ಬೆಂಗಳೂರು: ಆಹಾರ ಸುರಕ್ಷತೆ ಕಾಪಾಡಿಕೊಳ್ಳದ ಹಿನ್ನೆಲೆಯಲ್ಲಿ ರಾಜ್ಯದ 127 ಪಿಜಿಗಳಿಗೆ ಆಹಾರ ಸುರಕ್ಷತಾ ಮತ್ತು ಗುಣಮಟ್ಟ ಇಲಾಖೆ ನೋಟಿಸ್ ನೀಡಿ ಚುರುಕು ಮುಟ್ಟಿಸಿದೆ.
ರಾಜ್ಯದ 305 ಪಿಜಿಗಳಿಗೆ ದಾಳಿ ನಡೆಸಿದ ಅಧಿಕಾರಿಗಳು 127 ಪಿಜಿಗಳಲ್ಲಿ ಅನುಮಾನಗೊಂಡು ಆಹಾರ ಪದಾರ್ಥಗಳನ್ನು ಸಂಗ್ರಹಿಸಿದ್ದರು.
ಸಂಗ್ರಹಿಸಿದ್ದ ಆಹಾರ ಪದಾರ್ಥಗಳನ್ನು ಪರೀಕ್ಷಿಸಿದ ವೇಳೆ ಸುರಕ್ಷತೆ ಕಾಪಾಡದೇ ಇರುವುದು ಪತ್ತೆಯಾಗಿದೆ.
ಈ ಹಿನ್ನೆಲೆಯಲ್ಲಿ 127 ಪಿಜಿಗಳಿಗೆ ನೋಟಿಸ್ ನೀಡಲಾಗಿದೆ. ಅದರಲ್ಲಿ ನಾಲ್ಕು ಪಿಜಿಗಳಿಗೆ ಒಟ್ಟು 21,000 ರೂಪಾಯಿ ದಂಡ ವಿಧಿಸಲಾಗಿದೆ.
ಈ ಮೂಲಕ ಪಿಜಿಗಳಲ್ಲಿ ಉತ್ತಮ ಗುಣಮಟ್ಟದ ಆಹಾರ ನೀಡುವಂತೆ ಆಹಾರ ಸುರಕ್ಷತಾ ಹಾಗೂ ಗುಣಮಟ್ಟ ಇಲಾಖೆ ಸೂಚನೆ ನೀಡಿದ್ದು, ಒಂದು ವೇಳೆ ಅಶುಚಿತ್ವ ಕಂಡುಬಂದರೆ ಪಿಜಿಗಳನ್ನೇ ಮುಚ್ಚುವಂತೆ ಆದೇಶ ಹೊರಡಿಸಲಾಗುವುದು ಎಂದು ಖಡಕ್ ಎಚ್ಚರಿಕೆ ನೀಡಿದೆ.
ಜೀಪ್ ವ್ಯವಸ್ಥೆ ಮಾಡುವಂತೆ ತಹಸಿಲ್ದಾರ್ಗೆ ಮನವಿ ಮಾಡಿದ ಬಿಇಒ ಹನೂರು: ಹನೂರು ಶೈಕ್ಷಣಿಕ ವಲಯದ ಪಚ್ಚೆದೊಡ್ಡಿ ಗ್ರಾಮದ ಶಾಲೆಗೆ ಕ್ಷೇತ್ರ…
ಮಂಜು ಕೋಟೆ ಪ್ರತಿನಿತ್ಯ ಅಧಿಕಾರಿಗಳ ಬಳಿ ಅಲೆದಾಡುತ್ತಿರುವ ನೌಕರರು; ಕುಟುಂಬ ನಿರ್ವಹಣೆಗೆ ಪರದಾಟ ಎಚ್.ಡಿ.ಕೋಟೆ: ಪಟ್ಟಣದ ಪುರಸಭೆಯ ಪೌರಕಾರ್ಮಿಕರು ಮತ್ತು…
ಪುಸ್ತಕ ಪ್ರಿಯರಿಗಾಗಿ ರಿಯಾಯಿತಿ ದರದಲ್ಲಿ ಪುಸ್ತಕ ಮಾರಾಟ ಮೈಸೂರು: ವಿಶ್ವಕೋಶ, ಶಬ್ಧಕೋಶ, ಇಂಗ್ಲಿಷ್-ಕನ್ನಡ ನಿಘಂಟು, ಕನ್ನಡ-ಇಂಗ್ಲಿಷ್ ನಿಘಂಟು, ಕನ್ನಡ ಗ್ರಂಥಮಾಲೆ,…
ಕೆ.ಬಿ.ರಮೇಶನಾಯಕ ಅಕ್ಟೋಬರ್ ತಿಂಗಳ ಅಂತ್ಯಕ್ಕೆ ಶೇ.೮೨.೯೭ರಷ್ಟು ತೆರಿಗೆ ಸಂಗ್ರಹ ಮೈಸೂರು: ಗುತ್ತಿಗೆದಾರರಿಗೆ ಹಣ ಪಾವತಿಸಲಾಗದೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದ ಮೈಸೂರು…
ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…