ರಾಜ್ಯ

ಅಡಿಕೆ–ತೆಂಗು ರೈತರ ಸಂಕಷ್ಟ ನಿವಾರಣೆಗಾಗಿ ಕೇಂದ್ರ ಕೃಷಿ ಸಚಿವರ ಭೇಟಿ; ನಿಯೋಗದೊಂದಿಗೆ ಮನವಿ ಹೊಸದಿಲ್ಲಿ

ದಾವಣಗೆರೆ : ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವರಾದ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಕರ್ನಾಟಕದ ಸಂಸದರು ಮತ್ತು ಮುಖಂಡರ ನಿಯೋಗವು ಗುರುವಾರ ಭೇಟಿಯಾಗಿ, ತೆಂಗು ಮತ್ತು ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಸಂಕಷ್ಟ ಪರಿಹಾರಕ್ಕಾಗಿ ತುರ್ತು ಕ್ರಮಗಳನ್ನು ಕೈಗೊಳ್ಳುವಂತೆ ಮನವಿ ಸಲ್ಲಿಸಿದರು. ಈ ನಿಯೋಗದಲ್ಲಿ ದಾವಣಗೆರೆ ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರು ಉಪಸ್ಥಿತರಿದ್ದರು ಹಾಗೂ ದಾವಣಗೆರೆ ಕ್ಷೇತ್ರದಲ್ಲಿ ಅಡಿಕೆ ಬೆಳೆಗಾರರ ಸಂಕಷ್ಟಗಳ ಕುರಿತು ಗಮನಸೆಳೆದರು. ಈ ನಿಯೋಗವು ಅಡಿಕೆ ಮತ್ತು ಮಾನವ ಆರೋಗ್ಯದ ಮೇಲೆ “ಪ್ರಮಾಣಾಧಾರಿತ ಸಂಶೋಧನೆ” ನಡೆಸಲು ಕೃಷಿ ಸಚಿವಾಲಯ ಮಂಜೂರು ಮಾಡಿದ ನಿಧಿಗಳನ್ನು ತಕ್ಷಣ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿತು.

ಅಡಿಕೆ ರೈತರು ಎದುರಿಸುತ್ತಿರುವ ಹಳದಿ ಎಲೆ ಹಾಗೂ ಹುಳು ರೋಗಗಳಿಗೆ ಸಮಗ್ರ ದೀರ್ಘಕಾಲಿಕ ಅಧ್ಯಯನ ನಡೆಸಲು ಖ್ಯಾತ ವೈಜ್ಞಾನಿಕ ಸಂಸ್ಥೆಗಳ ಪಾಲ್ಗೊಳ್ಳುವಿಕೆ ಅಗತ್ಯವೆಂದು ತಿಳಿಸಲಾಯಿತು. ಅಡಿಕೆಯ ಅಕ್ರಮ ಆಮದು ತಡೆಗಟ್ಟಲು ಕಸ್ಟಮ್ಸ್ ವ್ಯವಸ್ಥೆಯನ್ನು ಬಲಪಡಿಸುವುದರ ಜೊತೆಗೆ, ಆಮದು ಅನುಮತಿಗೆ ಮುನ್ನ CAMPCO, TSS, MAMCOS ಮುಂತಾದ ಸಹಕಾರಿಗಳ ಸಲಹೆ ಪಡೆಯುವುದು ಸೂಕ್ತವೆಂದು ಸೂಚಿಸಲಾಯಿತು. ಹೆಚ್ಚಿನ ಪ್ರಮಾಣದ ಸಾಗಾಟಗಳಿಗೆ GPS ಟ್ರ್ಯಾಕಿಂಗ್ ಮತ್ತು ತಪಾಸಣಾ ಕೇಂದ್ರಗಳಲ್ಲಿ CCTV ಅಳವಡಿಕೆಯಿಂದ ಅಕ್ರಮ ವಹಿವಾಟು, ಅಂಡರ್-ಬಿಲ್ಲಿಂಗ್ ತಡೆಗಟ್ಟಲು ಸಾಧ್ಯವೆಂದು ಅಭಿಪ್ರಾಯ ವ್ಯಕ್ತವಾಯಿತು. ಅಡಿಕೆಯ ಮೇಲಿನ GST ದರವನ್ನು 5% ನಿಂದ 2% ಕ್ಕೆ ಇಳಿಸುವಂತೆ ಮನವಿ ಮಾಡಲಾಯಿತು. GPS ಟ್ರ್ಯಾಕಿಂಗ್ ಮತ್ತು ಇ-ಡಾಕ್ಯುಮೆಂಟೇಶನ್ ಕಡ್ಡಾಯಗೊಳಿಸಿದರೆ ತೆರಿಗೆ ನಷ್ಟವಿಲ್ಲದೆ ಆದಾಯವನ್ನು ಕಾಪಾಡಬಹುದೆಂದು ಸೂಚಿಸಲಾಯಿತು.

