ರಾಜ್ಯ

ಸಿದ್ದರಾಮಯ್ಯ ಯಾವ ಪುರುಷಾರ್ಥಕ್ಕೆ ಸಾಧನಾ ಸಮಾವೇಶ ಮಾಡುತ್ತಿದ್ದಾರೆ: ಅಶ್ವಥ್‌ ನಾರಾಯಣ್‌ ಪ್ರಶ್ನೆ

ಬೆಂಗಳೂರು : ಕಳೆದ ಎರಡೂವರೆ ವರ್ಷಗಳ ಅವಧಿಯಲ್ಲಿ ಯಾವುದೇ ಒಂದೇ ಒಂದು ಸಾಧನೆ ಮಾಡದಿದ್ದರೂ ಮೈಸೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಯಾವ ಪುರುಷಾರ್ಥಕ್ಕೆ ಸಾಧನಾ ಸಮಾವೇಶ ಮಾಡುತ್ತಿದ್ದಾರೆ ಎಂದು ಬಿಜೆಪಿ ಮಾಜಿ ಸಚಿವ ಹಾಗೂ ಶಾಸಕ ಅಶ್ವತ್ಥ ನಾರಾಯಣ ಪ್ರಶ್ನಿಸಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಅಧಿಕಾರಕ್ಕೆ ಬಂದ ನಂತರ ಕಾಂಗ್ರೆಸ್‌‍ ಸರ್ಕಾರ ಯಾವ ಕ್ಷೇತ್ರದಲ್ಲೂ ಹೇಳಿಕೊಳ್ಳುವಂತಹ ಸಾಧನೆ ಮಾಡಿಲ್ಲ. ಆದರೂ ಸಾಧನಾ ಸಮಾವೇಶ ಮಾಡಲು ಹೊರಟಿದೆ ಎಂದು ವಾಗ್ದಾಳಿ ನಡೆಸಿದರು.

ನಿಮ್ಮ ಸಾಧನೆ ಏನು ಅಂದರೆ, ಯಾವ ಸಚಿವರು ಎಷ್ಟು ದುಡ್ಡು ಹೊಡೆದರು ಎಂದು ಹೇಳಬೇಕು. ನಿಮ್ಮ ಸಾಧನೆ ಹಣ ಹೊಡೆದಿದ್ದು ಮಾತ್ರ. ಅವಕಾಶವಾದಿತನ ಹೇಗೆ ಬಳಸಿಕೊಂಡೆವು ಎನ್ನುವುದು. ತುಷ್ಟೀಕರಣ ಮಾಡಿ, ಕಾನೂನು ಸುವ್ಯವಸ್ಥೆ ಕುಸಿಯಲು ಅತ್ಯಂತ ಕೆಟ್ಟ ಆಡಳಿತ ನಿಮ್ಮದು ಎನ್ನುವುದೇ ಸಾಕ್ಷಿ ಎಂದು ಟೀಕಾಪ್ರಹಾರ ನಡೆಸಿದರು.

ಕಾಂಗ್ರೆಸ್‌‍ ಆಡಳಿತಕ್ಕೆ ಬಂದು ದುರಾಡಳಿತ ನೀಡುತ್ತಿದೆ. ಜನರನ್ನ ನಂಬಿಸಿ ಹೆಚ್ಚು ಬಹುಮತ ಪಡೆದಿದೆ. ಸರ್ಕಾರ ಆರಂಭದ ದಿನಗಳಿಂದಲೂ ಜನರಿಗೆ ಅನ್ಯಾಯ, ದ್ರೋಹ, ಭ್ರಷ್ಟಾಚಾರ ಮಾಡುತ್ತಾ ಬಂದಿದೆ. ಈ ರೀತಿ ಸರ್ಕಾರ ನೂರಾರು ಹಗರಣ ಮಾಡಿದೆ ಎಂದು ಆರೋಪಿಸಿದರು.

ಒಂದು ಒಳ್ಳೆಯ ಕೆಲಸ ಮಾಡಿಲ್ಲ. ಒಂದೇ ಒಂದು ಸಾಧನೆ ಮಾಡದಿದ್ದರೂ ಮೈಸೂರಿನಲ್ಲಿ ಸಾಧನಾ ಸಮಾವೇಶ ಮಾಡಲು ಹೊರಟಿದ್ದಾರೆ. ಯಾವ ಆತ್ಮಸಾಕ್ಷಿಯ ಮೇಲೆ ಸಮಾವೇಶ ಮಾಡಲು ಹೊರಟಿದ್ದಾರೆ. ಮುಡಾ ಹಗರಣ ನಡೆದಿದೆ, ಸಿಎಂ ಆದವರು ಈ ಬಗ್ಗೆ ಏನು ಹೇಳುತ್ತಾರೆ. ನಿವೇಶನ ಏಕೆ ವಾಪಸ್‌‍ ಕೊಟ್ಟಿದ್ದಾರೆ ಎಂದು ಪ್ರಶ್ನೆ ಮಾಡಿದರು.

