ರಾಜ್ಯ

ಮೊದಲು ಮಲ್ಲಿಕಾರ್ಜುನ ಖರ್ಗೆ ಕುಟುಂಬಕ್ಕೆ ಪರಿಹಾರ ಕೊಡಿ: ವಿಜಯೇಂದ್ರ

ಕಲಬುರ್ಗಿ: ಮೊದಲು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ಕುಟುಂಬಕ್ಕೆ ಪರಿಹಾರ ಕೊಟ್ಟು ನಂತರ ರೈತರ ಸಂಕಷ್ಟಕ್ಕೂ ಸ್ಪಂದಿಸಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ವ್ಯಂಗ್ಯವಾಡಿದ್ದಾರೆ.

ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಮಲ್ಲಿಕಾರ್ಜುನ ಖರ್ಗೆ ಬಳಿ ರೈತರೊಬ್ಬರು ಬೆಳೆ ನಾಶವಾಗಿದೆ. ತೊಗರಿ ಬೆಳೆ ನಾಶವಾಗಿದೆ. 4 ಎಕರೆಗೆ ಪರಿಹಾರ ಕೊಡಿಸಿ ಎಂದು ಕೇಳಿದರೆ, ನನ್ನದೇ 40 ಎಕರೆ ಇದೆ, ನನ್ನ ಬೆಳೆಯೂ ಸಂಪೂರ್ಣ ನಾಶವಾಗಿದೆ. ಪರಿಹಾರ ಬಂದಿಲ್ಲ ಎನ್ನುತ್ತಿದ್ದಾರೆ. ಹೀಗಾಗಿ ಸರ್ಕಾರ ಮೊದಲು ಅವರ ಕುಟುಂಬಕ್ಕೆ ಪರಿಹಾರ ಕೊಟ್ಟು ನಂತರ ಸಂತ್ರಸ್ಥರಿಗೆ ಕೊಡಲಿ ಎಂದು ವ್ಯಂಗ್ಯವಾಡಿದರು.

ಎಕರೆಗೆ 25ರಿಂದ 30 ಸಾವಿರ ರೂ. ಪರಿಹಾರ ಕೊಡಬೇಕು. ಒಣಭೂಮಿಗೆ ಎನ್‍ಡಿಆರ್‌ಎಫ್‌ ನಿಯಮದಡಿ ಹೆಕ್ಟೇರ್ಗೆ 6 ಸಾವಿರ ರೂ. ಪರಿಹಾರ ಇತ್ತು. ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಎಲ್ಲ ಜಿಲ್ಲೆಗಳಿಗೆ ಪ್ರವಾಸ ಮಾಡಿ ಪ್ರವಾಹ ಪೀಡಿತರಿಗೆ ರಾಜ್ಯದಿಂದ ಎನ್‍ಡಿಆರ್‍ಎಫ್ ಮಾದರಿಯ ನೆರವು ನೀಡಿದ್ದರು. ಸಿದ್ದರಾಮಯ್ಯನವರಿಗೆ ರೈತರ ಬಗ್ಗೆ ಕಾಳಜಿ ಇಲ್ಲ ಎಂದು ಆರೋಪ ಮಾಡುತ್ತಿಲ್ಲ. ಆ ಕಾಳಜಿಯನ್ನು ತೋರಿಸಬೇಕು. ಸಂದಿಗ್ಧ ಪರಿಸ್ಥಿತಿಯಲ್ಲಿರುವ ರೈತರ ಬಗ್ಗೆ ಈಗ ನೀವು ಕಾಳಜಿ ತೋರಿಸದೇ ಇದ್ದರೆ ಇನ್ಯಾವಾಗ ಕಾಳಜಿ ತೋರಿಸುತ್ತೀರಿ ಎಂದು ಪ್ರಶ್ನಿಸಿದರು.

ಇದನ್ನು ಓದಿ : ಬಿಡದಿ ರೈತರ ಹೋರಾಟ; ಡಿಸಿಎಂ ಡಿಕೆಶಿ ವಿರುದ್ಧ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

ಇನ್ನು ಜಾತಿ ಸಮೀಕ್ಷೆ ಕುರಿತು ಪ್ರತಿಕ್ರಿಯೆ ನೀಡಿದ ವಿಜಯೇಂದ್ರ ಅವರು, ಮುಖ್ಯಮಂತ್ರಿಗಳು ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ. ಕೇಂದ್ರ ಸರ್ಕಾರದ ಜಾತಿ ಸಮೀಕ್ಷೆಯನ್ನೂ ವಿರೋಧಿಸುತ್ತೀರಾ ಎಂದು ಕೇಳಿದ್ದಾರೆ. ಕಾಂತರಾಜು ವರದಿಗೆ 180 ಕೋಟಿ ಖರ್ಚು ಮಾಡಿದ್ದೀರಲ್ಲವೇ? ನೀವೇ ಮುಖ್ಯಮಂತ್ರಿ ಇದ್ದರೂ ಅದನ್ನು ಅನುಷ್ಠಾನ ಮಾಡಿಲ್ಲವೇಕೆ ಎಂದು ಪ್ರಶ್ನಿಸಿದರು.

