ರಾಜ್ಯ

ಕಲಬುರಗಿ ಸೇರಿ ಉತ್ತರದ ಜಿಲ್ಲೆಗಳಲ್ಲಿ ನೆರೆ ಹಾವಳಿ; ಉಸ್ತುವಾರಿ ಸಚಿವರ ವಿರುದ್ಧ ಜೆಡಿಎಸ್ ಕಿಡಿ

ಬೆಂಗಳೂರು : ಕಲಬುರಗಿ ಸೇರಿ ಉತ್ತರ ಕರ್ನಾಟಕದ ಹಲವಾರು ಜಿಲ್ಲೆಗಳಲ್ಲಿ ಮಳೆ ಮತ್ತು ನೆರೆ ಹಾನಿಯಿಂದ ಜನರು ಬಸವಳಿಯುತ್ತಿದ್ದರೂ ಜನತೆಯ ನೆರವಿಗೆ ಧಾವಿಸದ ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.

ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಜೆಡಿಎಸ್ ಪಕ್ಷವು, ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಉತ್ತರ ಕರ್ನಾಟಕ ಭಾಗದ ನೆರೆಪೀಡಿತ ಜಿಲ್ಲೆಗಳ ಉಸ್ತುವಾರಿ ಸಚಿವರುಗಳ ವಿರುದ್ಧ ಹರಿಹಾಯ್ದಿದೆ.

ಇದನ್ನೂ ಓದಿ:-ಅಟಾರ್ನಿ ಜನರಲ್‌ ಆಗಿ ಆರ್.ವೆಂಕಟರಮಣಿ ಮರುನೇಮಕ

ಉತ್ತರ ಕರ್ನಾಟಕ ಭಾಗದ ಉಸ್ತುವಾರಿ ಸಚಿವರೇ ಎಲ್ಲಿದ್ದೀರಿ? ಎಲ್ಲಿ ಮಾಯಾವಾಗಿದ್ದೀರಿ?
ಭೀಮಾ ನದಿಯ ಪ್ರವಾಹಕ್ಕೆ ಉತ್ತರ ಕರ್ನಾಟಕದ ಕಲಬುರಗಿ, ವಿಜಯಪುರ, ಬೀದರ್‌, ಕೊಪ್ಪಳ ಸೇರಿದಂತೆ ಹಲವು ಜಿಲ್ಲೆಗಳು ಸಂಪೂರ್ಣ ಮುಳುಗಡೆಯಾಗಿದ್ದು, ಜನ ನರಕಯಾತನೆ ಅನುಭವಿಸುತ್ತಿದ್ದಾರೆ. ಹಲವು ಜಿಲ್ಲೆಯಲ್ಲಿ ಸಾವು ನೋವುಗಳಾಗಿವೆ. ನೆರೆಯಿಂದ ಗ್ರಾಮಗಳಿಗೆ ಗ್ರಾಮಗಳೇ ಮುಳುಗಡೆ ಆಗಿವೆ. ರಸ್ತೆ, ಸೇತುವೆಗಳು ಮುಳುಗಿವೆ. ಕುಡಿಯುವ ನೀರು, ವಿದ್ಯುತ್ ಸಂಪರ್ಕ ವ್ಯತ್ಯಯವಾಗಿದೆ ಎಂದು ಜೆಡಿಎಸ್ ಕಳವಳ ವ್ಯಕ್ತಪಡಿಸಿದೆ.

ಅಪಾರ ಪ್ರಮಾಣದಲ್ಲಿ ಬೆಳೆ ನಾಶವಾಗಿದೆ. ಉಸ್ತುವಾರಿ ಮಂತ್ರಿಗಳ ಪತ್ತೆಯೇ ಇಲ್ಲ. ನಿಮ್ಮ ಜಿಲ್ಲೆಗಳು ಸಂಪೂರ್ಣ ಮುಳುಗಿರುವಾಗ ಎಲ್ಲಿ ಓಡಿ ಹೋಗಿದ್ದೀರಿ? ಜನರ ದುಃಖ, ಆರ್ತನಾದ ನಿಮಗೆ ಕೇಳುತ್ತಿಲ್ಲವೇ? ನೆರೆ ಸಂತ್ರಸ್ತರಿಗೆ ಆಶ್ರಯ ಕೇಂದ್ರಗಳನ್ನು ನಿರ್ಮಿಸಿ ಅಗತ್ಯ ಸೌಲಭ್ಯ ಕಲ್ಪಿಸಿ, ನೆರೆ ಹಾನಿಯಿಂದ ನಷ್ಟಕ್ಕೊಳಗಾದವರಿಗೆ ತ್ವರಿತವಾಗಿ ಪರಿಹಾರ ನೀಡಲು ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಪಕ್ಷ ಒತ್ತಾಯ ಮಾಡಿದೆ.

ಆಂದೋಲನ ಡೆಸ್ಕ್

Recent Posts

ವಿಚಾರಣೆ ಇಲ್ಲದೆ ಶಿಕ್ಷೆ ಕೊಡಲು ಸಂವಿಧಾನ ಒಪ್ಪುವುದಿಲ್ಲ

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…

3 hours ago

ಆ ಮೂರು ಜೀವಗಳಿಗೂ ಬೆಲೆಯೇ ಇರಲಿಲ್ಲವೇ?

ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…

3 hours ago

ಅಸಮಾಧಾನದ ಬೇಗೆ: ಸಿಎಂ ಡಿಕೆಶಿಗೆ ಹೈಕಮಾಂಡ್ ‘ಎಸಿ’

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ರಾಜ್ಯ ಕಾಂಗ್ರೆಸ್‌ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…

3 hours ago

ನಾಲ್ಕು ಶೂಟೌಟ್ ಪ್ರಕರಣ; ಏಳು ಸಾವು

ಮಹಾದೇಶ ಎಂ ಗೌಡ ೨೦೧೪ರಿಂದ ೨೦೨೬ರವರೆಗೆ ನಡೆದ ಪ್ರಕರಣಗಳು ಹನೂರು: ತಾಲ್ಲೂಕಿನ ಕಾವೇರಿ ವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ…

3 hours ago

ಹೋಟೆಲ್,ರೆಸ್ಟೋರೆಂಟ್‌ಗಳ ಮೇಲೆ ಮುಂದುವರೆದ ದಾಳಿ

ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…

11 hours ago