ಕಮೀಷನ್‌ ಪಡೆದು, ಶೇ. 80-90 ರಷ್ಟು ಭ್ರಷ್ಟಾಚಾರ ಮಾಡಿದ್ದಾರೆ. ಅನೇಕರು ಹಣದ ವಿಚಾರದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಸರ್ಕಾರದ ಅವಧಿಯಲ್ಲಿ ಅಧಿಕಾರಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇತಿಹಾಸದಲ್ಲಿ ಮೊದಲ ಬಾರಿಗೆ ಅಧಿಕಾರಿಗಳೇ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಸ್ಮಾರ್ಟ್‌ ಮೀಟರ್‌ ಹಗರಣ, ಬೆಲೆ ಏರಿಕೆ, ಮಹಾರಾಷ್ಟ್ರದಲ್ಲಿ ವಿದ್ಯುತ್‌ ದರ ಇಳಿಸುತ್ತಿದ್ದಾರೆ. ಇಲ್ಲಿ ನೋಡಿದರೆ ಪ್ರತಿಯೊಂದು ದರ ಹೆಚ್ಚಳ ಮಾಡುತ್ತಿದ್ದಾರೆ. ಔಷಧಿ ಕೊಡಲಾಗದ ಸರ್ಕಾರ, ಬಾಣಂತಿಯರ ಸರಣಿ ಸಾವಾಗಿದೆ. ಕಾಲ್ತುಳಿತದಿಂದ ಸಾವು ನಡೆದಿದೆ, ಅದನ್ನೂ ಸಮರ್ಥನೆ ಮಾಡಿಕೊಳ್ಳುತ್ತಿದ್ದಾರೆ. ಗ್ಯಾರಂಟಿ ದುಡ್ಡು ಕೊಡಲು, ಗ್ಯಾರಂಟಿ ಇಲ್ಲ ಅಂತಿದ್ದಾರೆ. ಗ್ಯಾರಂಟಿ ಸಮಿತಿ ಸದಸ್ಯರೇ ದುಡ್ಡು ಕೊಡಲು ಹಣ ಇಲ್ಲ ಎನ್ನುತ್ತಾರೆ. ಅದೇನು ಸಂಬಳಾನಾ ಕೊಡೋಕೆ ಅಂತಿದ್ದಾರೆ. ನೇರವಾಗಿ ಜನರ ಜೇಬಿಂದ ಹಣ ತಗೋತಿದ್ರೆ, ಅದು ಕಾಂಗ್ರೆಸ್‌‍ ಸರ್ಕಾರ ಎಂದು ಕಿಡಿಕಾರಿದರು.

ಆಂದೋಲನ ಡೆಸ್ಕ್

Recent Posts

ಗುಂಡ್ಲುಪೇಟೆ: ಗಾಳಿ ಮಳೆಗೆ ಜಗಲಿ ಕಟ್ಟೆಯ ಬುಗರಿ ಮರ ಬಿದ್ದು ಮನೆ ಜಖಂ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು  ಗುಂಡ್ಲುಪೇಟೆ: ಗಾಳಿ ಮಳೆಗೆ ಜಗಲಿ ಕಟ್ಟೆಯ ಬುಗರಿ ಮರ ಬಿದ್ದು ಮನೆ ಜಖಂಗೊಂಡಿರುವ…

7 hours ago

ಗುಂಡ್ಲುಪೇಟೆ: ಮದ್ದೂರು ವಲಯದಲ್ಲಿ ಮೃತ ಹುಲಿ ಕಳೇಬರ ಪತ್ತೆ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ‌ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ವಲಯದ ಮಾರಿಗುಡಿ ಬೀಟ್…

7 hours ago

ಭಾರತದಲ್ಲಿ ಕಚ್ಚಾ ತೈಲ ಸಾಕಷ್ಟು ಲಭ್ಯವಿದೆ: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ದೇಶದಲ್ಲಿ ಕಚ್ಚಾ ತೈಲ ಸಾಕಷ್ಟು ಲಭ್ಯವಿದೆ. ಭಾರತವು ಕಚ್ಚಾ ತೈಲಕ್ಕಾಗಿ ಸಾಕಷ್ಟು ಸಂಗ್ರಹಣಾ ಸೌಲಭ್ಯಗಳು ಮತ್ತು ವಿಶ್ವಾಸಾರ್ಹ ಪೂರೈಕೆ…

10 hours ago

ರಸ್ತೆ ಅಪಘಾತಗಳನ್ನು ತಡೆಗಟ್ಟಲು ಅಗತ್ಯ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ

ಮೈಸೂರು: ರಸ್ತೆ ಅಪಘಾತದಿಂದ ಹಲವರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಆದ್ದರಿಂದ ರಸ್ತೆ ಅಪಘಾತಗಳನ್ನು ತಡೆಗಟ್ಟಲು ಕ್ರಮ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ…

10 hours ago

ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ಅನುದಾನ ಒದಗಿಸಿ: ಎಂಎಲ್‌ಸಿ ಕೆ.ಶಿವಕುಮಾರ್‌ ಆಗ್ರಹ

ಬೆಂಗಳೂರು: ಮೈಸೂರು ನಗರ ಸೇರಿದಂತೆ ರಾಜ್ಯದಲ್ಲಿರುವ ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ಹೆಚ್ಚಿನ ಅನುದಾನ ಒದಗಿಸಬೇಕೆಂದು ಎಂಎಲ್‌ಸಿ ಕೆ.ಶಿವಕುಮಾರ್‌ ಒತ್ತಾಯಿಸಿದ್ದಾರೆ. ಈ…

11 hours ago

ಮಹೇಶ್‌ ಶೆಟ್ಟಿ ತಿಮರೋಡಿ ಗಡಿಪಾರು ಆದೇಶಕ್ಕೆ ಹೈಕೋರ್ಟ್‌ ಮಧ್ಯಂತರ ತಡೆ

ಬೆಂಗಳೂರು: ಮಹೇಶ್‌ ಶೆಟ್ಟಿ ತಿಮರೋಡಿ ಗಡಿಪಾರು ಮಾಡಿ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್‌ ಮಧ್ಯಂತರ ತಡೆಯಾಜ್ಞೆ ನೀಡಿದೆ. ತಿಮರೋಡಿ ಅವರನ್ನು ದಕ್ಷಿಣ…

11 hours ago