ರಾಜ್ಯ

ಕಲಬುರಗಿ ಸೇರಿ ಉತ್ತರದ ಜಿಲ್ಲೆಗಳಲ್ಲಿ ನೆರೆ ಹಾವಳಿ; ಉಸ್ತುವಾರಿ ಸಚಿವರ ವಿರುದ್ಧ ಜೆಡಿಎಸ್ ಕಿಡಿ

ಬೆಂಗಳೂರು : ಕಲಬುರಗಿ ಸೇರಿ ಉತ್ತರ ಕರ್ನಾಟಕದ ಹಲವಾರು ಜಿಲ್ಲೆಗಳಲ್ಲಿ ಮಳೆ ಮತ್ತು ನೆರೆ ಹಾನಿಯಿಂದ ಜನರು ಬಸವಳಿಯುತ್ತಿದ್ದರೂ ಜನತೆಯ ನೆರವಿಗೆ ಧಾವಿಸದ ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.

ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಜೆಡಿಎಸ್ ಪಕ್ಷವು, ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಉತ್ತರ ಕರ್ನಾಟಕ ಭಾಗದ ನೆರೆಪೀಡಿತ ಜಿಲ್ಲೆಗಳ ಉಸ್ತುವಾರಿ ಸಚಿವರುಗಳ ವಿರುದ್ಧ ಹರಿಹಾಯ್ದಿದೆ.

ಇದನ್ನೂ ಓದಿ:-ಅಟಾರ್ನಿ ಜನರಲ್‌ ಆಗಿ ಆರ್.ವೆಂಕಟರಮಣಿ ಮರುನೇಮಕ

ಉತ್ತರ ಕರ್ನಾಟಕ ಭಾಗದ ಉಸ್ತುವಾರಿ ಸಚಿವರೇ ಎಲ್ಲಿದ್ದೀರಿ? ಎಲ್ಲಿ ಮಾಯಾವಾಗಿದ್ದೀರಿ?
ಭೀಮಾ ನದಿಯ ಪ್ರವಾಹಕ್ಕೆ ಉತ್ತರ ಕರ್ನಾಟಕದ ಕಲಬುರಗಿ, ವಿಜಯಪುರ, ಬೀದರ್‌, ಕೊಪ್ಪಳ ಸೇರಿದಂತೆ ಹಲವು ಜಿಲ್ಲೆಗಳು ಸಂಪೂರ್ಣ ಮುಳುಗಡೆಯಾಗಿದ್ದು, ಜನ ನರಕಯಾತನೆ ಅನುಭವಿಸುತ್ತಿದ್ದಾರೆ. ಹಲವು ಜಿಲ್ಲೆಯಲ್ಲಿ ಸಾವು ನೋವುಗಳಾಗಿವೆ. ನೆರೆಯಿಂದ ಗ್ರಾಮಗಳಿಗೆ ಗ್ರಾಮಗಳೇ ಮುಳುಗಡೆ ಆಗಿವೆ. ರಸ್ತೆ, ಸೇತುವೆಗಳು ಮುಳುಗಿವೆ. ಕುಡಿಯುವ ನೀರು, ವಿದ್ಯುತ್ ಸಂಪರ್ಕ ವ್ಯತ್ಯಯವಾಗಿದೆ ಎಂದು ಜೆಡಿಎಸ್ ಕಳವಳ ವ್ಯಕ್ತಪಡಿಸಿದೆ.

ಅಪಾರ ಪ್ರಮಾಣದಲ್ಲಿ ಬೆಳೆ ನಾಶವಾಗಿದೆ. ಉಸ್ತುವಾರಿ ಮಂತ್ರಿಗಳ ಪತ್ತೆಯೇ ಇಲ್ಲ. ನಿಮ್ಮ ಜಿಲ್ಲೆಗಳು ಸಂಪೂರ್ಣ ಮುಳುಗಿರುವಾಗ ಎಲ್ಲಿ ಓಡಿ ಹೋಗಿದ್ದೀರಿ? ಜನರ ದುಃಖ, ಆರ್ತನಾದ ನಿಮಗೆ ಕೇಳುತ್ತಿಲ್ಲವೇ? ನೆರೆ ಸಂತ್ರಸ್ತರಿಗೆ ಆಶ್ರಯ ಕೇಂದ್ರಗಳನ್ನು ನಿರ್ಮಿಸಿ ಅಗತ್ಯ ಸೌಲಭ್ಯ ಕಲ್ಪಿಸಿ, ನೆರೆ ಹಾನಿಯಿಂದ ನಷ್ಟಕ್ಕೊಳಗಾದವರಿಗೆ ತ್ವರಿತವಾಗಿ ಪರಿಹಾರ ನೀಡಲು ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಪಕ್ಷ ಒತ್ತಾಯ ಮಾಡಿದೆ.

