Real Illegalities Happened Under Congress Leadership: BJP State President B.Y. Vijayendra
ಬೆಂಗಳೂರು: ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ನೆಲೆಸಿರುವ ಅಕ್ರಮ ವಲಸಿಗರಿಗೆ ಸರ್ಕಾರದ ವತಿಯಿಂದ ಮನೆ ನಿರ್ಮಾಣ ಮಾಡಿಕೊಡಲು ಅವಕಾಶ ಕೊಡುವುದಿಲ್ಲ. ಎಲ್ಲಾ ಹೋರಾಟಕ್ಕೂ ಸಿದ್ಧರಾಗಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು, ನಮ್ಮ ಕನ್ನಡಿಗರಿಗೆ ನಿವೇಶನ ಸಿಗಬೇಕು. ಅದನ್ನು ಹೊರತುಪಡಿಸಿ ಬೇರೆ ರಾಜ್ಯಗಳಿಂದ ಇಲ್ಲವೇ ಹೊರ ದೇಶದಿಂದ ಬಂದವರಿಗೆ ನಿವೇಶನ ಕೊಟ್ಟರೆ ನಾವು ಸುಮ್ಮನಿರಬೇಕೇ? ಎಂದು ಪ್ರಶ್ನೆ ಮಾಡಿದರು.
ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ಮುಂದುವರೆಯುತ್ತದೆ. ಇದನ್ನು ಕೇವಲ ಬೆಂಗಳೂರಿಗೆ ಮಾತ್ರ ಸೀಮಿತಗೊಳಿಸುವುದಿಲ್ಲ. ರಾಜ್ಯಾದ್ಯಂತ ಉಗ್ರ ಹೋರಾಟ ಮಾಡುತ್ತೇವೆ. ರಾಜ್ಯದ ತೆರಿಗೆದಾರರ ಹಣದಲ್ಲಿ ಕಟ್ಟಿರುವ ಮನೆಗಳನ್ನು ಅಕ್ರಮ ವಲಸಿಗರಿಗೆ ಮನೆ ನಿರ್ಮಿಸಿಕೊಡಲು ಸರ್ಕಾರ ಹೊರಟಿದೆ ಎಂದು ವಾಗ್ದಾಳಿ ನಡೆಸಿದರು.
ಕರ್ನಾಟಕಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರೋ ಅಥವಾ ವೇಣುಗೋಪಾಲ್ ಅವರೋ ಎಂದು ಪ್ರಶ್ನೆ ಮಾಡಿದ ವಿಜಯೇಂದ್ರ, ಸಿಎಂಗೆ ಕುರ್ಚಿ ಉಳಿಸಿಕೊಳ್ಳುವ ಇರಾದೆ. ಡಿಸಿಎಂ ಡಿಕೆಶಿಗೆ ಕುರ್ಚಿ ಕಿತ್ತುಕೊಳ್ಳುವ ಆಸೆ. ಹೀಗಾಗಿ ನಿಜವಾದ ಸ್ಥಳೀಯರು ಈ ಸರ್ಕಾರದಲ್ಲಿ ಅನಾಥರಾಗಿದ್ದಾರೆ ಎಂದು ಕಿಡಿಕಾರಿದರು.
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…