್ಕೆ ಬರಪರಿಹಾರ ಹಣಕ್ಕಾಗಿ ಮನವಿ ಮಾಡಿದ್ದು, ಇನ್ನೂ ಸಹ ಹಣ ಬಂದಿಲ್ಲ. ಹೀಗಾಗಿ ರಾಜ್ಯ ಸರ್ಕಾರವೇ 2000 ಹಣವನ್ನು ನೀಡಲು ಮುಂದಾಗಿದೆ ಎಂದೂ ಸಹ ತಿಳಿಸಿದರು.
ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…
ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್ಪೋಸ್ಟ್ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…