ರಾಜ್ಯ

ಮಡಿಕೇರಿ| ನಿವೃತ್ತ ಪೊಲೀಸ್ ಅಧಿಕಾರಿಯ ಮನೆಯಲ್ಲಿ ದರೋಡೆ: ಆರೋಪಿ ಬಂಧನ

ಮಡಿಕೇರಿ : ನಗರದ ಮನೆಯೊಂದರಲ್ಲಿದ್ದ ವೃದ್ಧ ಮಹಿಳೆಯ ಮೇಲೆ ಹಲ್ಲೆ ಮಾಡಿ ದರೋಡೆ ನಡೆಸಿದ ಘಟನೆಗೆ ಸಂಬಂಧಿಸಿ ಆರೋಪಿಯನ್ನು ಬಂಧಿಸುವಲ್ಲಿ ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ.

ಬಂಧಿತನನ್ನು ರಾಜಸ್ಥಾನ ಮೂಲದ ವಿಕಾಸ್ ಜೋರ್ಡಿಯಾ (33) ಎಂದು ಗುರುತಿಸಲಾಗಿದ್ದು, ಈತನ ಬಳಿಯಲ್ಲಿದ್ದ 27 ಗ್ರಾಂನ ಚಿನ್ನಾಭರಣವನ್ನು ವಶಪಡಿಸಿಕೊಳ್ಳಲಾಗಿದೆ.

ನಗರದ ಐಡಿಬಿಐ ಬ್ಯಾಂಕ್ ಮುಂಭಾಗದ ಮನೆಯ ನಿವಾಸಿ, ಬಿ.ಇ.ಸಾಕಮ್ಮ ಪ್ರಭಾಕರ ಎಂಬವರ ಮೇಲೆ ರವಿವಾರ ಸಂಜೆ ಸುಮಾರು 6 ಗಂಟೆಯ ಹೊತ್ತಿಗೆ, ಮನೆಗೆ ಹಿಂಭಾಗದಿಂದ ಅಕ್ರಮವಾಗಿ ಪ್ರವೇಶಿಸಿದ ಆರೋಪಿ, ಸಾಕಮ್ಮ ಅವರ ಮೇಲೆ ಹಲ್ಲೆ ನಡೆಸಿ ಮಾಂಗಲ್ಯ ಸರ ಹಾಗೂ ಉಂಗುರವನ್ನು ದರೋಡೆ ಮಾಡಿದ್ದ ಎಂದು ಹೇಳಲಾಗಿದೆ.

ಕ್ಷಿಪ್ರ ಕಾರ್ಯಾಚರಣೆ- ಘಟನೆ ನಡೆದ ಬಳಿಕ ಎಸ್‌ಪಿ ಕೆ. ರಾಮರಾಜನ್, ಎಎಸ್‌ಪಿ ಸುಂದರ್ ರಾಜ್ ಕೆ.ಎಸ್. ಅವರ ಮಾರ್ಗದರ್ಶನದಲ್ಲಿ ಮಡಿಕೇರಿ ಪೊಲೀಸ್ ಠಾಣೆಯ ಪಿಎಸ್‌ಐ ಲೋಕೇಶ್ ಹಾಗೂ ಸಿಬ್ಬಂದಿಗಳು ಘಟನಾ ಸ್ಥಳಕ್ಕೆ ತಕ್ಷಣ ಭೇಟಿ ನೀಡಿ, ಸಾಕ್ಷಾಧಾರಗಳನ್ನು ಕಲೆಹಾಕಿದ್ದರಾದರೆ, ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯ ಪಿಐ ಉಮೇಶ್, ಉಪ್ಪಳಿಕೆ ಅವರು ಎಲ್ಲಾ ಹೊಟೇಲ್, ಹೋಂ ಸ್ಟೇ ಮತ್ತು ರೆಸಾರ್ಟ್ ಮಾಹಿತಿ ನೀಡಿ ಆರೋಪಿ ಪತ್ತೆಗಾಗಿ ಕಾರ್ಯಾಚರಣೆ ನಡೆಸಿದ್ದರು.

ಪ್ರಕರಣವನ್ನು ಭೇದಿಸುವ ಸಲುವಾಗಿ ಮಡಿಕೇರಿ ನಗರ ವೃತ್ತದ ಸಿಪಿಐ ಅನೂಪ್ ಮಾದಪ್ಪ ಅವರು ಉಪವಿಭಾಗ ಮಟ್ಟದಲ್ಲಿ ಮಡಿಕೇರಿ ನಗರ ಪೊಲೀಸ್ ಠಾಣೆ ಹಾಗೂ ಸಿಬ್ಬಂದಿಗಳು ಮತ್ತು ಡಿಸಿಆರ್‌ಬಿ ಸಿಬ್ಬಂದಿಗಳನ್ನು ಒಳಗೊಂಡಂತೆ ವಿಶೇಷ ತಂಡವನ್ನು ರಚಿಸಿ ತನಿಖೆ ಕೈಗೊಂಡು, ನಗರದಂಚಿನ ಇಬ್ಬನಿ ರೆಸಾರ್ಟ್ ನಲ್ಲಿ ಹೌಸ್ ಕೀಪಿಂಗ್ ಕೆಲಸ ಮಾಡುತ್ತಿದ್ದ ಆರೋಪಿ ವಿಕಾಸ್ ಜೋರ್ಡಿಯಾನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಪ್ರಕರಣವನ್ನು ಭೇದಿಸುವಲ್ಲಿ ಕಾರ್ಯನಿರ್ವಹಿಸಿದ ಅಧಿಕಾರಿ ಹಾಗೂ ಸಿಬ್ಬಂದಿಗಳನ್ನು ಎಎಸ್‌ಪಿ ಕೆ. ರಾಮರಾಜನ್ ಶ್ಲಾಘಿಸಿದ್ದಾರೆ.

