cm siddaramaiah
ಬೀದರ್: ಬೀದರ್ನಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಭಾರೀ ಪ್ರಮಾಣದ ಬೆಳೆ, ಮನೆ ಹಾನಿಯಾಗಿದೆ.
ಈ ಹಿನ್ನೆಲೆಯಲ್ಲಿ ವೈಮಾನಿಕ ಸಮೀಕ್ಷೆ ನಡೆಸಿ, ವಿಶೇಷ ಪ್ಯಾಕೇಜ್ ನೀಡುವಂತೆ ಸಿಎಂ ಸಿದ್ದರಾಮಯ್ಯರಿಗೆ ಸಚಿವ ಈಶ್ವರ್ ಖಂಡ್ರೆ ಮನವಿ ಮಾಡಿದ್ದಾರೆ.
ಈ ಕುರಿತು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಬಳಿಕ ಈಶ್ವರ್ ಖಂಡ್ರೆ ಮಾತನಾಡಿದ್ದಾರೆ. ಮನವಿಗೆ ಸಿಎಂ ಸಿದ್ದರಾಮಯ್ಯ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ವೈಮಾನಿಕ ಸಮೀಕ್ಷೆ ನಡೆಸುವ ಭರವಸೆ ನೀಡಿದ್ದಾರೆ ಎಂದರು.
ಹವಾಮಾನ ಬದಲಾವಣೆ ಮತ್ತು ಜಾಗತಿಕ ತಾಪಮಾನ ಏರಿಕೆಯ ಪರಿಣಾಮವಾಗಿ ಖುತುಮಾನಗಳಲ್ಲಿ ಏರುಪೇರುಗಳಾಗಿದ್ದು, ಪರಿಣಾಮ ಬೀದರ್ ಜಿಲ್ಲೆ ಮೇಲೂ ಆಗುತ್ತಿದೆ.
ಇದನ್ನು ಓದಿ : ರಾಜ್ಯದಲ್ಲಿ ಇನ್ನೂ ಒಂದು ವಾರಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ
ಹೆಚ್ಚಿನ ಕೈಗಾರಿಕೆ, ವಾಣಿಜ್ಯ ಚಟುವಟಿಕೆ ಇಲ್ಲದ ನಮ್ಮ ಜಿಲ್ಲೆಯ ಜನರ ಬದುಕು ಕೃಷಿಯನ್ನೇ ಅವಲಂಬಿಸಿದ್ದು, ಈ ವರ್ಷ 4.31 ಲಕ್ಷ ಹೆಕ್ಟೇರ್ ಬಿತ್ತನೆ ಕಾರ್ಯ ನಡೆದಿದೆ.
ಆದರೆ ಈ ತಿಂಗಳು ಸುರಿದ ವಿಪರೀತ ಮಳೆಯಿಂದ ರಾಶಿಗೆ ಬಂದ ಹೆಸರು, ಉದ್ದು, ತೊಗರಿ, ಸೋಯಾ ಸೇರಿದಂತೆ ಎಲ್ಲಾ ಬೆಳೆ ಸಂಪೂರ್ಣ ಹಾನಿಯಾಗಿದೆ. ಇದರಿಂದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಮಾಹಿತಿ ನೀಡಿದರು.
ಒಂದು ವಾರದ ಅವಧಿಯಲ್ಲಿ ಒಂದು ತಿಂಗಳ ಮಳೆ ಬೀಳುತ್ತಿರುವ ಪರಿಣಾಮ ಹಲವು ಸೇತುವೆಗಳು ಕುಸಿದು ಸಂಪರ್ಕ ಕಡಿತವಾಗಿದೆ. ವಿದ್ಯುತ್ ಕಂಬಗಳು ಧರೆಗುರುಳಿದ್ದು, ಅನೇಕ ಗ್ರಾಮಗಳು ಸಂಪೂರ್ಣ ಮುಳುಗಡೆಯಾಗಿವೆ.
ರೈತರ ಬಗ್ಗೆ ಅಪಾರ ಕಾಳಜಿ ಹೊಂದಿರುವ ತಾವು ಬೀದರ್ ಜಿಲ್ಲೆಯಲ್ಲಿ ವೈಮಾನಿಕ ಸಮೀಕ್ಷೆ ನಡೆಸಿ ತುರ್ತು ಪರಿಹಾರ ಹಾಗೂ ವಿಶೇಷ ಪ್ಯಾಕೇಜ್ ಘೋಷಿಸಬೇಕು ಎಂದು ವಿನಂತಿ ಮಾಡಿದ್ದೇನೆ ಎಂದರು.
ಇದಕ್ಕೆ ಸಿಎಂ ಸಿದ್ದರಾಮಯ್ಯ ಅವರು ಕೂಡ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಹೇಳಿದರು. ಈ ಹಿನ್ನೆಲೆಯಲ್ಲಿ ನಾಳೆ ಸಿಎಂ ಸಿದ್ದರಾಮಯ್ಯ ಅವರು ಬೀದರ್ನಲ್ಲಿ ಮಳೆಹಾನಿ ಪ್ರದೇಶದಲ್ಲಿ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ.
ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…
ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್ಟಿಆರ್ ಹಾಗೂ ಎಚ್ಎಸ್ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…