ರಾಜ್ಯ

ಮೊದಲು ಮಲ್ಲಿಕಾರ್ಜುನ ಖರ್ಗೆ ಕುಟುಂಬಕ್ಕೆ ಪರಿಹಾರ ಕೊಡಿ: ವಿಜಯೇಂದ್ರ

ಕಲಬುರ್ಗಿ: ಮೊದಲು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ಕುಟುಂಬಕ್ಕೆ ಪರಿಹಾರ ಕೊಟ್ಟು ನಂತರ ರೈತರ ಸಂಕಷ್ಟಕ್ಕೂ ಸ್ಪಂದಿಸಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ವ್ಯಂಗ್ಯವಾಡಿದ್ದಾರೆ.

ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಮಲ್ಲಿಕಾರ್ಜುನ ಖರ್ಗೆ ಬಳಿ ರೈತರೊಬ್ಬರು ಬೆಳೆ ನಾಶವಾಗಿದೆ. ತೊಗರಿ ಬೆಳೆ ನಾಶವಾಗಿದೆ. 4 ಎಕರೆಗೆ ಪರಿಹಾರ ಕೊಡಿಸಿ ಎಂದು ಕೇಳಿದರೆ, ನನ್ನದೇ 40 ಎಕರೆ ಇದೆ, ನನ್ನ ಬೆಳೆಯೂ ಸಂಪೂರ್ಣ ನಾಶವಾಗಿದೆ. ಪರಿಹಾರ ಬಂದಿಲ್ಲ ಎನ್ನುತ್ತಿದ್ದಾರೆ. ಹೀಗಾಗಿ ಸರ್ಕಾರ ಮೊದಲು ಅವರ ಕುಟುಂಬಕ್ಕೆ ಪರಿಹಾರ ಕೊಟ್ಟು ನಂತರ ಸಂತ್ರಸ್ಥರಿಗೆ ಕೊಡಲಿ ಎಂದು ವ್ಯಂಗ್ಯವಾಡಿದರು.

ಎಕರೆಗೆ 25ರಿಂದ 30 ಸಾವಿರ ರೂ. ಪರಿಹಾರ ಕೊಡಬೇಕು. ಒಣಭೂಮಿಗೆ ಎನ್‍ಡಿಆರ್‌ಎಫ್‌ ನಿಯಮದಡಿ ಹೆಕ್ಟೇರ್ಗೆ 6 ಸಾವಿರ ರೂ. ಪರಿಹಾರ ಇತ್ತು. ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಎಲ್ಲ ಜಿಲ್ಲೆಗಳಿಗೆ ಪ್ರವಾಸ ಮಾಡಿ ಪ್ರವಾಹ ಪೀಡಿತರಿಗೆ ರಾಜ್ಯದಿಂದ ಎನ್‍ಡಿಆರ್‍ಎಫ್ ಮಾದರಿಯ ನೆರವು ನೀಡಿದ್ದರು. ಸಿದ್ದರಾಮಯ್ಯನವರಿಗೆ ರೈತರ ಬಗ್ಗೆ ಕಾಳಜಿ ಇಲ್ಲ ಎಂದು ಆರೋಪ ಮಾಡುತ್ತಿಲ್ಲ. ಆ ಕಾಳಜಿಯನ್ನು ತೋರಿಸಬೇಕು. ಸಂದಿಗ್ಧ ಪರಿಸ್ಥಿತಿಯಲ್ಲಿರುವ ರೈತರ ಬಗ್ಗೆ ಈಗ ನೀವು ಕಾಳಜಿ ತೋರಿಸದೇ ಇದ್ದರೆ ಇನ್ಯಾವಾಗ ಕಾಳಜಿ ತೋರಿಸುತ್ತೀರಿ ಎಂದು ಪ್ರಶ್ನಿಸಿದರು.

ಇದನ್ನು ಓದಿ : ಬಿಡದಿ ರೈತರ ಹೋರಾಟ; ಡಿಸಿಎಂ ಡಿಕೆಶಿ ವಿರುದ್ಧ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

ಇನ್ನು ಜಾತಿ ಸಮೀಕ್ಷೆ ಕುರಿತು ಪ್ರತಿಕ್ರಿಯೆ ನೀಡಿದ ವಿಜಯೇಂದ್ರ ಅವರು, ಮುಖ್ಯಮಂತ್ರಿಗಳು ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ. ಕೇಂದ್ರ ಸರ್ಕಾರದ ಜಾತಿ ಸಮೀಕ್ಷೆಯನ್ನೂ ವಿರೋಧಿಸುತ್ತೀರಾ ಎಂದು ಕೇಳಿದ್ದಾರೆ. ಕಾಂತರಾಜು ವರದಿಗೆ 180 ಕೋಟಿ ಖರ್ಚು ಮಾಡಿದ್ದೀರಲ್ಲವೇ? ನೀವೇ ಮುಖ್ಯಮಂತ್ರಿ ಇದ್ದರೂ ಅದನ್ನು ಅನುಷ್ಠಾನ ಮಾಡಿಲ್ಲವೇಕೆ ಎಂದು ಪ್ರಶ್ನಿಸಿದರು.