andolanait

Recent Posts

ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರ ದಾಳಿ: ಇಬ್ಬರ ಬಂಧನ

ಮಹೇಂದ್ರ ಹಸಗೂಲಿ, ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಪಟ್ಟಣದ ಜನತಾ ಕಾಲೋನಿಯ ಮನೆಯೊಂದರ ಮೇಲೆ ಪೊಲೀಸರು ದಾಳಿ ನಡೆಸಿ ವೇಶ್ಯಾವಾಟಿಕೆ…

8 hours ago

ಭಾರತ-ಯುರೋಪ್‌ ಒಕ್ಕೂಟ ವ್ಯಾಪಾರ ಒಪ್ಪಂದಕ್ಕೆ ಸಹಿ

ನವದೆಹಲಿ: ಮದರ್‌ ಆಫ್‌ ಆಲ್‌ ಡೀಲ್ಸ್‌ ಎಂದೇ ಕರೆಯಲ್ಪಡುವ ಭಾರತ-ಯುರೋಪ್‌ ಒಕ್ಕೂಟವು ಮುಕಕ್ತ ವ್ಯಾಪಾರ ಒಪ್ಪಂದಕ್ಕೆ ಇಂದು ಅಧಿಕೃತವಾಗಿ ಸಹಿ…

12 hours ago

ಶಿಡ್ಲಘಟ್ಟ ಕೇಸ್‌ನಲ್ಲಿ ಕಾನೂನಿನಂತೆ ಕ್ರಮ: ಸಚಿವ ಭೈರತಿ ಸುರೇಶ್‌

ಬೆಂಗಳೂರು: ಶಿಡ್ಲಘಟ್ಟದಲ್ಲಿ ಪೌರಾಯುಕ್ತಗೆ ಧಮ್ಕಿ ಹಾಕಿದ ಪ್ರಕರಣದಲ್ಲಿ ಕಾಂಗ್ರೆಸ್‌ ಮುಖಂಡ ರಾಜೀವ್‌ಗೌಡನನ್ನು ಸರ್ಕಾರ ರಕ್ಷಣೆ ಮಾಡಲ್ಲ. ಕಾನೂನು ಪ್ರಕಾರ ಶಿಕ್ಷೆ…

13 hours ago

ಪಿರಿಯಾಪಟ್ಟಣ: ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ: ಸವಾರ ಸಾವು

ಪಿರಿಯಾಪಟ್ಟಣ: ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್‌ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗೋಣಿಕೊಪ್ಪ-ಪಿರಿಯಾಪಟ್ಟಣ ರಸ್ತೆಯಲ್ಲಿ ನಡೆದಿದೆ. ತಾಲ್ಲೂಕಿನ…

13 hours ago

ವಿಜಯಾ ದಬ್ಬೆ ಸಾಹಿತ್ಯ ಪ್ರಶಸ್ತಿ: ಲೇಖಕಿಯರಿಂದ ಕಥಾಸಂಕಲನ ಆಹ್ವಾನ

ಮೈಸೂರು: ಮೈಸೂರಿನ ಸಮತಾ ಅಧ್ಯಯನ ಕೇಂದ್ರ(ರಿ)ವು ಸಂಸ್ಥಾಪಕ ಅಧ್ಯಕ್ಷೆ, ಖ್ಯಾತ ಸ್ತ್ರೀವಾದಿ ವಿಮರ್ಶಕಿ ಹಾಗೂ ಲೇಖಕಿ ಡಾ.ವಿಜಯಾ ದಬ್ಬೆ ಅವರ ಹೆಸರಿನಲ್ಲಿ 2022…

13 hours ago

ಗುಂಡ್ಲುಪೇಟೆ: ಬೊಮ್ಮಲಾಪುರದಲ್ಲಿ ವಾಸದ ಮನೆಗೆ ನುಗ್ಗಿದ ಕಡವೆ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೊಮ್ಮಲಾಪುರ ಗ್ರಾಮದ ದೊರೆ ಎಂಬುವವರ ವಾಸದ ಮನೆಗೆ ನುಗ್ಗಿದ ಕಡವೆಯನ್ನು…

13 hours ago