ರಾಜ್ಯ

ಬೀದರ್‌ನಲ್ಲಿ ಮಹಾಮಳೆಯಿಂದ ಪ್ರವಾಹ: ನಾಳೆ ಸಿಎಂ ಸಿದ್ದರಾಮಯ್ಯ ವೈಮಾನಿಕ ಸಮೀಕ್ಷೆ

ಬೀದರ್:‌ ಬೀದರ್‌ನಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಭಾರೀ ಪ್ರಮಾಣದ ಬೆಳೆ, ಮನೆ ಹಾನಿಯಾಗಿದೆ.

ಈ ಹಿನ್ನೆಲೆಯಲ್ಲಿ ವೈಮಾನಿಕ ಸಮೀಕ್ಷೆ ನಡೆಸಿ, ವಿಶೇಷ ಪ್ಯಾಕೇಜ್‌ ನೀಡುವಂತೆ ಸಿಎಂ ಸಿದ್ದರಾಮಯ್ಯರಿಗೆ ಸಚಿವ ಈಶ್ವರ್‌ ಖಂಡ್ರೆ ಮನವಿ ಮಾಡಿದ್ದಾರೆ.

ಈ ಕುರಿತು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಬಳಿಕ ಈಶ್ವರ್‌ ಖಂಡ್ರೆ ಮಾತನಾಡಿದ್ದಾರೆ. ಮನವಿಗೆ ಸಿಎಂ ಸಿದ್ದರಾಮಯ್ಯ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ವೈಮಾನಿಕ ಸಮೀಕ್ಷೆ ನಡೆಸುವ ಭರವಸೆ ನೀಡಿದ್ದಾರೆ ಎಂದರು.

ಹವಾಮಾನ ಬದಲಾವಣೆ ಮತ್ತು ಜಾಗತಿಕ ತಾಪಮಾನ ಏರಿಕೆಯ ಪರಿಣಾಮವಾಗಿ ಖುತುಮಾನಗಳಲ್ಲಿ ಏರುಪೇರುಗಳಾಗಿದ್ದು, ಪರಿಣಾಮ ಬೀದರ್‌ ಜಿಲ್ಲೆ ಮೇಲೂ ಆಗುತ್ತಿದೆ.

ಇದನ್ನು ಓದಿ :  ರಾಜ್ಯದಲ್ಲಿ ಇನ್ನೂ ಒಂದು ವಾರಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಹೆಚ್ಚಿನ ಕೈಗಾರಿಕೆ, ವಾಣಿಜ್ಯ ಚಟುವಟಿಕೆ ಇಲ್ಲದ ನಮ್ಮ ಜಿಲ್ಲೆಯ ಜನರ ಬದುಕು ಕೃಷಿಯನ್ನೇ ಅವಲಂಬಿಸಿದ್ದು, ಈ ವರ್ಷ 4.31 ಲಕ್ಷ ಹೆಕ್ಟೇರ್‌ ಬಿತ್ತನೆ ಕಾರ್ಯ ನಡೆದಿದೆ.

ಆದರೆ ಈ ತಿಂಗಳು ಸುರಿದ ವಿಪರೀತ ಮಳೆಯಿಂದ ರಾಶಿಗೆ ಬಂದ ಹೆಸರು, ಉದ್ದು, ತೊಗರಿ, ಸೋಯಾ ಸೇರಿದಂತೆ ಎಲ್ಲಾ ಬೆಳೆ ಸಂಪೂರ್ಣ ಹಾನಿಯಾಗಿದೆ. ಇದರಿಂದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಮಾಹಿತಿ ನೀಡಿದರು.

ಒಂದು ವಾರದ ಅವಧಿಯಲ್ಲಿ ಒಂದು ತಿಂಗಳ ಮಳೆ ಬೀಳುತ್ತಿರುವ ಪರಿಣಾಮ ಹಲವು ಸೇತುವೆಗಳು ಕುಸಿದು ಸಂಪರ್ಕ ಕಡಿತವಾಗಿದೆ. ವಿದ್ಯುತ್ ಕಂಬಗಳು ಧರೆಗುರುಳಿದ್ದು, ಅನೇಕ ಗ್ರಾಮಗಳು ಸಂಪೂರ್ಣ ಮುಳುಗಡೆಯಾಗಿವೆ.

ರೈತರ ಬಗ್ಗೆ ಅಪಾರ ಕಾಳಜಿ ಹೊಂದಿರುವ ತಾವು ಬೀದರ್‌ ಜಿಲ್ಲೆಯಲ್ಲಿ ವೈಮಾನಿಕ ಸಮೀಕ್ಷೆ ನಡೆಸಿ ತುರ್ತು ಪರಿಹಾರ ಹಾಗೂ ವಿಶೇಷ ಪ್ಯಾಕೇಜ್‌ ಘೋಷಿಸಬೇಕು ಎಂದು ವಿನಂತಿ ಮಾಡಿದ್ದೇನೆ ಎಂದರು.

