ರಾಜ್ಯ

ಅಡಿಕೆ–ತೆಂಗು ರೈತರ ಸಂಕಷ್ಟ ನಿವಾರಣೆಗಾಗಿ ಕೇಂದ್ರ ಕೃಷಿ ಸಚಿವರ ಭೇಟಿ; ನಿಯೋಗದೊಂದಿಗೆ ಮನವಿ ಹೊಸದಿಲ್ಲಿ

ದಾವಣಗೆರೆ : ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವರಾದ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಕರ್ನಾಟಕದ ಸಂಸದರು ಮತ್ತು ಮುಖಂಡರ ನಿಯೋಗವು ಗುರುವಾರ ಭೇಟಿಯಾಗಿ, ತೆಂಗು ಮತ್ತು ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಸಂಕಷ್ಟ ಪರಿಹಾರಕ್ಕಾಗಿ ತುರ್ತು ಕ್ರಮಗಳನ್ನು ಕೈಗೊಳ್ಳುವಂತೆ ಮನವಿ ಸಲ್ಲಿಸಿದರು. ಈ ನಿಯೋಗದಲ್ಲಿ ದಾವಣಗೆರೆ ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರು ಉಪಸ್ಥಿತರಿದ್ದರು ಹಾಗೂ ದಾವಣಗೆರೆ ಕ್ಷೇತ್ರದಲ್ಲಿ ಅಡಿಕೆ ಬೆಳೆಗಾರರ ಸಂಕಷ್ಟಗಳ ಕುರಿತು ಗಮನಸೆಳೆದರು. ಈ ನಿಯೋಗವು ಅಡಿಕೆ ಮತ್ತು ಮಾನವ ಆರೋಗ್ಯದ ಮೇಲೆ “ಪ್ರಮಾಣಾಧಾರಿತ ಸಂಶೋಧನೆ” ನಡೆಸಲು ಕೃಷಿ ಸಚಿವಾಲಯ ಮಂಜೂರು ಮಾಡಿದ ನಿಧಿಗಳನ್ನು ತಕ್ಷಣ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿತು.

ಅಡಿಕೆ ರೈತರು ಎದುರಿಸುತ್ತಿರುವ ಹಳದಿ ಎಲೆ ಹಾಗೂ ಹುಳು ರೋಗಗಳಿಗೆ ಸಮಗ್ರ ದೀರ್ಘಕಾಲಿಕ ಅಧ್ಯಯನ ನಡೆಸಲು ಖ್ಯಾತ ವೈಜ್ಞಾನಿಕ ಸಂಸ್ಥೆಗಳ ಪಾಲ್ಗೊಳ್ಳುವಿಕೆ ಅಗತ್ಯವೆಂದು ತಿಳಿಸಲಾಯಿತು. ಅಡಿಕೆಯ ಅಕ್ರಮ ಆಮದು ತಡೆಗಟ್ಟಲು ಕಸ್ಟಮ್ಸ್ ವ್ಯವಸ್ಥೆಯನ್ನು ಬಲಪಡಿಸುವುದರ ಜೊತೆಗೆ, ಆಮದು ಅನುಮತಿಗೆ ಮುನ್ನ CAMPCO, TSS, MAMCOS ಮುಂತಾದ ಸಹಕಾರಿಗಳ ಸಲಹೆ ಪಡೆಯುವುದು ಸೂಕ್ತವೆಂದು ಸೂಚಿಸಲಾಯಿತು. ಹೆಚ್ಚಿನ ಪ್ರಮಾಣದ ಸಾಗಾಟಗಳಿಗೆ GPS ಟ್ರ್ಯಾಕಿಂಗ್ ಮತ್ತು ತಪಾಸಣಾ ಕೇಂದ್ರಗಳಲ್ಲಿ CCTV ಅಳವಡಿಕೆಯಿಂದ ಅಕ್ರಮ ವಹಿವಾಟು, ಅಂಡರ್-ಬಿಲ್ಲಿಂಗ್ ತಡೆಗಟ್ಟಲು ಸಾಧ್ಯವೆಂದು ಅಭಿಪ್ರಾಯ ವ್ಯಕ್ತವಾಯಿತು. ಅಡಿಕೆಯ ಮೇಲಿನ GST ದರವನ್ನು 5% ನಿಂದ 2% ಕ್ಕೆ ಇಳಿಸುವಂತೆ ಮನವಿ ಮಾಡಲಾಯಿತು. GPS ಟ್ರ್ಯಾಕಿಂಗ್ ಮತ್ತು ಇ-ಡಾಕ್ಯುಮೆಂಟೇಶನ್ ಕಡ್ಡಾಯಗೊಳಿಸಿದರೆ ತೆರಿಗೆ ನಷ್ಟವಿಲ್ಲದೆ ಆದಾಯವನ್ನು ಕಾಪಾಡಬಹುದೆಂದು ಸೂಚಿಸಲಾಯಿತು.

