ರಾಜ್ಯ

ಕಲಬುರಗಿ ಸೇರಿ ಉತ್ತರದ ಜಿಲ್ಲೆಗಳಲ್ಲಿ ನೆರೆ ಹಾವಳಿ; ಉಸ್ತುವಾರಿ ಸಚಿವರ ವಿರುದ್ಧ ಜೆಡಿಎಸ್ ಕಿಡಿ

ಬೆಂಗಳೂರು : ಕಲಬುರಗಿ ಸೇರಿ ಉತ್ತರ ಕರ್ನಾಟಕದ ಹಲವಾರು ಜಿಲ್ಲೆಗಳಲ್ಲಿ ಮಳೆ ಮತ್ತು ನೆರೆ ಹಾನಿಯಿಂದ ಜನರು ಬಸವಳಿಯುತ್ತಿದ್ದರೂ ಜನತೆಯ ನೆರವಿಗೆ ಧಾವಿಸದ ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.

ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಜೆಡಿಎಸ್ ಪಕ್ಷವು, ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಉತ್ತರ ಕರ್ನಾಟಕ ಭಾಗದ ನೆರೆಪೀಡಿತ ಜಿಲ್ಲೆಗಳ ಉಸ್ತುವಾರಿ ಸಚಿವರುಗಳ ವಿರುದ್ಧ ಹರಿಹಾಯ್ದಿದೆ.

ಇದನ್ನೂ ಓದಿ:-ಅಟಾರ್ನಿ ಜನರಲ್‌ ಆಗಿ ಆರ್.ವೆಂಕಟರಮಣಿ ಮರುನೇಮಕ

ಉತ್ತರ ಕರ್ನಾಟಕ ಭಾಗದ ಉಸ್ತುವಾರಿ ಸಚಿವರೇ ಎಲ್ಲಿದ್ದೀರಿ? ಎಲ್ಲಿ ಮಾಯಾವಾಗಿದ್ದೀರಿ?
ಭೀಮಾ ನದಿಯ ಪ್ರವಾಹಕ್ಕೆ ಉತ್ತರ ಕರ್ನಾಟಕದ ಕಲಬುರಗಿ, ವಿಜಯಪುರ, ಬೀದರ್‌, ಕೊಪ್ಪಳ ಸೇರಿದಂತೆ ಹಲವು ಜಿಲ್ಲೆಗಳು ಸಂಪೂರ್ಣ ಮುಳುಗಡೆಯಾಗಿದ್ದು, ಜನ ನರಕಯಾತನೆ ಅನುಭವಿಸುತ್ತಿದ್ದಾರೆ. ಹಲವು ಜಿಲ್ಲೆಯಲ್ಲಿ ಸಾವು ನೋವುಗಳಾಗಿವೆ. ನೆರೆಯಿಂದ ಗ್ರಾಮಗಳಿಗೆ ಗ್ರಾಮಗಳೇ ಮುಳುಗಡೆ ಆಗಿವೆ. ರಸ್ತೆ, ಸೇತುವೆಗಳು ಮುಳುಗಿವೆ. ಕುಡಿಯುವ ನೀರು, ವಿದ್ಯುತ್ ಸಂಪರ್ಕ ವ್ಯತ್ಯಯವಾಗಿದೆ ಎಂದು ಜೆಡಿಎಸ್ ಕಳವಳ ವ್ಯಕ್ತಪಡಿಸಿದೆ.

ಅಪಾರ ಪ್ರಮಾಣದಲ್ಲಿ ಬೆಳೆ ನಾಶವಾಗಿದೆ. ಉಸ್ತುವಾರಿ ಮಂತ್ರಿಗಳ ಪತ್ತೆಯೇ ಇಲ್ಲ. ನಿಮ್ಮ ಜಿಲ್ಲೆಗಳು ಸಂಪೂರ್ಣ ಮುಳುಗಿರುವಾಗ ಎಲ್ಲಿ ಓಡಿ ಹೋಗಿದ್ದೀರಿ? ಜನರ ದುಃಖ, ಆರ್ತನಾದ ನಿಮಗೆ ಕೇಳುತ್ತಿಲ್ಲವೇ? ನೆರೆ ಸಂತ್ರಸ್ತರಿಗೆ ಆಶ್ರಯ ಕೇಂದ್ರಗಳನ್ನು ನಿರ್ಮಿಸಿ ಅಗತ್ಯ ಸೌಲಭ್ಯ ಕಲ್ಪಿಸಿ, ನೆರೆ ಹಾನಿಯಿಂದ ನಷ್ಟಕ್ಕೊಳಗಾದವರಿಗೆ ತ್ವರಿತವಾಗಿ ಪರಿಹಾರ ನೀಡಲು ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಪಕ್ಷ ಒತ್ತಾಯ ಮಾಡಿದೆ.

