ಬೆಂಗಳೂರು: ಆಹಾರ ಸುರಕ್ಷತೆ ಕಾಪಾಡಿಕೊಳ್ಳದ ಹಿನ್ನೆಲೆಯಲ್ಲಿ ರಾಜ್ಯದ 127 ಪಿಜಿಗಳಿಗೆ ಆಹಾರ ಸುರಕ್ಷತಾ ಮತ್ತು ಗುಣಮಟ್ಟ ಇಲಾಖೆ ನೋಟಿಸ್ ನೀಡಿ ಚುರುಕು ಮುಟ್ಟಿಸಿದೆ.
ರಾಜ್ಯದ 305 ಪಿಜಿಗಳಿಗೆ ದಾಳಿ ನಡೆಸಿದ ಅಧಿಕಾರಿಗಳು 127 ಪಿಜಿಗಳಲ್ಲಿ ಅನುಮಾನಗೊಂಡು ಆಹಾರ ಪದಾರ್ಥಗಳನ್ನು ಸಂಗ್ರಹಿಸಿದ್ದರು.
ಸಂಗ್ರಹಿಸಿದ್ದ ಆಹಾರ ಪದಾರ್ಥಗಳನ್ನು ಪರೀಕ್ಷಿಸಿದ ವೇಳೆ ಸುರಕ್ಷತೆ ಕಾಪಾಡದೇ ಇರುವುದು ಪತ್ತೆಯಾಗಿದೆ.
ಈ ಹಿನ್ನೆಲೆಯಲ್ಲಿ 127 ಪಿಜಿಗಳಿಗೆ ನೋಟಿಸ್ ನೀಡಲಾಗಿದೆ. ಅದರಲ್ಲಿ ನಾಲ್ಕು ಪಿಜಿಗಳಿಗೆ ಒಟ್ಟು 21,000 ರೂಪಾಯಿ ದಂಡ ವಿಧಿಸಲಾಗಿದೆ.
ಈ ಮೂಲಕ ಪಿಜಿಗಳಲ್ಲಿ ಉತ್ತಮ ಗುಣಮಟ್ಟದ ಆಹಾರ ನೀಡುವಂತೆ ಆಹಾರ ಸುರಕ್ಷತಾ ಹಾಗೂ ಗುಣಮಟ್ಟ ಇಲಾಖೆ ಸೂಚನೆ ನೀಡಿದ್ದು, ಒಂದು ವೇಳೆ ಅಶುಚಿತ್ವ ಕಂಡುಬಂದರೆ ಪಿಜಿಗಳನ್ನೇ ಮುಚ್ಚುವಂತೆ ಆದೇಶ ಹೊರಡಿಸಲಾಗುವುದು ಎಂದು ಖಡಕ್ ಎಚ್ಚರಿಕೆ ನೀಡಿದೆ.
ಕ್ಯಾರಕಾಸ್ : ವೆನೆಜುವೆಲಾ ಕರಾವಳಿಯ ಸಮೀಪ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳು ದೇಶವನ್ನು ಬೆಚ್ಚಿಬೀಳಿಸಿವೆ. ರಿಕ್ಟರ್ ಮಾಪಕದಲ್ಲಿ…
ಪ್ರೊ.ಬಿ.ಜಯಪ್ರಕಾಶ್ಗೌಡ ಬದುಕಿದ್ದರೆ ೧೦೯ ವರ್ಷಗಳನ್ನು ಪೂರೈಸುತ್ತಿದ್ದ ಸ್ವಾತಂತ್ರ್ಯ ಹೋರಾಟಗಾರ ಪಿ. ಎನ್. ಜವರಪ್ಪಗೌಡರು ನಮಗೆಲ್ಲರಿಗೂ ಮಾರ್ಗದರ್ಶಕರಾಗಿದ್ದವರು. ಜವರಪ್ಪಗೌಡರು ಗಾಂಧೀಜಿಯಿಂದ ಪ್ರಭಾವಿತರಾಗಿದ್ದರು.…
ಹಲಗೂರು: ಸಮೀಪದ ಪ್ರವಾಸಿ ತಾಣವಾದ ಮುತ್ತತ್ತಿಯ ಕಾವೇರಿ ನದಿಯಲ್ಲಿ ಸೆಲ್ಫಿ ತೆಗೆಯುವ ವೇಳೆ ಕಾಲು ಜಾರಿ ನೀರಿನ ಪ್ರಬಲ ಸೆಳೆತಕ್ಕೆ…
ಚಾಮರಾಜನಗರ: ನಗರದ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆಯ ಇ-ಮೇಲ್ ಸಂದೇಶ ಬಂದ ಹಿನ್ನೆಲೆಯಲ್ಲಿ ಪೊಲೀಸರು,…
ಚಾಮರಾಜನಗರ: ಬಿಆರ್ಟಿ ಹುಲಿ ಸಂರಕ್ಷಿತ ಪ್ರದೇಶದ ಪುಣಜನೂರು ವನ್ಯಜೀವಿ ವಲಯ ವ್ಯಾಪ್ತಿಯ ಕಾರೆಪಾಳ್ಯ ಗಸ್ತಿನ ಸಮೀಪ ಅರಣ್ಯ ಪ್ರದೇಶದಿಂದ ಸುಮಾರು…