ಜೊತೆಗೆ, ಗೋದಾಮುಗಳ ಕೊರತೆಯಿಂದ ಸಣ್ಣ ರೈತರು ಕಡಿಮೆ ದರದಲ್ಲಿ ಮಾರಾಟ ಮಾಡುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾವಾರು ಗೋದಾಮು ನಿರ್ಮಾಣಕ್ಕೆ ಸಹಕಾರಿಗಳಿಗೆ ಸಬ್ಸಿಡಿ ಆಧಾರಿತ ನೆರವು ನೀಡುವಂತೆ ಮನವಿ ಮಾಡಲಾಯಿತು. ಇತ್ತೀಚೆಗೆ ಅಮೆರಿಕಾದಲ್ಲಿ ಅಡಿಕೆ ಎಲೆಗಳಿಂದ ತಯಾರಾದ ಬಯೋಡಿಗ್ರೇಡಬಲ್ ತಟ್ಟೆಗಳು ಕ್ಯಾನ್ಸರ್ ಉಂಟುಮಾಡುತ್ತವೆ ಎಂಬ ವರದಿ ರಫ್ತು ಹಾನಿಗೊಳಗಾಗಲು ಕಾರಣವಾದ ಹಿನ್ನೆಲೆಯಲ್ಲಿ, ಭಾರತದಲ್ಲಿಯೇ ವೈಜ್ಞಾನಿಕ ಅಧ್ಯಯನ ನಡೆಸಿ ಸೂಕ್ತ ಮಾಹಿತಿಯನ್ನು ಒದಗಿಸುವ ಅಗತ್ಯವಿದೆ ಎಂದು ತಿಳಿಸಲಾಯಿತು. ಹವಾಮಾನ ಬದಲಾವಣೆಯಿಂದ ಬೆಳೆಗಳಿಗೆ ಉಂಟಾಗುತ್ತಿರುವ ಪರಿಣಾಮಗಳನ್ನು ಗಮನಿಸಿ ಮಳೆ, ವಿಪತ್ತು ಹಾಗೂ ರೋಗಗಳ ಕುರಿತು ನಿಖರ ಮಾಹಿತಿ ಪಡೆಯಲು ಆಧುನಿಕ ತಂತ್ರಜ್ಞಾನ ಬಳಕೆಯ ಅಗತ್ಯತೆಯನ್ನು ನಿಯೋಗ ಒತ್ತಿ ಹೇಳಿತು. ಬೆಳೆ ವಿಮೆ ಯೋಜನೆಗಳನ್ನು ಬಲಿಷ್ಠ ಮತ್ತು ತಂತ್ರಜ್ಞಾನ ಆಧಾರಿತವಾಗಿಸಲು ಕೇಂದ್ರ–ರಾಜ್ಯ ಸರ್ಕಾರಗಳ ಸಮನ್ವಯ ಅಗತ್ಯವಿದೆ ಎಂಬ ಅಭಿಪ್ರಾಯ ವ್ಯಕ್ತವಾಯಿತು.