ಆಂದೋಲನ ಡೆಸ್ಕ್

Recent Posts

ಮೈಸೂರು ಜಿಲ್ಲೆಯಲ್ಲಿ ಸುರಿದ ಧಾರಾಕಾರ ಮಳೆ

ಮೈಸೂರು: ಮೈಸೂರು ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿದಿದ್ದು, ಭಾರೀ ಪ್ರಮಾಣದ ಹಾನಿಯಾಗಿದೆ. ಮೈಸೂರು ಜಿಲ್ಲೆಯಲ್ಲಿ ನಿನ್ನೆ ಸುರಿದ ಭಾರೀ ಮಳೆಯಿಂದಾಗಿ…

4 mins ago

ನಾಡಿನಾದ್ಯಂತ ಯುಗಾದಿ ಹಬ್ಬದ ಸಂಭ್ರಮ: ಹಳ್ಳಿಗಳಲ್ಲಿ ಹೊನ್ನೇರು ಕಟ್ಟಿ ಸಂಭ್ರಮಿಸಿದ ಅನ್ನದಾತರು

ಮೈಸೂರು: ರೈತರು ಸಡಗರದಿಂದ ಕೃಷಿ ಚಟುವಟಿಕೆ ಆರಂಭಿಸುವ ಮೊದಲ ಹೆಜ್ಜೆ ಯುಗಾದಿಯಾಗಿದ್ದು, ಜಿಲ್ಲೆಯ ಹಲವೆಡೆ ಅನ್ನದಾತರು ಹೊನ್ನೇರು ಕಟ್ಟಿ ಭೂಮಿ…

19 mins ago

ನಾಡಿನೆಲ್ಲೆಡೆ ಯುಗಾದಿ ಹಬ್ಬದ ಸಂಭ್ರಮ

ಮೈಸೂರು: ಇಂದು ನಾಡಿನೆಲ್ಲೆಡೆ ಯುಗಾದಿ ಹಬ್ಬದ ಸಂಭ್ರಮ ಮನೆಮಾಡಿದೆ. ಬೆಲೆ ಏರಿಕೆ, ಮಧ್ಯಪ್ರಾಚ್ಯ ಯುದ್ಧ ಭೀತಿಯ ನಡುವೆಯೂ ಜನರು ಸಾಂಪ್ರದಾಯಿಕವಾಗಿ…

30 mins ago

ಓದುಗರ ಪತ್ರ: ಮೈಸೂರಿನಲ್ಲಿ ಸುಸಜ್ಜಿತ ಫುಡ್ ಸ್ಟ್ರೀಟ್ ನಿರ್ಮಾಣವಾಗಲಿ

ಸಾಂಸ್ಕೃತಿಕ ನಗರಿ ಮೈಸೂರು ಆಹಾರ ಪ್ರಿಯರ ಸ್ವರ್ಗವೂ ಹೌದು. ಮೈಸೂರು ಪಾಕ್‌ನಿಂದ ಹಿಡಿದು ಮೈಲಾರಿ ದೋಸೆಯವರೆಗೆ ಇಲ್ಲಿನ ರುಚಿ ಪ್ರಸಿದ್ಧವಾಗಿದೆ.…

45 mins ago

ಓದುಗರ ಪತ್ರ: ಗೀತೆ ರಚನಾಕಾರರ ವಿರುದ್ಧ ಸುಮೊಟೊ ಕೇಸ್ ದಾಖಲಿಸಿ

ಪ್ರೇಮ್ ನಿರ್ದೇಶನದ ಕನ್ನಡ ಕೆಡಿ ಚಿತ್ರದ ಸರ್ಸೆ ನಿನ್ನ ಸೆರಗ ಸರ್ಸೆ.. ಎಂಬ ಗೀತೆ ದ್ವಂದ್ವಾರ್ಥದ ಕೀಳು ಅಭಿರುಚಿಯ ಹಾಡು…

47 mins ago

ಓದುಗರ ಪತ್ರ: ಪರೀಕ್ಷೆ ವೇಳೆ ವಿದ್ಯುತ್ ಕಡಿತ ಮಾಡದಿರಿ

ಮಾರ್ಚ್ ತಿಂಗಳು ವಿದ್ಯಾರ್ಥಿಗಳ ಭವಿಷ್ಯ ನಿರ್ಧರಿಸುವ ಪರೀಕ್ಷಾ ಸಮಯ. ಇಂತಹ ಸಂದರ್ಭದಲ್ಲಿ ರಾಜ್ಯಾದ್ಯಂತ ಎಸ್ಕಾಂಗಳು ವಿದ್ಯುತ್ ಕಡಿತ ಮಾಡುತ್ತಿರುವುದು ಸರಿಯಲ್ಲ.…

50 mins ago