ಇದಕ್ಕೆ ಸಿಎಂ ಸಿದ್ದರಾಮಯ್ಯ ಅವರು ಕೂಡ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಹೇಳಿದರು. ಈ ಹಿನ್ನೆಲೆಯಲ್ಲಿ ನಾಳೆ ಸಿಎಂ ಸಿದ್ದರಾಮಯ್ಯ ಅವರು ಬೀದರ್‌ನಲ್ಲಿ ಮಳೆಹಾನಿ ಪ್ರದೇಶದಲ್ಲಿ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಸಾಂಘಿಕ ಪ್ರದರ್ಶನದಿಂದ ಭಾರತದ ಮುಡಿಗೆ ಟಿ-೨೦ ವಿಶ್ವಕಪ್

ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಟಿ-೨೦ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾರತ ತಂಡದ ಸಾಂಘಿಕ ಪ್ರದರ್ಶನದಿಂದ ನ್ಯೂಜಿಲೆಂಡ್…

2 hours ago

ಓದುಗರ ಪತ್ರ: ಅನುಭವಿ ಮೌಲ್ಯಮಾಪಕರಿಗೆ ಆದ್ಯತೆ ನೀಡಿ

ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳ ಜೀವನದ ಪ್ರಮುಖ ಘಟ್ಟವಾಗಿದೆ. ವಿದ್ಯಾರ್ಥಿಗಳು ವರ್ಷವಿಡೀ ಶ್ರದ್ಧೆಯಿಂದ ಓದಿ ಪರೀಕ್ಷೆ ಬರೆದರೂ ಪ್ರತಿ ವರ್ಷವೂ…

2 hours ago

ಓದುಗರ ಪತ್ರ: ಆಟೋ ಚಾಲಕರಿಂದ ಅರವಟ್ಟಿಗೆ ಸೌಲಭ್ಯ

ಬೇಸಿಗೆ ಆರಂಭವಾಗುತ್ತಿದ್ದಂತೆಯೇ ಬಿಸಿಲಿನ ತಾಪ ಹೆಚ್ಚಾಗಿ ಜನರು ಕುಡಿಯುವ ನೀರಿಗಾಗಿ ಪರದಾಡುವ ಪರಿಸ್ಥಿತಿ ಉಂಟಾಗುತ್ತದೆ. ಇಂತಹ ಸಂದರ್ಭದಲ್ಲಿ ಮೈಸೂರಿನ ರಾಮಸ್ವಾಮಿ…

2 hours ago

ಓದುಗರ ಪತ್ರ: ಯುದ್ಧ: ಎಂಎಲ್‌ಸಿಗೆ ಸ್ಪಂದಿಸದ ಕೇಂದ್ರ ಸರ್ಕಾರ?

ಇಸ್ರೇಲ್- ಅಮೆರಿಕ ಹಾಗೂ ಇರಾನ್ ನಡುವಿನ ಯುದ್ಧ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಭಾರತದಿಂದ ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಿಂದ ಕಾರ್ಯನಿಮಿತ್ತ…

2 hours ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಸ್ಲಮ್ ವಾಸಿಗಳಿಗೆ ಬದುಕು ಕಟ್ಟಿ ಕೊಟ್ಟ ಆರ್ಕಿಟೆಕ್ಟ್‌

ಕೊಳೆಗೇರಿಗಳ ೨೭,೦೦೦ ಮನೆಗಳಿಗೆ ಶೌಚಾಲಯ ಸೌಲಭ್ಯ ಪೂನಾದ ಇಂದಿರಾ ವಸಾಹತ್ ಎಂಬ ಪ್ರದೇಶದ ಒಂದು ಸ್ಲಮ್ಮಿನಲ್ಲಿ ವಾಸಿಸುವ ಲತಾ ರತನ್…

2 hours ago

ಮರಿಗಳೊಂದಿಗೆ ಹುಲಿ ಕಂಡು ಪುಳಕಿತರಾದ ಪ್ರವಾಸಿಗರು

ಮಹೇಂದ್ರ ಹಸಗೂಲಿ ತಾಯಿ ಹುಲಿ ನಾಪತ್ತೆಯಾಗಿದ್ದರಿಂದ ಮರಿಗಳನ್ನು ಪಾಲನೆ ಮಾಡಿದ್ದ ಅರಣ್ಯ ಇಲಾಖೆ  ಗುಂಡ್ಲುಪೇಟೆ: ಬಂಡೀಪುರದ ಸಫಾರಿಗೆ ಹೋಗಿದ್ದ ಪ್ರವಾಸಿಗರು…

2 hours ago