ಆಂದೋಲನ ಡೆಸ್ಕ್

Recent Posts

ಇರಾನ್‌ನ ಭದ್ರತಾ ಮುಖ್ಯಸ್ಥ ಹತ್ಯೆ : ಇಸ್ರೆಲ್‌

ಜೆರುಸಲೆಮ್ : ಇಸ್ರೇಲ್‌ನ ಸೇನಾ ದಾಳಿಯಲ್ಲಿ ಇರಾನ್‌ನ ಹಿರಿಯ ಭದ್ರತಾ ಅಧಿಕಾರಿ ಅಲಿ ಲಾರಿಜಾನಿ ಹತ್ಯೆಯಾದ್ದಾರೆ ಎಂದು ಇಸ್ರೇಲ್‌ ರಕ್ಷಣಾ…

60 mins ago

SSLC EXAM | ನಾಳೆಯಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ

ಬೆಂಗಳೂರು : ನಾಳೆಯಿಂದ ರಾಜ್ಯಾದ್ಯಂತ 2026ರ ಎಸ್ಎಸ್ಎಲ್‌ಸಿ ಪರೀಕ್ಷೆ-1 ಆರಂಭವಾಗಲಿದ್ದು, ಒಟ್ಟು 9,02,899 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. ಏಪ್ರಿಲ್ 2ರ ವರೆಗೂ…

2 hours ago

ಕಾಬೂಲ್‌ ಆಸ್ಪತ್ರೆ ಮೇಲೆ ಪಾಕ್‌ ದಾಳಿ : 400 ಮಂದಿ ಸಾವು; ಭಾರತ ಖಂಡನೆ

ಕಾಬೂಲ್‌ : ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ನಡುವಿನ ಗಡಿ ಸಂಘರ್ಷ ಈಗ ಭೀಕರ ಯುದ್ಧಕ್ಕೆ ತಿರುಗಿದ್ದು, ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್‌…

2 hours ago

ಶಿವಾಲಿಕ್‌ ಬಳಿಕ ಎಲ್‌ಪಿಜಿ ಹೊತ್ತ ನಂದಾದೇವಿ ಹಡಗು ಗುಜರಾತ್‌ಗೆ ಆಗಮನ

ಅಹಮದಬಾದ್‌ : 47,000 ಟನ್ ಎಲ್‌ಪಿಜಿ ಹೊತ್ತ ನಂದಾದೇವಿ ಹಡಗು ಗುಜರಾತ್‌ನ ಕಾಂಡ್ಲಾ ಬಂದರಿಗೆ ಸುರಕ್ಷಿತವಾಗಿ ಇಂದು(ಮಾರ್ಚ್.‌17) ತಲುಪಿರುವುದಾಗಿ ವರದಿಯಾಗಿದೆ.…

2 hours ago

ಇರಾನ್‌ ಹೋರಾಟ ಕಂಡು ಆಘಾತಗೊಂಡೆವು, ಶೀಘ್ರದಲ್ಲೇ ಯುದ್ಧ ನಿಲ್ಲಲಿದೆ : ಡೊನಾಲ್ಡ್ ಟ್ರಂಪ್‌

ವಾಷಿಂಗ್ಟನ್‌ : ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್‌ನ ಪ್ರತೀಕಾರಿ ದಾಳಿಗಳನ್ನು ಕಂಡು "ನಾವು ನಿಜಕ್ಕೂ ಆಘಾತಗೊಂಡಿದ್ದೇವೆ" ಎಂದು…

3 hours ago

ಹೊರ್ಮುಜ್‌ ಜಲಸಂಧಿ | ಮನವಿ ತಿರಸ್ಕರಿಸಿದ ಮಿತ್ರ ರಾಷ್ಟ್ರಗಳು : ಟ್ರಂಪ್‌ಗೆ ಹಿನ್ನಡೆ

ವಾಷಿಂಗ್ಟನ್‌ : ಇರಾನ್ ವಿರುದ್ಧದ ಅಮೆರಿಕಾ-ಇಸ್ರೇಲ್ ಯುದ್ಧದ ಪರಿಣಾಮ ಪ್ರಪಂಚದ ಅತಿ ಮುಖ್ಯ ತೈಲ ಮಾರ್ಗ ಹೊರ್ಮುಜ್‌ ಜಲಸಂಧಿಯ ಮೂಲಕ…

3 hours ago