ಬೆಂಗಳೂರು: ಕಬ್ಬನ್ ಪಾರ್ಕ್ನಲ್ಲಿ ಫ್ಲವರ್ ಶೋಗೆ ಸಿಎಸ್ ಶಾಲಿನಿ ರಜನೀಶ್ ಚಾಲನೆ ನೀಡಿದ್ದಾರೆ.
10 ವರ್ಷಗಳ ಬಳಿಕ ಕನ್ನಡ ರಾಜ್ಯೋತ್ಸವ ಹಾಗೂ ಮಕ್ಕಳ ದಿನಾಚರಣೆಯ ಅಂಗವಾಗಿ ಕಬ್ಬನ್ ಪಾರ್ಕ್ನಲ್ಲಿ ಪುಷ್ಪ ಪ್ರದರ್ಶನ ನಡೆಯುತ್ತಿದೆ.
ಇಂದಿನಿಂದ ಡಿಸೆಂಬರ್.27ರವರೆಗೆ ಕಬ್ಬನ್ ಪಾರ್ಕ್ನಲ್ಲಿ ಪುಷ್ಪ ಮೇಳ ನಡೆಯಲಿದೆ. ಆಕರ್ಷಕ ಕಲಾಕೃತಿಗಳು, ವಿವಿಧ ಬಗೆಯ ಹೂವುಗಳು ಕಬ್ಬನ್ ಪಾರ್ಕ್ನಲ್ಲಿ ಮೇಳೈಸಿದ್ದು, ಜನರು ಸಂಭ್ರಮದಿಂದ ಕಣ್ತುಂಬಿಕೊಳ್ಳುತ್ತಿದ್ದಾರೆ.
ಫ್ಲವರ್ ಶೋಗೆ ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಪ್ರವೇಶವಿದೆ. ದೊಡ್ಡವರಿಗೆ 30 ರೂಪಾಯಿ ಹಾಗೂ ಮಕ್ಕಳಿಗೆ 10 ರೂಪಾಯಿ ಶುಲ್ಕ ನಿಗದಿ ಪಡಿಸಲಾಗಿದೆ.
ತೋಟಗಾರಿಕೆ ಇಲಾಖೆ ಪುಷ್ಪ ಪ್ರದರ್ಶನದ ಜೊತೆಗೆ ಕಲಾ, ಸಂಸ್ಕೃತಿ ಹಬ್ಬವನ್ನೂ ಆಯೋಜಿಸಿದೆ. ಬೆಳಿಗ್ಗೆ 6 ಗಂಟೆಯಿಂದ ಸಂಜೆ 7 ಗಂಟೆಯವರೆಗೆ ಪುಷ್ಪ ಪ್ರದರ್ಶನ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿದೆ.
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…
ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…
ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…