ಇವತ್ತು 500- 600 ಕೋಟಿ ಖರ್ಚು ಮಾಡಿ ಸಮೀಕ್ಷೆ ಮಾಡುವುದನ್ನು ಬಿಜೆಪಿ ವಿರೋಧಿಸಲು ಹೊರಟಿಲ್ಲ. ಸ್ವಾತಂತ್ರ್ಯ ನಂತರದಲ್ಲಿ ಹಿಂದಿನ ಕಾಂಗ್ರೆಸ್, ಯುಪಿಎ ಸರಕಾರವು ಜಾತಿ ಗಣತಿ ಕುರಿತು ಇಂಥ ದಿಟ್ಟ ನಿರ್ಧಾರ ಮಾಡಿರಲಿಲ್ಲ. ಮನಮೋಹನ್ ಸಿಂಗ್ ಅವರ ಸರಕಾರ ತೀರ್ಮಾನ ಮಾಡಿದರೂ ರಾಹುಲ್ ಗಾಂಧಿ ಅದನ್ನು ವಿರೋಧಿಸಿದ್ದರು ಎಂದು ದೂರಿದರು.

ಆಂದೋಲನ ಡೆಸ್ಕ್

Recent Posts

ಮಧ್ಯಪ್ರಾಚ್ಯ ಬಿಕ್ಕಟ್ಟು: ಕನ್ನಡಿಗರ ರಕ್ಷಣೆಗೆ ಕೇಂದ್ರ ಸಚಿವ ಜೈಶಂಕರ್‌ಗೆ ಮನವಿ

ನವದೆಹಲಿ: ಇಸ್ರೇಲ್-ಇರಾನ್‌ ಸಂಘರ್ಷ ಮುಂದುವರಿದಿರುವ ಹಿನ್ನೆಲೆಯಲ್ಲಿ ವಿಮಾನಗಳ ಹಾರಾಟ ಸಂಪೂರ್ಣವಾಗಿ ಬಂದ್‌ ಆಗಿದೆ. ಸೌದಿ ಅರೇಬಿಯಾ ಸೇರಿದಂತೆ ವಿವಿಧ ದೇಶಗಳಲ್ಲಿ…

1 hour ago

ಮುಂದುವರಿದ ಇರಾನ್‌-ಇಸ್ರೇಲ್‌ ಸಂಘರ್ಷ: ಬೆಂಗಳೂರಿನಲ್ಲಿ 17 ವಿಮಾನಗಳ ಹಾರಾಟ ರದ್ದು

ಬೆಂಗಳೂರು: ಇರಾನ್‌-ಇಸ್ರೇಲ್‌ ಯುದ್ಧ ಮತ್ತೆ ತೀವ್ರಗೊಂಡ ಪರಿಣಾಮ ಬೆಂಗಳೂರಿಗೆ ಆಗಮಿಸಬೇಕಿದ್ದ 8 ಮತ್ತು ನಿರ್ಗಮಿಸಬೇಕಿದ್ದ 9 ವಿಮಾನಗಳ ಹಾರಾಟ ರದ್ದಾಗಿದೆ.…

2 hours ago

ಡಿ.ಕೆ.ಶಿವಕುಮಾರ್‌ ಅತ್ಯಂತ ಯಶಸ್ವಿ ಅಧ್ಯಕ್ಷ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಕೆಪಿಸಿಸಿ ಅಧ್ಯಕ್ಷರಾಗಿ ಇವತ್ತಿಗೆ ಆರು ವರ್ಷಗಳಾಗಿದ್ದು, ಅತ್ಯಂತ ಯಶಸ್ವಿ ಅಧ್ಯಕ್ಷ ಎನಿಸಿಕೊಂಡಿದ್ದಾರೆ ಎಂದು ಸಚಿವೆ…

2 hours ago

ಸ್ಮೃತಿ ಇರಾನಿ ಕಾಣುತ್ತಿಲ್ಲ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ವ್ಯಂಗ್ಯ

ಬೆಂಗಳೂರು: ಅಡುಗೆ ಅನಿಲದ ಬೆಲೆ ಏರಿಕೆ ಮಾಡುವ ಮೂಲಕ ಮಹಿಳೆಯರಿಗೆ ಉಡುಗೊರೆ ನೀಡಿರುವ ಕೇಂದ್ರ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಲು ಬಯಸುವೆ.…

2 hours ago

ಮೃಗಾಲಯದ ಆನೆ ಅಭಿ ಮತ್ತಿಗೋಡಿನಲ್ಲಿ ಕೊನೆಯುಸಿರು

ಮೈಸೂರು: ನಾಗರಹೊಳೆ ವ್ಯಾಪ್ತಿಯ ಮತ್ತಿಗೋಡು ಆನೆ ಶಿಬಿರದಲ್ಲಿದ್ದ 23 ವರ್ಷದ ಜೂನಿಯರ್ ಅಭಿ ಆನೆ ಅನಾರೋಗ್ಯದಿಂದ ಮೃತಪಟ್ಟಿದೆ.‌ ನಾಗರಹೊಳೆ ರಾಷ್ಟ್ರೀಯ…

3 hours ago

ರಾಜ್ಯದ ಹಲವೆಡೆ ತಾಪಮಾನ ಹೆಚ್ಚಳ: ಹೀಟ್‌ ಸ್ಟ್ರೋಕ್‌ ಭೀತಿ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಬಿಸಿಲ ಝಳ ಹೆಚ್ಚುತ್ತಿದ್ದು, ಹೀಟ್‌ ಸ್ಟ್ರೋಕ್‌ ಭೀತಿ ಎದುರಾಗಿದೆ. ಹಲವೆಡೆ…

3 hours ago