ರಾಜ್ಯ

ಕಲ್ಯಾಣ ಕರ್ನಾಟಕ ಭಾಗದಲ್ಲಿ ಪ್ರವಾಹ: ಮೋದಿ ಸರ್ಕಾರ ರಾಜ್ಯದ ಪರ ನಿಲ್ಲುತ್ತದೆ ಎಂದ ಎಚ್‌ಡಿಕೆ

ಬೆಂಗಳೂರು: ಕಲ್ಯಾಣ ಕರ್ನಾಟಕ ಭಾಗದ ನೆರೆಪೀಡಿತ ಪ್ರತೀ ತಾಲ್ಲೂಕಿನಲ್ಲಿ ಕಾಳಜಿ ಕೇಂದ್ರಗಳನ್ನು ತೆರೆಯಬೇಕು ಮತ್ತು ಎಲ್ಲಾ ತುರ್ತು ಸೌಲಭ್ಯಗಳು ಜನರಿಗೆ ಸುಲಭವಾಗಿ ಲಭ್ಯವಾಗುವಂತೆ ನೋಡಿಕೊಳ್ಳಬೇಕೆಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

ಈ ಸಂಬಂಧ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ಕೇಂದ್ರ ಸರ್ಕಾರವು ಕರ್ನಾಟಕದ ಪರ ದೃಢವಾಗಿ ನಿಲ್ಲುತ್ತದೆ ಎಂದು ಕೇಂದ್ರ ಸಚಿವನಾಗಿ ಖಚಿತ ಭರವಸೆ ನೀಡುತ್ತೇನೆ. ನಮ್ಮ ಜನರ ಕ್ಷೇಮ ಮತ್ತು ಅವರ ಸುರಕ್ಷಿತ ಜೀವನೋಪಾಯಕ್ಕಾಗಿ ಕಾಳಜಿ ವಹಿಸಿ ಸಾಧ್ಯವಿರುವ ಎಲ್ಲ ಸಹಕಾರವನ್ನೂ ಕೇಂದ್ರವು ನೀಡಲಿದೆ ಎಂದು ಅವರು ಹೇಳಿದ್ದಾರೆ.

ಕಲ್ಯಾಣ ಕರ್ನಾಟಕದ ಕಲಬುರಗಿ, ವಿಜಯಪುರ, ಬೀದರ್, ರಾಯಚೂರು ಮತ್ತು ಕೊಪ್ಪಳ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಭಾರೀ ಪ್ರವಾಹ ಉಂಟಾಗಿ ಜನರು ಅತೀವ ಸಂಕಷ್ಟಕ್ಕೆ ಸಿಲುಕಿರುವ ಸಮಯದಲ್ಲಿ ಪ್ರತಿಯೊಬ್ಬರ ಜೀವ ರಕ್ಷಣೆ, ಅವರಿಗೆ ಅಗತ್ಯ ಸೌಕರ್ಯ ಕಲ್ಪಿಸುವುದು ಸರ್ಕಾರದ ಆದ್ಯ ಕರ್ತವ್ಯ. ಅವರ ಕ್ಷೇಮಕ್ಕಾಗಿ ಪ್ರಾರ್ಥಿಸುತ್ತೇನೆ ಎಂದಿದ್ದಾರೆ.

ಆಹಾರ, ಕುಡಿಯುವ ನೀರು, ಉಡುಪು, ಹೊದಿಕೆ ಮತ್ತು ತುರ್ತು ಔಷಧಿಗಳ ಸಾಕಷ್ಟು ದಾಸ್ತಾನನ್ನು ವಿಳಂಬವಿಲ್ಲದೆ ಅಷ್ಟೂ ಜಿಲ್ಲೆಗಳಿಗೂ ತಲುಪಿಸಬೇಕು. ಸಿಬ್ಬಂದಿ ರಕ್ಷಣಾ ಪ್ರಯತ್ನಗಳನ್ನು ತೀವ್ರಗೊಳಿಸಿ ವೃದ್ಧರು, ಮಕ್ಕಳು ಮತ್ತು ಮಹಿಳೆಯರ ರಕ್ಷಣೆಗೆ ಹೆಚ್ಚು ಮುತುವರ್ಜಿ ವಹಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಇದನ್ನೂ ಓದಿ:-ಕಾಲ್ತುಳಿತ ದುರಂತ: ಮೃತರ ಕುಟುಂಬಕ್ಕೆ ತಲಾ 2 ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ

ವಿದ್ಯಾರ್ಥಿಗಳ ಬಗ್ಗೆಯೂ ವಿಶೇಷ ಗಮನ ಹರಿಸಬೇಕು. ಶಾಲೆ, ಹಾಸ್ಟೆಲ್ ಮತ್ತು ಶಿಕ್ಷಣ ಸಂಸ್ಥೆಗಳನ್ನು ತಕ್ಷಣವೇ ತಾತ್ಕಾಲಿಕ ಪರಿಹಾರ-ಆರೋಗ್ಯ ಕೇಂದ್ರಗಳನ್ನಾಗಿ ಪರಿವರ್ತಿಸಿ ನೆರೆಪೀಡಿತ ಕುಟುಂಬಗಳು, ಚಿಕ್ಕ ಮಕ್ಕಳು ಸುರಕ್ಷಿತ ಸ್ಥಳದಲ್ಲಿ ಆಶ್ರಯ ಪಡೆಯಲು ಸೂಕ್ತ ವ್ಯವಸ್ಥೆ ಮಾಡಬೇಕು ಎಂದಿದ್ದಾರೆ.

