ರಾಜ್ಯ

ಮೊದಲು ನಮ್ಮ ಕನ್ನಡಿಗರಿಗೆ ನಿವೇಶನ ಸಿಗಬೇಕು: ಬಿ.ವೈ.ವಿಜಯೇಂದ್ರ

ಬೆಂಗಳೂರು: ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ನೆಲೆಸಿರುವ ಅಕ್ರಮ ವಲಸಿಗರಿಗೆ ಸರ್ಕಾರದ ವತಿಯಿಂದ ಮನೆ ನಿರ್ಮಾಣ ಮಾಡಿಕೊಡಲು ಅವಕಾಶ ಕೊಡುವುದಿಲ್ಲ. ಎಲ್ಲಾ ಹೋರಾಟಕ್ಕೂ ಸಿದ್ಧರಾಗಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.

ಈ ಕುರಿತು ಮಾತನಾಡಿದ ಅವರು, ನಮ್ಮ ಕನ್ನಡಿಗರಿಗೆ ನಿವೇಶನ ಸಿಗಬೇಕು. ಅದನ್ನು ಹೊರತುಪಡಿಸಿ ಬೇರೆ ರಾಜ್ಯಗಳಿಂದ ಇಲ್ಲವೇ ಹೊರ ದೇಶದಿಂದ ಬಂದವರಿಗೆ ನಿವೇಶನ ಕೊಟ್ಟರೆ ನಾವು ಸುಮ್ಮನಿರಬೇಕೇ? ಎಂದು ಪ್ರಶ್ನೆ ಮಾಡಿದರು.

ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ಮುಂದುವರೆಯುತ್ತದೆ. ಇದನ್ನು ಕೇವಲ ಬೆಂಗಳೂರಿಗೆ ಮಾತ್ರ ಸೀಮಿತಗೊಳಿಸುವುದಿಲ್ಲ. ರಾಜ್ಯಾದ್ಯಂತ ಉಗ್ರ ಹೋರಾಟ ಮಾಡುತ್ತೇವೆ. ರಾಜ್ಯದ ತೆರಿಗೆದಾರರ ಹಣದಲ್ಲಿ ಕಟ್ಟಿರುವ ಮನೆಗಳನ್ನು ಅಕ್ರಮ ವಲಸಿಗರಿಗೆ ಮನೆ ನಿರ್ಮಿಸಿಕೊಡಲು ಸರ್ಕಾರ ಹೊರಟಿದೆ ಎಂದು ವಾಗ್ದಾಳಿ ನಡೆಸಿದರು.

ಕರ್ನಾಟಕಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರೋ ಅಥವಾ ವೇಣುಗೋಪಾಲ್ ಅವರೋ ಎಂದು ಪ್ರಶ್ನೆ ಮಾಡಿದ ವಿಜಯೇಂದ್ರ, ಸಿಎಂಗೆ ಕುರ್ಚಿ ಉಳಿಸಿಕೊಳ್ಳುವ ಇರಾದೆ. ಡಿಸಿಎಂ ಡಿಕೆಶಿಗೆ ಕುರ್ಚಿ ಕಿತ್ತುಕೊಳ್ಳುವ ಆಸೆ. ಹೀಗಾಗಿ ನಿಜವಾದ ಸ್ಥಳೀಯರು ಈ ಸರ್ಕಾರದಲ್ಲಿ ಅನಾಥರಾಗಿದ್ದಾರೆ ಎಂದು ಕಿಡಿಕಾರಿದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

2 hours ago

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

11 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

11 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

11 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

13 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

14 hours ago