ದಾವಣಗೆರೆ ಕ್ಷೇತ್ರದ ಅಡಿಕೆ ಬೆಳೆಗಾರರ ಸಂಕಷ್ಟಗಳ ಕುರಿತು ಸಹ ನಿಯೋಗದಲ್ಲಿ ಪ್ರಸ್ತಾಪವಾಯಿತು.ಅಡಕೆಗೆ ಪ್ರತ್ಯೇಕ ‌ಮಂಡಳಿ ರಚನೆ ಕುರಿತು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಈಗಾಗಲೇ ಸದನದಲ್ಲಿ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದರು.ಕ್ಷೇತ್ರದ ಅಡಕೆಬೆಳಗಾರರ ಹಿತ ರಕ್ಷಣೆಗಾಗಿ ಸಂಸದರು‌‌ ಧ್ವನಿ ಎತ್ತಿದ್ದು ಬೆಳಗಾರರಲ್ಲಿ ಸಂತಸ ಮೂಡಿಸಿದೆ. ಈ ನಿಯೋಗದಲ್ಲಿ ಕೇಂದ್ರ ಭಾರಿ ಕೈಗಾರಿಕೆ ಮತ್ತು ಉಕ್ಕು ಸಚಿವರಾದ ಎಚ್.ಡಿ. ಕುಮಾರಸ್ವಾಮಿ, ಆಹಾರ, ಸಾರ್ವಜನಿಕ ವಿತರಣೆ ಮತ್ತು ನವೀಕರಿಸಬಹುದಾದ ಶಕ್ತಿ ಸಚಿವರಾದ ಪ್ರಹ್ಲಾದ್ ಜೋಶಿ, ರೈಲು ಮತ್ತು ಜಲಶಕ್ತಿ ರಾಜ್ಯ ಸಚಿವರಾದ ವಿ.ಸೋಮಣ್ಣ ಸೇರಿದಂತೆ ಸಂಸದರಾದ ವಿಶ್ವೇಶ್ವರ ಹೆಗಡೆ ಕಾಗೇರಿ, ಬಿ.ವೈ. ರಾಘವೇಂದ್ರ, ಕ್ಯಾಪ್ಟನ್ ಬ್ರಿಜೇಶ್ ಚೌಟಾ, ಕೋಟ ಶ್ರೀನಿವಾಸ ಪೂಜಾರಿ, ಯದುವೀರ್ ಒಡೆಯರ್, ಗೋವಿಂದ ಕಾರಜೋಳ, ಮಾಜಿ ಸಚಿವರಾದ ಅರಗ ಜ್ಞಾನೇಂದ್ರ ಹಾಗೂ ಕ್ಯಾಂಪ್ಕೋ ಅಧ್ಯಕ್ಷರಾದ ಕಿಶೋರ್ ಕೊಡ್ಗೆ ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

3 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

3 hours ago

ನೈಸ್ ಯೋಜನೆ ಸರ್ಕಾರದ ವಶಕ್ಕೆ ; ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದು ಒತ್ತಾಯಿಸಿದ ಹೆಚ್.ಡಿ.ಕುಮಾರಸ್ವಾಮಿ

ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…

3 hours ago

ಚಾಮರಾಜನಗರ ಶೂಟೌಟ್‌ ಪ್ರಕರಣ: ಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ

ಕೊಡಗು: ಚಾಮರಾಜನಗರದ ಹನೂರಿನಲ್ಲಿ ನಡೆದ ಶೂಟೌಟ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಕೊಡಗಿನಲ್ಲಿ ಮಾಧ್ಯಮದವರು…

5 hours ago

ಸಿಎಂ ಆದ ಬಳಿಕ ಮೊದಲ ಬಾರಿಗೆ ಕೊಡಗಿಗೆ ಡಿಕೆಶಿ ಭೇಟಿ

ಕೊಡಗು: ಸಿಎಂ ಡಿ.ಕೆ.ಶಿವಕುಮಾರ್‌ ಅವರಿಂದು ಕೊಡಗಿಗೆ ಭೇಟಿ ನೀಡಿದ್ದಾರೆ. ಕೊಡಗಿಗೆ ಆಗಮಿಸುತ್ತಿದ್ದಂತೆ ಕೊಡವ ಸಂಪ್ರದಾಯದಂತೆ ಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ಕೊಡವತಿಯರು…

6 hours ago

ಕೊಲೆ ಆರೋಪಿ ಪವಿತ್ರಾಗೌಡ ಬೇರೆ ಸೆಲ್‌ಗೆ ಶಿಫ್ಟ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾಗೌಡರನ್ನು ಪರಪ್ಪನ ಅಗ್ರಹಾರದಲ್ಲಿ ಬೇರೆ ಸೆಲ್‌ಗೆ ಶಿಫ್ಟ್‌ ಮಾಡಲಾಗಿದೆ. ಇಬ್ಬರ ಬ್ಯಾರಕ್‌ನಲ್ಲಿದ್ದ…

6 hours ago