ಇವತ್ತು 500- 600 ಕೋಟಿ ಖರ್ಚು ಮಾಡಿ ಸಮೀಕ್ಷೆ ಮಾಡುವುದನ್ನು ಬಿಜೆಪಿ ವಿರೋಧಿಸಲು ಹೊರಟಿಲ್ಲ. ಸ್ವಾತಂತ್ರ್ಯ ನಂತರದಲ್ಲಿ ಹಿಂದಿನ ಕಾಂಗ್ರೆಸ್, ಯುಪಿಎ ಸರಕಾರವು ಜಾತಿ ಗಣತಿ ಕುರಿತು ಇಂಥ ದಿಟ್ಟ ನಿರ್ಧಾರ ಮಾಡಿರಲಿಲ್ಲ. ಮನಮೋಹನ್ ಸಿಂಗ್ ಅವರ ಸರಕಾರ ತೀರ್ಮಾನ ಮಾಡಿದರೂ ರಾಹುಲ್ ಗಾಂಧಿ ಅದನ್ನು ವಿರೋಧಿಸಿದ್ದರು ಎಂದು ದೂರಿದರು.

ಆಂದೋಲನ ಡೆಸ್ಕ್

Recent Posts

ನೀಟ್-ಯುಜಿ ಮರುಪರೀಕ್ಷೆ : ಪರೀಕ್ಷೆ ಬರೆದ 22 ಲಕ್ಷ ವಿದ್ಯಾರ್ಥಿಗಳು

ಹೊಸದಿಲ್ಲಿ : ದೇಶದಾದ್ಯಂತ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆದ ನೀಟ್-ಯುಜಿ ಮರುಪರೀಕ್ಷೆಯಲ್ಲಿ 22 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದರು. ದೇಶದ…

5 hours ago

ತಮಿಳುನಾಡು ಸೀಫುಡ್‌ ಘಟಕದಲ್ಲಿ ಅನಿಲ ಸೋರಿಕೆ ; 7 ಜನ ಸಾವು, ಹಲವರು ಗಂಭೀರ

ಚೆನ್ನೆ : ಇಲ್ಲಿನ ತಿರುವಳ್ಳೂರಿನಲ್ಲಿರುವ ಸೀಗಡಿ ಸಂಸ್ಕರಣಾ ಕಾರ್ಖಾನೆಯಲ್ಲಿ ಭಾನುವಾರ ಮಧ್ಯಾಹ್ನ ಅಮೋನಿಯಾ ಅನಿಲ ಸೋರಿಕೆಯಾಗಿ, ಏಳು ಮಂದಿ ಮಹಿಳಾ…

6 hours ago

ಬೆಂಗಾಳಿಗಳನ್ನು ಬಾಂಗ್ಲಾ ವಲಸಿಗರೆಂದು ಗ್ರಹಿಕೆ ; ಮೈಸೂರು ರೈಲ್ವೆ ನಿಲ್ದಾಣದಲ್ಲಿ ಕೆಲಕಾಲ ಆತಂಕ

ಆಧಾರ್‌ ಕಾರ್ಡ್‌ ಪರಿಶೀಲನೆ ನಂತರ ಶಂಕೆ ನಿವಾರಣೆ ಮೈಸೂರು : ಪಶ್ಚಿಮ ಬಂಗಾಳದಿಂದ ಬಂದವರನ್ನು ಬಾಂಗ್ಲಾ ದೇಶದ ನಿವಾಸಿಗಳೆಂದು ತಿಳಿದ…

7 hours ago

ಚಾ.ನಗರ | ಸಿದ್ದಲಿಂಗಪುರ ಬಳಿ ಹುಲಿ ದಾಳಿ ; 4 ಮೇಕೆಗಳು ಸಾವು

ರೈತರು, ದನಗಾಹಿಗಳಲ್ಲಿ ಆತಂಕ ಬೇಗ ಹುಲಿ ಸೆರೆ ಹಿಡಿಯಲು ಆಗ್ರಹ ಚಾಮರಾಜನಗರ : ತಾಲ್ಲೂಕಿನ ಸಿದ್ದಲಿಂಗಪುರದ ಸಮೀಪ ಭಾನುವಾರ ಮಧ್ಯಾಹ್ನ…

8 hours ago

ಕರ್ನಾಟಕದಲ್ಲಿ ಮುಂಗಾರು ವಿಳಂಬ: ಕಂಗಾಲಾದ ರೈತರು

ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ವಿಳಂಬವಾಗಿದ್ದು, ಇದು ಉತ್ಪಾದನೆಯ ಮೇಲೆ ಪರಿಣಾಮ ಬೀರಬಹುದು. ಕೃಷಿ ಇಲಾಖೆಯ ಅಧಿಕಾರಿಗಳು ಬಿತ್ತನೆ ಗುರಿಯ ಶೇಕಡಾ…

12 hours ago

ಇದು ಕೇವಲ ಆರಂಭ: ಮುಂದೆ ಹೋರಾಟ ದೊಡ್ಡಮಟ್ಟದಲ್ಲಿ ಇದೆ ಎಂದ ನಿಖಿಲ್‌ ಕುಮಾರಸ್ವಾಮಿ

ರಾಮನಗರ: ಟೌನ್‌ಶಿಪ್ ಯೋಜನೆ ವಿರೋಧಿಸಿ ಜೆಡಿಎಸ್‌ ಕೈಗೊಂಡಿರುವ ಕೈಗೊಂಡಿರುವ ಬೃಹತ್‌ ಪಾದಯಾತ್ರೆಯಲ್ಲಿ ಮಾತನಾಡಿದ ಯುವನಾಯಕ ನಿಖಿಲ್‌ ಕುಮಾರಸ್ವಾಮಿ ಇದು ಕೇವಲ…

12 hours ago