ಜನರ ಪ್ರಾಣ ನಷ್ಟದ ಜೊತೆಗೆ ಈ ಜಿಲ್ಲೆಗಳಲ್ಲಿ ತೀವ್ರ ಬೆಳೆ ನಷ್ಟ ಮತ್ತು ಹಾನಿ ಸಂಭವಿಸಿದೆ. ರೈತರ ಸ್ಥಿತಿ ಹೃದಯ ವಿದ್ರಾವಕವಾಗಿದ್ದು, ಅವರಿಗೆ ಸೂಕ್ತ-ಸಕಾಲಿಕ ಪರಿಹಾರ ಒದಗಿಸಬೇಕು. ಇದರಿಂದ ಅವರು ತಮ ಜೀವನೋಪಾಯವನ್ನು ಮರಳಿ ಪಡೆಯಲು ಸಾಧ್ಯವಾಗುತ್ತದೆ. ಪಶು-ಪ್ರಾಣಿಗಳು ಅತೀವ ಸಂಕಷ್ಟಕ್ಕೆ ತುತ್ತಾಗಿವೆ. ವಿಶೇಷವಾಗಿ ಕೃಷಿ ಸಮುದಾಯದ ಜೀವನಾಡಿಯಾಗಿರುವ ಜಾನುವಾರುಗಳಿಗೆ ಮೇವು, ಆಶ್ರಯ ಮತ್ತು ವೈದ್ಯಕೀಯ ಆರೈಕೆ ಒದಗಿಸಲು ತುರ್ತು ಕ್ರಮ ಕೈಗೊಳ್ಳಬೇಕು. ಜನಾರೋಗ್ಯ, ಪಶು ಆರೋಗ್ಯ ತಂಡಗಳನ್ನು ಸದಾ ಸನ್ನದ್ಧ ಸ್ಥಿತಿಯಲ್ಲಿಡಬೇಕು ಎಂದು ಅವರು ಸಲಹೆ ಮಾಡಿದ್ದಾರೆ.

ಗೌರಿ ಗಣೇಶ ಹಬ್ಬದ ಸಮಯದಲ್ಲಿ ಬೀದರ್, ವಿಜಯಪುರ, ಯಾದಗಿರಿ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿದು ಈಗಾಗಲೇ ಸಂಕಷ್ಟಕ್ಕೆ ತುತ್ತಾಗಿವೆ. ಆಯುಧ ಪೂಜೆ, ದಸರಾ, ದೀಪಾವಳಿಯ ಸಮಯದಲ್ಲಿ ಜನರು ಮತ್ತೆ ತೊಂದರೆ ಅನುಭವಿಸುವಂತೆ ಆಗಬಾರದು. ಆದ್ದರಿಂದ ಪರಿಹಾರ ಕಾರ್ಯಗಳು ನಿರಂತರವಾಗಿ ಮುಂದುವರಿಯಬೇಕು ಎಂದು ಹೇಳಿದ್ದಾರೆ.

ಪರಿಸ್ಥಿತಿಯನ್ನು ಅವಲೋಕಿಸಲು ಮತ್ತು ಪರಿಹಾರ ಕ್ರಮಗಳ ತ್ವರಿತ ಸಮನ್ವಯವನ್ನು ಖಚಿತಪಡಿಸಿಕೊಳ್ಳಲು ನಾನು ಖುದ್ದಾಗಿ ಕಲಬುರಗಿ, ಯಾದಗಿರಿ, ವಿಜಯಪುರ, ಬೀದರ್ ಮತ್ತು ರಾಯಚೂರು ಜಿಲ್ಲಾಧಿಕಾರಿಗಳೊಂದಿಗೆ ದೂರವಾಣಿಯಲ್ಲಿ ಮಾತುಕತೆ ನಡೆಸಿ ಪರಿಹಾರ ಕಾರ್ಯ, ಆಗಿರುವ ನಷ್ಟದ ಬಗ್ಗೆ ಮಾಹಿತಿ ಪಡೆದು ತುರ್ತು ಕ್ರಮ ವಹಿಸುವಂತೆ ಸೂಚಿಸಿದ್ದೇನೆ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಬಿಡದಿ ಹೋರಾಟಕ್ಕೆ ಜೆನ್‌-ಝೀ ಗಳು ಬರಲಿ ; ದೇವನೂರು ಮಹದೇವ ಕರೆ

ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…

3 hours ago

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

7 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

11 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

13 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

14 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

15 hours ago