ಜೊತೆಗೆ, ಗೋದಾಮುಗಳ ಕೊರತೆಯಿಂದ ಸಣ್ಣ ರೈತರು ಕಡಿಮೆ ದರದಲ್ಲಿ ಮಾರಾಟ ಮಾಡುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾವಾರು ಗೋದಾಮು ನಿರ್ಮಾಣಕ್ಕೆ ಸಹಕಾರಿಗಳಿಗೆ ಸಬ್ಸಿಡಿ ಆಧಾರಿತ ನೆರವು ನೀಡುವಂತೆ ಮನವಿ ಮಾಡಲಾಯಿತು. ಇತ್ತೀಚೆಗೆ ಅಮೆರಿಕಾದಲ್ಲಿ ಅಡಿಕೆ ಎಲೆಗಳಿಂದ ತಯಾರಾದ ಬಯೋಡಿಗ್ರೇಡಬಲ್ ತಟ್ಟೆಗಳು ಕ್ಯಾನ್ಸರ್ ಉಂಟುಮಾಡುತ್ತವೆ ಎಂಬ ವರದಿ ರಫ್ತು ಹಾನಿಗೊಳಗಾಗಲು ಕಾರಣವಾದ ಹಿನ್ನೆಲೆಯಲ್ಲಿ, ಭಾರತದಲ್ಲಿಯೇ ವೈಜ್ಞಾನಿಕ ಅಧ್ಯಯನ ನಡೆಸಿ ಸೂಕ್ತ ಮಾಹಿತಿಯನ್ನು ಒದಗಿಸುವ ಅಗತ್ಯವಿದೆ ಎಂದು ತಿಳಿಸಲಾಯಿತು. ಹವಾಮಾನ ಬದಲಾವಣೆಯಿಂದ ಬೆಳೆಗಳಿಗೆ ಉಂಟಾಗುತ್ತಿರುವ ಪರಿಣಾಮಗಳನ್ನು ಗಮನಿಸಿ ಮಳೆ, ವಿಪತ್ತು ಹಾಗೂ ರೋಗಗಳ ಕುರಿತು ನಿಖರ ಮಾಹಿತಿ ಪಡೆಯಲು ಆಧುನಿಕ ತಂತ್ರಜ್ಞಾನ ಬಳಕೆಯ ಅಗತ್ಯತೆಯನ್ನು ನಿಯೋಗ ಒತ್ತಿ ಹೇಳಿತು. ಬೆಳೆ ವಿಮೆ ಯೋಜನೆಗಳನ್ನು ಬಲಿಷ್ಠ ಮತ್ತು ತಂತ್ರಜ್ಞಾನ ಆಧಾರಿತವಾಗಿಸಲು ಕೇಂದ್ರ–ರಾಜ್ಯ ಸರ್ಕಾರಗಳ ಸಮನ್ವಯ ಅಗತ್ಯವಿದೆ ಎಂಬ ಅಭಿಪ್ರಾಯ ವ್ಯಕ್ತವಾಯಿತು.

