ಬೆಂಗಳೂರು: ರಾಜ್ಯದಲ್ಲಿ ಬಾಣಂತಿಯರ ಸರಣಿ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮತ್ತೊಂದು ಕ್ರಮ ಕೈಗೊಂಡಿದ್ದು, ಆಹಾರ ಸುರಕ್ಷತಾ ಇಲಾಖೆ ಹಾಗೂ ಔಷಧ ನಿಯಂತ್ರಣ ಇಲಾಖೆ ವಿಲೀನಗೊಳಿಸಿದೆ.
ಈಗ ಎರಡು ಇಲಾಖೆಯನ್ನು ವಿಲೀನಗೊಳಿಸಿ ಆಹಾರ ಸುರಕ್ಷತೆ ಹಾಗೂ ಔಷಧ ಆಡಳಿತ ಎಂದು ಹೊಸ ಮರುನಾಮಕರಣ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ರಾಜ್ಯದಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಸಮುದಾಯದ ಜನರಿಗೆ ಆರೋಗ್ಯ ಸೇವೆಗಾಗಿ, ಹೆಚ್ಚಿನ ಚಿಕಿತ್ಸಾ ವೆಚ್ಚ ಇರುವ ಕಾಯಿಲೆಗಳಿಗೆ ಹಾಗೂ ವಿರಳ ಆರೋಗ್ಯ ಸೇವೆ ಒದಗಿಸಲು ಕಾರ್ಫಸ್ ಫಂಡ್ ಮೀಸಲಿಟ್ಟಿದೆ. ಇದಕ್ಕಾಗಿ ಸರ್ಕಾರ ಒಟ್ಟು 45 ಕೋಟಿಯನ್ನು ಮೀಸಲಿಟ್ಟಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಇನನು ಬಳ್ಳಾರಿ ಹಾಗೂ ಬೆಳಗಾವಿಯಲ್ಲಿ ಬಾಣಂತಿಯರ ಸಾವು ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿ ಬೀಳುವಂತೆ ಮಾಡಿದೆ. ಬೆಳಗಾವಿಯ ಕುಂದಾನಗರಿಯ ಸರ್ಕಾರಿ ಆಸ್ಪತ್ರೆಗಳಲ್ಲಿ ಕೇವಲ ಆರು ತಿಂಗಳಿನಲ್ಲಿಯೇ 322 ಶಿಶುಗಳು ಮತ್ತು 29 ಬಾಣಂತಿಯರು ಮೃತಪಟ್ಟಿದ್ದಾರೆ. ಅಲ್ಲದೇ ರಾಯಚೂರಿನಲ್ಲಿ ಅಕ್ಟೋಬರ್ ತಿಂಗಳಿನಲ್ಲಿ ನಾಲ್ವರು ಬಾಣಂತಿಯರು ಸಾವನ್ನಪ್ಪಿದ್ದಾರೆ.
ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಆರೋಗ್ಯ ಇಲಾಖೆಯಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದು, ಮುಂದಿನ ದಿನಗಳಲ್ಲಿ ಆರೋಗ್ಯ ಇಲಾಖೆಯಲ್ಲಿ ಭಾರೀ ಸುಧಾರಣೆ ತರಲಿದೆ ಎಂಬ ಮಾಹಿತಿ ಲಭ್ಯವಾಗಿದೆ.
ತಾಯಿ ಮತ್ತು ಮಕ್ಕಳ ಕಲ್ಯಾಣ ಯೋಜನೆ ಸಂಬಂಧ ರಾಜ್ಯ ಸರ್ಕಾರ ಹತ್ತು ಹಲವು ಯೋಜನೆಗಳನ್ನು ಜಾರಿಗೆ ತರಲು ಮುಂದಾಗಿದೆ ಎನ್ನಲಾಗಿದೆ.
ಬೆಂಗಳೂರು: ಜನವರಿ.16ರಂದು ನಾನು ದೆಹಲಿಗೆ ಹೋಗುತ್ತೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಇಂದು ಬೆಳಿಗ್ಗೆ ಪ್ರಯತ್ನ ವಿಫಲವಾದರೂ ಪ್ರಾರ್ಥನೆ…
ಥೈಲ್ಯಾಂಡ್ನ ಈಶಾನ್ಯದಲ್ಲಿ ಕ್ರೇನ್ ರೈಲಿನ ಮೇಲೆ ಬಿದ್ದು ಹಳಿತಪ್ಪಿದ ಪರಿಣಾಮ ಕನಿಷ್ಠ 22 ಮಂದಿ ಸಾವನ್ನಪ್ಪಿ ಹಲವರು ಗಾಯಗೊಂಡಿದ್ದಾರೆ ಎಂದು…
ಹಾಸನ: ಅಂಗಡಿಯಲ್ಲಿ ವ್ಯಾಪಾರ ಮಾಡುವಾಗಲೇ ಕುಸಿದು ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆ ಅರಸೀಕೆರೆ ಪಟ್ಟಣದಲ್ಲಿ ನಡೆದಿದೆ. ಪ್ರವೀಣ್(45)…
ಮಂಡ್ಯ: ಮಹಾರಾಷ್ಟ್ರ ರಾಜ್ಯದ ಚಾಕೋರು ಜಿಲ್ಲೆಯ ಲಾತೂರ್ನ ಬಿಎಸ್ಎಫ್ ತರಬೇತಿ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮಂಡ್ಯದ ಯೋಧ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.…
ಬೆಂಗಳೂರು: ಪ್ರಯತ್ನ ವಿಫಲವಾದರೂ ಪ್ರಾರ್ಥನೆ ವಿಫಲ ಆಗಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಟ್ವೀಟ್ ಮಾಡಿದ್ದಾರೆ. ನಿನ್ನೆ ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ…
ಪಟ್ಟಣಂತಿಟ್ಟ: ಶ್ರೀ ಕ್ಷೇತ್ರ ಶಬರಿಮಲೆ ಅಯ್ಯಪ್ಪಸ್ವಾಮಿ ದೇವಾಲಯದ ವಾರ್ಷಿಕ ಮಕರ ಜ್ಯೋತಿ ಇಂದು ದರ್ಶನವಾಗಲಿದೆ. ಇಂದು ಸಂಜೆ ಮಕರ ಜ್ಯೋತ…