ಇನ್ನೊಂದು ವಾರದಲ್ಲಿ ರೈತರ ಖಾತೆಗೆ ಬರಪರಿಹಾರದ ಮೊದಲ ಕಂತಿನ ಹಣ ಜಮೆಯಾಗಲಿದೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ತಿಳಿಸಿದ್ದಾರೆ.
ರಾಯಚೂರಿನಲ್ಲಿ ಮಾತನಾಡಿದ ಅವರು ಈ ಹಿಂದೆ ಬರಪರಿಹಾರ ಹಾಗೂ ಅತಿವೃಷ್ಟಿ ಪರಿಹಾರ ನೀಡುವಲ್ಲಿ ಸಾಕಷ್ಟು ನ್ಯೂನತೆಗಳಿದ್ದವು. ಬೆಳೆ ಬೆಳೆಯದ ಎಷ್ಟೋ ಜನರಿಗೆ ಪರಿಹಾರದ ಹಣ ಸಿಗುತ್ತಿತ್ತು. ನಿಜವಾಗಿಯೂ ಬೆಲೆಗಳು ಹಾನಿಯಾದ ರೈತನಿಗೆ ಪರಿಹಾರ ಸಿಗುತ್ತಿರಲಿಲ್ಲ. ಈ ಹಿಂದಿನ ಸರ್ಕಾರ ಇದ್ದಾಗ ಹಾಗೂ ನಾನು ಈ ಹಿಂದೆ ಕೃಷಿ ಸಚಿವನಾಗಿದ್ದಾಗಲೂ ಇಂತಹದ್ದನ್ನು ನೋಡಿದ್ದೇನೆ. ಯಾರದ್ದೋ ಜಮೀನು, ಇನ್ಯಾರದ್ದೋ ಖಾತೆಗೆ ಹಣ ಜಮಾವಣೆಯಾಗಿದೆ. ರೈತರು ಬೆಳೆದಿದ್ದ ಬೆಳೆಯೇ ಬೇರೆ, ಅವರಿಗೆ ಬಂದಿದ್ದ ಪರಿಹಾರದ ಹಣವೇ ಬೇರೆ. ಅಧಿಕಾರಿಗಳು ಬೆಲೆ ಮಾಹಿತಿ ಸಂಗ್ರಹಿಸುವಾಗ ತಪ್ಪುಗಳಾಗುತ್ತಿದ್ದವು. ಇದೆಲ್ಲವನ್ನೂ ಸರಿ ಮಾಡಿ ಬೆಳೆ ಸಮೀಕ್ಷೆ ಆಧಾರದಲ್ಲಿ ಹಣ ಪಾವತಿ ಮಾಡಲಾಗಲಿದೆ ಎಂದು ತಿಳಿಸಿದರು.
ಇದನ್ನು ಸರಿಪಡಿಸಲು ಎರಡು ತಿಂಗಳು ತಡವಾಗಿದೆ. ಮುಂದಿನ ಒಂದು ವಾರದಲ್ಲಿ ಮೊದಲ ಕಂತಿನ ಹಣ ಜಮಾ ಆಗಲಿದೆ. 12 ಲಕ್ಷ ರೈತರಿಗೆ ಹಣ ಪಾವತಿ ಮಾಡಲು ಆರ್ಬಿಐಗೆ ಪೇಮೆಂಟ್ ಆರ್ಡರ್ ಕಳುಹಿಸಿದ್ದೇವೆ. ಇನ್ನೂ 20 ಲಕ್ಷ ರೈತರ ಪೇಮೆಂಟ್ ಆರ್ಡರ್ ಅನ್ನು ಮುಂದಿನ ದಿನಗಳಲ್ಲಿ ಕಳುಹಿಸಿದ್ದೇವೆ ಎಂದು ಸಚಿವರು ತಿಳಿಸಿದ್ದಾರೆ. ಕೇಂದ್ರ ಸರ್ಕಾರಕ್ಕೆ ಬರಪರಿಹಾರ ಹಣಕ್ಕಾಗಿ ಮನವಿ ಮಾಡಿದ್ದು, ಇನ್ನೂ ಸಹ ಹಣ ಬಂದಿಲ್ಲ. ಹೀಗಾಗಿ ರಾಜ್ಯ ಸರ್ಕಾರವೇ 2000 ಹಣವನ್ನು ನೀಡಲು ಮುಂದಾಗಿದೆ ಎಂದೂ ಸಹ ತಿಳಿಸಿದರು.
ನವದೆಹಲಿ : ಸ್ಲೀಪರ್ ಬಸ್ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯ ಮೇಲೆ ಮೂಹಿಕ ಅತ್ಯಾಚಾರ ಎಸಗಿರುವ ಘಟನೆ ದೆಹಲಿಯ ನಂಗ್ಲೋಯಿಯಲ್ಲಿ ನಡೆದಿದೆ. ಬಸ್ಸಿನಲ್ಲಿ…
ಶಿಥಿಲಗೊಂಡಿರುವ ಸುಮಾರು 130 ವರ್ಷ ಇತಿಹಾಸ ಹೊಂದಿರುವ ಕಟ್ಟಡ ಕೆ.ಪಿ.ಮದನ್ ಮೈಸೂರು : ಪುಟ್ಟದಾದರೂ ವಿಶಿಷ್ಟ ವಾಸ್ತು ಶೈಲಿಯಿಂದ ಗಮನಸೆಳೆಯುವ…
ರಾಮನಗರ: ಇಂದು ಬೆಳಿಗ್ಗೆ ಹೃದಯಾಘಾತದಿಂದ ನಿಧನರಾಗಿದ್ದ ನಟ ದಿಲೀಪ್ ರಾಜ್ ಅವರ ಅಂತ್ಯಕ್ರಿಯೆ ಲಿಂಗಾಯತ ಸಂಪ್ರದಾಯದಂತೆ ನೆರವೇರಿತು. ರಾಮನಗರ ತಾಲ್ಲೂಕಿನ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಗೋಪಿನಾಥಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಲಂಬಾಡಿ ಗ್ರಾಮದಲ್ಲಿನ ಪುರಾತನ…
ನವದೆಹಲಿ: ಕಾಂಗ್ರೆಸ್ ಹಿರಿಯ ನಾಯಕಿ ಸೋನಿಗಾ ಗಾಂಧೀ ಅವರು ನಿಯಮಿತ ವೈದ್ಯಕೀಯ ತಪಾಸಣೆಗೆ ತೆರಳಿದ್ದರು. ಇದೀಗ ಆಸ್ಪತ್ರೆಯಿಂದ ಮನೆಗೆ ಮರಳಿದ್ದಾರೆ.…