ದಾವಣಗೆರೆ ಕ್ಷೇತ್ರದ ಅಡಿಕೆ ಬೆಳೆಗಾರರ ಸಂಕಷ್ಟಗಳ ಕುರಿತು ಸಹ ನಿಯೋಗದಲ್ಲಿ ಪ್ರಸ್ತಾಪವಾಯಿತು.ಅಡಕೆಗೆ ಪ್ರತ್ಯೇಕ ‌ಮಂಡಳಿ ರಚನೆ ಕುರಿತು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಈಗಾಗಲೇ ಸದನದಲ್ಲಿ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದರು.ಕ್ಷೇತ್ರದ ಅಡಕೆಬೆಳಗಾರರ ಹಿತ ರಕ್ಷಣೆಗಾಗಿ ಸಂಸದರು‌‌ ಧ್ವನಿ ಎತ್ತಿದ್ದು ಬೆಳಗಾರರಲ್ಲಿ ಸಂತಸ ಮೂಡಿಸಿದೆ. ಈ ನಿಯೋಗದಲ್ಲಿ ಕೇಂದ್ರ ಭಾರಿ ಕೈಗಾರಿಕೆ ಮತ್ತು ಉಕ್ಕು ಸಚಿವರಾದ ಎಚ್.ಡಿ. ಕುಮಾರಸ್ವಾಮಿ, ಆಹಾರ, ಸಾರ್ವಜನಿಕ ವಿತರಣೆ ಮತ್ತು ನವೀಕರಿಸಬಹುದಾದ ಶಕ್ತಿ ಸಚಿವರಾದ ಪ್ರಹ್ಲಾದ್ ಜೋಶಿ, ರೈಲು ಮತ್ತು ಜಲಶಕ್ತಿ ರಾಜ್ಯ ಸಚಿವರಾದ ವಿ.ಸೋಮಣ್ಣ ಸೇರಿದಂತೆ ಸಂಸದರಾದ ವಿಶ್ವೇಶ್ವರ ಹೆಗಡೆ ಕಾಗೇರಿ, ಬಿ.ವೈ. ರಾಘವೇಂದ್ರ, ಕ್ಯಾಪ್ಟನ್ ಬ್ರಿಜೇಶ್ ಚೌಟಾ, ಕೋಟ ಶ್ರೀನಿವಾಸ ಪೂಜಾರಿ, ಯದುವೀರ್ ಒಡೆಯರ್, ಗೋವಿಂದ ಕಾರಜೋಳ, ಮಾಜಿ ಸಚಿವರಾದ ಅರಗ ಜ್ಞಾನೇಂದ್ರ ಹಾಗೂ ಕ್ಯಾಂಪ್ಕೋ ಅಧ್ಯಕ್ಷರಾದ ಕಿಶೋರ್ ಕೊಡ್ಗೆ ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ರಷ್ಯಾ ಮೇಲೆ ಉಕ್ರೇನ್‌ ಭೀಕರ ಡ್ರೋನ್‌ ದಾಳಿ: 4 ಮಂದಿ ಸಾವು

ಮಾಸ್ಕೋ: ಉಕ್ರೇನ್‌ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್‌ ದಾಳಿ ನಡೆಸಿದೆ. ಈ ವೈಮಾನಿಕ…

7 hours ago

ಮೈಸೂರಿನಲ್ಲಿ ಜನರೊಂದಿಗೆ ಜನತಾದಳ ಕಾರ್ಯಕ್ರಮ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ…

8 hours ago

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…

8 hours ago

ಕಳೆದ ಮೂರು ದಿನಗಳಿಂದ ಮಹದೇಶ್ವರ ಬೆಟ್ಟಕ್ಕೆ ಲಕ್ಷಾಂತದ ಮಂದಿ ಭಕ್ತರು ಭೇಟಿ

ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…

8 hours ago

ಕಾಡಿನಲ್ಲಿ ಅಕ್ರಮವಾಗಿ ಚರ್ಚ್‌ ನಿರ್ಮಾಣ: 40ಕ್ಕೂ ಹೆಚ್ಚು ಜನರ ಬಂಧನ

ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್‌ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…

9 hours ago

ಹಾರ್ಮುಜ್‌ ದಾಟಿ ಸುರಕ್ಷಿತವಾಗಿ ಭಾರತಕ್ಕೆ ಬಂತು 20,000 ಟನ್‌ ಎಲ್‌ಪಿಜಿ ಟ್ಯಾಂಕರ್‌

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್‍ಪಿಜಿಯನ್ನು ಹೊತ್ತ…

9 hours ago