ರಾಜ್ಯ

ಕಲ್ಯಾಣ ಕರ್ನಾಟಕ ಭಾಗದಲ್ಲಿ ಪ್ರವಾಹ: ಮೋದಿ ಸರ್ಕಾರ ರಾಜ್ಯದ ಪರ ನಿಲ್ಲುತ್ತದೆ ಎಂದ ಎಚ್‌ಡಿಕೆ

ಬೆಂಗಳೂರು: ಕಲ್ಯಾಣ ಕರ್ನಾಟಕ ಭಾಗದ ನೆರೆಪೀಡಿತ ಪ್ರತೀ ತಾಲ್ಲೂಕಿನಲ್ಲಿ ಕಾಳಜಿ ಕೇಂದ್ರಗಳನ್ನು ತೆರೆಯಬೇಕು ಮತ್ತು ಎಲ್ಲಾ ತುರ್ತು ಸೌಲಭ್ಯಗಳು ಜನರಿಗೆ ಸುಲಭವಾಗಿ ಲಭ್ಯವಾಗುವಂತೆ ನೋಡಿಕೊಳ್ಳಬೇಕೆಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

ಈ ಸಂಬಂಧ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ಕೇಂದ್ರ ಸರ್ಕಾರವು ಕರ್ನಾಟಕದ ಪರ ದೃಢವಾಗಿ ನಿಲ್ಲುತ್ತದೆ ಎಂದು ಕೇಂದ್ರ ಸಚಿವನಾಗಿ ಖಚಿತ ಭರವಸೆ ನೀಡುತ್ತೇನೆ. ನಮ್ಮ ಜನರ ಕ್ಷೇಮ ಮತ್ತು ಅವರ ಸುರಕ್ಷಿತ ಜೀವನೋಪಾಯಕ್ಕಾಗಿ ಕಾಳಜಿ ವಹಿಸಿ ಸಾಧ್ಯವಿರುವ ಎಲ್ಲ ಸಹಕಾರವನ್ನೂ ಕೇಂದ್ರವು ನೀಡಲಿದೆ ಎಂದು ಅವರು ಹೇಳಿದ್ದಾರೆ.

ಕಲ್ಯಾಣ ಕರ್ನಾಟಕದ ಕಲಬುರಗಿ, ವಿಜಯಪುರ, ಬೀದರ್, ರಾಯಚೂರು ಮತ್ತು ಕೊಪ್ಪಳ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಭಾರೀ ಪ್ರವಾಹ ಉಂಟಾಗಿ ಜನರು ಅತೀವ ಸಂಕಷ್ಟಕ್ಕೆ ಸಿಲುಕಿರುವ ಸಮಯದಲ್ಲಿ ಪ್ರತಿಯೊಬ್ಬರ ಜೀವ ರಕ್ಷಣೆ, ಅವರಿಗೆ ಅಗತ್ಯ ಸೌಕರ್ಯ ಕಲ್ಪಿಸುವುದು ಸರ್ಕಾರದ ಆದ್ಯ ಕರ್ತವ್ಯ. ಅವರ ಕ್ಷೇಮಕ್ಕಾಗಿ ಪ್ರಾರ್ಥಿಸುತ್ತೇನೆ ಎಂದಿದ್ದಾರೆ.

ಆಹಾರ, ಕುಡಿಯುವ ನೀರು, ಉಡುಪು, ಹೊದಿಕೆ ಮತ್ತು ತುರ್ತು ಔಷಧಿಗಳ ಸಾಕಷ್ಟು ದಾಸ್ತಾನನ್ನು ವಿಳಂಬವಿಲ್ಲದೆ ಅಷ್ಟೂ ಜಿಲ್ಲೆಗಳಿಗೂ ತಲುಪಿಸಬೇಕು. ಸಿಬ್ಬಂದಿ ರಕ್ಷಣಾ ಪ್ರಯತ್ನಗಳನ್ನು ತೀವ್ರಗೊಳಿಸಿ ವೃದ್ಧರು, ಮಕ್ಕಳು ಮತ್ತು ಮಹಿಳೆಯರ ರಕ್ಷಣೆಗೆ ಹೆಚ್ಚು ಮುತುವರ್ಜಿ ವಹಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಇದನ್ನೂ ಓದಿ:-ಕಾಲ್ತುಳಿತ ದುರಂತ: ಮೃತರ ಕುಟುಂಬಕ್ಕೆ ತಲಾ 2 ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ

ವಿದ್ಯಾರ್ಥಿಗಳ ಬಗ್ಗೆಯೂ ವಿಶೇಷ ಗಮನ ಹರಿಸಬೇಕು. ಶಾಲೆ, ಹಾಸ್ಟೆಲ್ ಮತ್ತು ಶಿಕ್ಷಣ ಸಂಸ್ಥೆಗಳನ್ನು ತಕ್ಷಣವೇ ತಾತ್ಕಾಲಿಕ ಪರಿಹಾರ-ಆರೋಗ್ಯ ಕೇಂದ್ರಗಳನ್ನಾಗಿ ಪರಿವರ್ತಿಸಿ ನೆರೆಪೀಡಿತ ಕುಟುಂಬಗಳು, ಚಿಕ್ಕ ಮಕ್ಕಳು ಸುರಕ್ಷಿತ ಸ್ಥಳದಲ್ಲಿ ಆಶ್ರಯ ಪಡೆಯಲು ಸೂಕ್ತ ವ್ಯವಸ್ಥೆ ಮಾಡಬೇಕು ಎಂದಿದ್ದಾರೆ.

ಜನರ ಪ್ರಾಣ ನಷ್ಟದ ಜೊತೆಗೆ ಈ ಜಿಲ್ಲೆಗಳಲ್ಲಿ ತೀವ್ರ ಬೆಳೆ ನಷ್ಟ ಮತ್ತು ಹಾನಿ ಸಂಭವಿಸಿದೆ. ರೈತರ ಸ್ಥಿತಿ ಹೃದಯ ವಿದ್ರಾವಕವಾಗಿದ್ದು, ಅವರಿಗೆ ಸೂಕ್ತ-ಸಕಾಲಿಕ ಪರಿಹಾರ ಒದಗಿಸಬೇಕು. ಇದರಿಂದ ಅವರು ತಮ ಜೀವನೋಪಾಯವನ್ನು ಮರಳಿ ಪಡೆಯಲು ಸಾಧ್ಯವಾಗುತ್ತದೆ. ಪಶು-ಪ್ರಾಣಿಗಳು ಅತೀವ ಸಂಕಷ್ಟಕ್ಕೆ ತುತ್ತಾಗಿವೆ. ವಿಶೇಷವಾಗಿ ಕೃಷಿ ಸಮುದಾಯದ ಜೀವನಾಡಿಯಾಗಿರುವ ಜಾನುವಾರುಗಳಿಗೆ ಮೇವು, ಆಶ್ರಯ ಮತ್ತು ವೈದ್ಯಕೀಯ ಆರೈಕೆ ಒದಗಿಸಲು ತುರ್ತು ಕ್ರಮ ಕೈಗೊಳ್ಳಬೇಕು. ಜನಾರೋಗ್ಯ, ಪಶು ಆರೋಗ್ಯ ತಂಡಗಳನ್ನು ಸದಾ ಸನ್ನದ್ಧ ಸ್ಥಿತಿಯಲ್ಲಿಡಬೇಕು ಎಂದು ಅವರು ಸಲಹೆ ಮಾಡಿದ್ದಾರೆ.

ಗೌರಿ ಗಣೇಶ ಹಬ್ಬದ ಸಮಯದಲ್ಲಿ ಬೀದರ್, ವಿಜಯಪುರ, ಯಾದಗಿರಿ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿದು ಈಗಾಗಲೇ ಸಂಕಷ್ಟಕ್ಕೆ ತುತ್ತಾಗಿವೆ. ಆಯುಧ ಪೂಜೆ, ದಸರಾ, ದೀಪಾವಳಿಯ ಸಮಯದಲ್ಲಿ ಜನರು ಮತ್ತೆ ತೊಂದರೆ ಅನುಭವಿಸುವಂತೆ ಆಗಬಾರದು. ಆದ್ದರಿಂದ ಪರಿಹಾರ ಕಾರ್ಯಗಳು ನಿರಂತರವಾಗಿ ಮುಂದುವರಿಯಬೇಕು ಎಂದು ಹೇಳಿದ್ದಾರೆ.

ಪರಿಸ್ಥಿತಿಯನ್ನು ಅವಲೋಕಿಸಲು ಮತ್ತು ಪರಿಹಾರ ಕ್ರಮಗಳ ತ್ವರಿತ ಸಮನ್ವಯವನ್ನು ಖಚಿತಪಡಿಸಿಕೊಳ್ಳಲು ನಾನು ಖುದ್ದಾಗಿ ಕಲಬುರಗಿ, ಯಾದಗಿರಿ, ವಿಜಯಪುರ, ಬೀದರ್ ಮತ್ತು ರಾಯಚೂರು ಜಿಲ್ಲಾಧಿಕಾರಿಗಳೊಂದಿಗೆ ದೂರವಾಣಿಯಲ್ಲಿ ಮಾತುಕತೆ ನಡೆಸಿ ಪರಿಹಾರ ಕಾರ್ಯ, ಆಗಿರುವ ನಷ್ಟದ ಬಗ್ಗೆ ಮಾಹಿತಿ ಪಡೆದು ತುರ್ತು ಕ್ರಮ ವಹಿಸುವಂತೆ ಸೂಚಿಸಿದ್ದೇನೆ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ | ಜನಸಂಖ್ಯೆ ಏರುಪೇರು : ಆಂಧ್ರದ ನೀತಿ ಅನುಕರಣೀಯವೇ?

