ರಾಜ್ಯ

ಮೊದಲು ಮಲ್ಲಿಕಾರ್ಜುನ ಖರ್ಗೆ ಕುಟುಂಬಕ್ಕೆ ಪರಿಹಾರ ಕೊಡಿ: ವಿಜಯೇಂದ್ರ

ಕಲಬುರ್ಗಿ: ಮೊದಲು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ಕುಟುಂಬಕ್ಕೆ ಪರಿಹಾರ ಕೊಟ್ಟು ನಂತರ ರೈತರ ಸಂಕಷ್ಟಕ್ಕೂ ಸ್ಪಂದಿಸಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ವ್ಯಂಗ್ಯವಾಡಿದ್ದಾರೆ.

ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಮಲ್ಲಿಕಾರ್ಜುನ ಖರ್ಗೆ ಬಳಿ ರೈತರೊಬ್ಬರು ಬೆಳೆ ನಾಶವಾಗಿದೆ. ತೊಗರಿ ಬೆಳೆ ನಾಶವಾಗಿದೆ. 4 ಎಕರೆಗೆ ಪರಿಹಾರ ಕೊಡಿಸಿ ಎಂದು ಕೇಳಿದರೆ, ನನ್ನದೇ 40 ಎಕರೆ ಇದೆ, ನನ್ನ ಬೆಳೆಯೂ ಸಂಪೂರ್ಣ ನಾಶವಾಗಿದೆ. ಪರಿಹಾರ ಬಂದಿಲ್ಲ ಎನ್ನುತ್ತಿದ್ದಾರೆ. ಹೀಗಾಗಿ ಸರ್ಕಾರ ಮೊದಲು ಅವರ ಕುಟುಂಬಕ್ಕೆ ಪರಿಹಾರ ಕೊಟ್ಟು ನಂತರ ಸಂತ್ರಸ್ಥರಿಗೆ ಕೊಡಲಿ ಎಂದು ವ್ಯಂಗ್ಯವಾಡಿದರು.

ಎಕರೆಗೆ 25ರಿಂದ 30 ಸಾವಿರ ರೂ. ಪರಿಹಾರ ಕೊಡಬೇಕು. ಒಣಭೂಮಿಗೆ ಎನ್‍ಡಿಆರ್‌ಎಫ್‌ ನಿಯಮದಡಿ ಹೆಕ್ಟೇರ್ಗೆ 6 ಸಾವಿರ ರೂ. ಪರಿಹಾರ ಇತ್ತು. ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಎಲ್ಲ ಜಿಲ್ಲೆಗಳಿಗೆ ಪ್ರವಾಸ ಮಾಡಿ ಪ್ರವಾಹ ಪೀಡಿತರಿಗೆ ರಾಜ್ಯದಿಂದ ಎನ್‍ಡಿಆರ್‍ಎಫ್ ಮಾದರಿಯ ನೆರವು ನೀಡಿದ್ದರು. ಸಿದ್ದರಾಮಯ್ಯನವರಿಗೆ ರೈತರ ಬಗ್ಗೆ ಕಾಳಜಿ ಇಲ್ಲ ಎಂದು ಆರೋಪ ಮಾಡುತ್ತಿಲ್ಲ. ಆ ಕಾಳಜಿಯನ್ನು ತೋರಿಸಬೇಕು. ಸಂದಿಗ್ಧ ಪರಿಸ್ಥಿತಿಯಲ್ಲಿರುವ ರೈತರ ಬಗ್ಗೆ ಈಗ ನೀವು ಕಾಳಜಿ ತೋರಿಸದೇ ಇದ್ದರೆ ಇನ್ಯಾವಾಗ ಕಾಳಜಿ ತೋರಿಸುತ್ತೀರಿ ಎಂದು ಪ್ರಶ್ನಿಸಿದರು.

ಇದನ್ನು ಓದಿ : ಬಿಡದಿ ರೈತರ ಹೋರಾಟ; ಡಿಸಿಎಂ ಡಿಕೆಶಿ ವಿರುದ್ಧ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

ಇನ್ನು ಜಾತಿ ಸಮೀಕ್ಷೆ ಕುರಿತು ಪ್ರತಿಕ್ರಿಯೆ ನೀಡಿದ ವಿಜಯೇಂದ್ರ ಅವರು, ಮುಖ್ಯಮಂತ್ರಿಗಳು ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ. ಕೇಂದ್ರ ಸರ್ಕಾರದ ಜಾತಿ ಸಮೀಕ್ಷೆಯನ್ನೂ ವಿರೋಧಿಸುತ್ತೀರಾ ಎಂದು ಕೇಳಿದ್ದಾರೆ. ಕಾಂತರಾಜು ವರದಿಗೆ 180 ಕೋಟಿ ಖರ್ಚು ಮಾಡಿದ್ದೀರಲ್ಲವೇ? ನೀವೇ ಮುಖ್ಯಮಂತ್ರಿ ಇದ್ದರೂ ಅದನ್ನು ಅನುಷ್ಠಾನ ಮಾಡಿಲ್ಲವೇಕೆ ಎಂದು ಪ್ರಶ್ನಿಸಿದರು.

ಇವತ್ತು 500- 600 ಕೋಟಿ ಖರ್ಚು ಮಾಡಿ ಸಮೀಕ್ಷೆ ಮಾಡುವುದನ್ನು ಬಿಜೆಪಿ ವಿರೋಧಿಸಲು ಹೊರಟಿಲ್ಲ. ಸ್ವಾತಂತ್ರ್ಯ ನಂತರದಲ್ಲಿ ಹಿಂದಿನ ಕಾಂಗ್ರೆಸ್, ಯುಪಿಎ ಸರಕಾರವು ಜಾತಿ ಗಣತಿ ಕುರಿತು ಇಂಥ ದಿಟ್ಟ ನಿರ್ಧಾರ ಮಾಡಿರಲಿಲ್ಲ. ಮನಮೋಹನ್ ಸಿಂಗ್ ಅವರ ಸರಕಾರ ತೀರ್ಮಾನ ಮಾಡಿದರೂ ರಾಹುಲ್ ಗಾಂಧಿ ಅದನ್ನು ವಿರೋಧಿಸಿದ್ದರು ಎಂದು ದೂರಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

3 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

3 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

3 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

3 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

3 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

4 hours ago