ಮಡಿಕೇರಿ : ನಗರದ ಮನೆಯೊಂದರಲ್ಲಿದ್ದ ವೃದ್ಧ ಮಹಿಳೆಯ ಮೇಲೆ ಹಲ್ಲೆ ಮಾಡಿ ದರೋಡೆ ನಡೆಸಿದ ಘಟನೆಗೆ ಸಂಬಂಧಿಸಿ ಆರೋಪಿಯನ್ನು ಬಂಧಿಸುವಲ್ಲಿ ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ.
ಬಂಧಿತನನ್ನು ರಾಜಸ್ಥಾನ ಮೂಲದ ವಿಕಾಸ್ ಜೋರ್ಡಿಯಾ (33) ಎಂದು ಗುರುತಿಸಲಾಗಿದ್ದು, ಈತನ ಬಳಿಯಲ್ಲಿದ್ದ 27 ಗ್ರಾಂನ ಚಿನ್ನಾಭರಣವನ್ನು ವಶಪಡಿಸಿಕೊಳ್ಳಲಾಗಿದೆ.
ನಗರದ ಐಡಿಬಿಐ ಬ್ಯಾಂಕ್ ಮುಂಭಾಗದ ಮನೆಯ ನಿವಾಸಿ, ಬಿ.ಇ.ಸಾಕಮ್ಮ ಪ್ರಭಾಕರ ಎಂಬವರ ಮೇಲೆ ರವಿವಾರ ಸಂಜೆ ಸುಮಾರು 6 ಗಂಟೆಯ ಹೊತ್ತಿಗೆ, ಮನೆಗೆ ಹಿಂಭಾಗದಿಂದ ಅಕ್ರಮವಾಗಿ ಪ್ರವೇಶಿಸಿದ ಆರೋಪಿ, ಸಾಕಮ್ಮ ಅವರ ಮೇಲೆ ಹಲ್ಲೆ ನಡೆಸಿ ಮಾಂಗಲ್ಯ ಸರ ಹಾಗೂ ಉಂಗುರವನ್ನು ದರೋಡೆ ಮಾಡಿದ್ದ ಎಂದು ಹೇಳಲಾಗಿದೆ.
ಕ್ಷಿಪ್ರ ಕಾರ್ಯಾಚರಣೆ- ಘಟನೆ ನಡೆದ ಬಳಿಕ ಎಸ್ಪಿ ಕೆ. ರಾಮರಾಜನ್, ಎಎಸ್ಪಿ ಸುಂದರ್ ರಾಜ್ ಕೆ.ಎಸ್. ಅವರ ಮಾರ್ಗದರ್ಶನದಲ್ಲಿ ಮಡಿಕೇರಿ ಪೊಲೀಸ್ ಠಾಣೆಯ ಪಿಎಸ್ಐ ಲೋಕೇಶ್ ಹಾಗೂ ಸಿಬ್ಬಂದಿಗಳು ಘಟನಾ ಸ್ಥಳಕ್ಕೆ ತಕ್ಷಣ ಭೇಟಿ ನೀಡಿ, ಸಾಕ್ಷಾಧಾರಗಳನ್ನು ಕಲೆಹಾಕಿದ್ದರಾದರೆ, ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯ ಪಿಐ ಉಮೇಶ್, ಉಪ್ಪಳಿಕೆ ಅವರು ಎಲ್ಲಾ ಹೊಟೇಲ್, ಹೋಂ ಸ್ಟೇ ಮತ್ತು ರೆಸಾರ್ಟ್ ಮಾಹಿತಿ ನೀಡಿ ಆರೋಪಿ ಪತ್ತೆಗಾಗಿ ಕಾರ್ಯಾಚರಣೆ ನಡೆಸಿದ್ದರು.
ಪ್ರಕರಣವನ್ನು ಭೇದಿಸುವ ಸಲುವಾಗಿ ಮಡಿಕೇರಿ ನಗರ ವೃತ್ತದ ಸಿಪಿಐ ಅನೂಪ್ ಮಾದಪ್ಪ ಅವರು ಉಪವಿಭಾಗ ಮಟ್ಟದಲ್ಲಿ ಮಡಿಕೇರಿ ನಗರ ಪೊಲೀಸ್ ಠಾಣೆ ಹಾಗೂ ಸಿಬ್ಬಂದಿಗಳು ಮತ್ತು ಡಿಸಿಆರ್ಬಿ ಸಿಬ್ಬಂದಿಗಳನ್ನು ಒಳಗೊಂಡಂತೆ ವಿಶೇಷ ತಂಡವನ್ನು ರಚಿಸಿ ತನಿಖೆ ಕೈಗೊಂಡು, ನಗರದಂಚಿನ ಇಬ್ಬನಿ ರೆಸಾರ್ಟ್ ನಲ್ಲಿ ಹೌಸ್ ಕೀಪಿಂಗ್ ಕೆಲಸ ಮಾಡುತ್ತಿದ್ದ ಆರೋಪಿ ವಿಕಾಸ್ ಜೋರ್ಡಿಯಾನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಪ್ರಕರಣವನ್ನು ಭೇದಿಸುವಲ್ಲಿ ಕಾರ್ಯನಿರ್ವಹಿಸಿದ ಅಧಿಕಾರಿ ಹಾಗೂ ಸಿಬ್ಬಂದಿಗಳನ್ನು ಎಎಸ್ಪಿ ಕೆ. ರಾಮರಾಜನ್ ಶ್ಲಾಘಿಸಿದ್ದಾರೆ.
ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…
ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…
ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…
ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…
ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…
ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…