ದೇಶದ ಜನಸಂಖ್ಯೆಯಲ್ಲಾಗುತ್ತಿರುವ ಏರುಪೇರು ರಾಷ್ಟ್ರೀಯ ಜನಸಂಖ್ಯೆ ನಿರ್ವಹಣೆಯ ನೀತಿಯ ದಿಕ್ಕನ್ನೇ ಬದಲಿಸುತ್ತಿದೆ. ಉತ್ತರ ಭಾರತದ ಜನಸಂಖ್ಯೆ ಪ್ರಮಾಣ ಲಂಗು ಲಗಾಮಿಲ್ಲದೆ…

46 mins ago

ಮೆಲೊಡಿ ಖಾವೋ ; ಕುಚ್‌ ಜಾನ್‌ ಜಾವೋ!

ರಾಜಾರಾಂ ತಲ್ಲೂರು ಬೆಳಿಗ್ಗೆ ಎದ್ದ ತಕ್ಷಣ ಹಲ್ಲು ತಿಕ್ಕಿ ಮುಖ ತೊಳೆಯಬೇಕು ಎಂದು ದೇಶದ ಸಂವಿಧಾನದಲ್ಲಿ ಬರೆದಿದೆಯೇನ್ರಿ? . .…

1 hour ago

ಭಾನುವಾರದ ಹಾಡುಪಾಡು | ಈ ಮೋಹ, ಈ ಬಯಕೆ ಮತ್ತು ಇದೆಲ್ಲಾ ಯಾಕೆ ಹೀಗೆ?

ಮೋಹಿತ್‌ ಎಸ್‌ ಗೌಡ ನಾನು ಪ್ರಾಥಮಿಕ ಶಾಲೆಯಲ್ಲಿ ಓದುವಾಗ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಲ್ಲಿ ‘ಲಿಂಗ ಬದಲಿಸಿ ಬರೆಯಿರಿ’ ಅಥವಾ ‘ವಿರುದ್ಧ ಪದ…

1 hour ago

ಭಾನುವಾರದ ಹಾಡುಪಾಡು | ಒಂದು ಸುಂದರ ಸಂಸಾರ ಮುರಿದುಹೋದ ಕಥೆ

ರೇಣುಕಾ ನಿಡಗುಂದಿ  ಕಾಲೇಜಿನ ದಿನಗಳಲ್ಲಿ ಅವರಿಬ್ಬರೂ ಭೇಟಿಯಾದಾಗಲೇ ಆಕೆ ತಾನು ಬೈ ( Bisexual) ಎಂದು ಹೇಳಿಕೊಂಡಿದ್ದಳು. ಹೊಸತಲೆಮಾರಿನ ಹುಡುಗ…

2 hours ago

ಒಬ್ಬ ಹುಡುಗ ಯಾವ ಕಾರಣಕ್ಕೆ ʼಗೇʼ ಆಗುತ್ತಾನೆ?

ವಸುಧೇಂದ್ರ ಹುಡುಗನೊಬ್ಬನಿಗೆ ಮತ್ತೊಬ್ಬ ಹುಡುಗನ ಮೇಲೆ ಅದು ಹೇಗೆ ಆಕರ್ಷಣೆ ಮೂಡುತ್ತದೆ? ಅದು ಅವನ ಆಯ್ಕೆಯೆ? ಕಲಿತ ದುಶ್ಚಟವೆ? ವಿಷಮ…

2 hours ago

ಮ.ಬೆಟ್ಟ | ಬಾಲಕನ ಮೇಲೆ ದಾಳಿ ಮಾಡಿದ್ದ ಚಿರತೆ ಸೆರೆ

ಹನೂರು : ಶ್ರೀ ಕ್ಷೇತ್ರ ನಾಗಮಲೆಗೆ ತೆರಳುತ್ತಿದ್ದ ಬಾಲಕನ ಮೇಲೆ ದಾಳಿ ಮಾಡಿ ಸಾವಿಗೆ ಕಾರಣವಾಗಿದ್ದ ಚಿರತೆಯನ್ನು ಸೆರೆ ಹಿಡಿಯುವಲ್ಲಿ…

3 hours ago