ರಾಜ್ಯ

ಸಿದ್ದರಾಮಯ್ಯ ಯಾವ ಪುರುಷಾರ್ಥಕ್ಕೆ ಸಾಧನಾ ಸಮಾವೇಶ ಮಾಡುತ್ತಿದ್ದಾರೆ: ಅಶ್ವಥ್‌ ನಾರಾಯಣ್‌ ಪ್ರಶ್ನೆ

ಬೆಂಗಳೂರು : ಕಳೆದ ಎರಡೂವರೆ ವರ್ಷಗಳ ಅವಧಿಯಲ್ಲಿ ಯಾವುದೇ ಒಂದೇ ಒಂದು ಸಾಧನೆ ಮಾಡದಿದ್ದರೂ ಮೈಸೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಯಾವ ಪುರುಷಾರ್ಥಕ್ಕೆ ಸಾಧನಾ ಸಮಾವೇಶ ಮಾಡುತ್ತಿದ್ದಾರೆ ಎಂದು ಬಿಜೆಪಿ ಮಾಜಿ ಸಚಿವ ಹಾಗೂ ಶಾಸಕ ಅಶ್ವತ್ಥ ನಾರಾಯಣ ಪ್ರಶ್ನಿಸಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಅಧಿಕಾರಕ್ಕೆ ಬಂದ ನಂತರ ಕಾಂಗ್ರೆಸ್‌‍ ಸರ್ಕಾರ ಯಾವ ಕ್ಷೇತ್ರದಲ್ಲೂ ಹೇಳಿಕೊಳ್ಳುವಂತಹ ಸಾಧನೆ ಮಾಡಿಲ್ಲ. ಆದರೂ ಸಾಧನಾ ಸಮಾವೇಶ ಮಾಡಲು ಹೊರಟಿದೆ ಎಂದು ವಾಗ್ದಾಳಿ ನಡೆಸಿದರು.

ನಿಮ್ಮ ಸಾಧನೆ ಏನು ಅಂದರೆ, ಯಾವ ಸಚಿವರು ಎಷ್ಟು ದುಡ್ಡು ಹೊಡೆದರು ಎಂದು ಹೇಳಬೇಕು. ನಿಮ್ಮ ಸಾಧನೆ ಹಣ ಹೊಡೆದಿದ್ದು ಮಾತ್ರ. ಅವಕಾಶವಾದಿತನ ಹೇಗೆ ಬಳಸಿಕೊಂಡೆವು ಎನ್ನುವುದು. ತುಷ್ಟೀಕರಣ ಮಾಡಿ, ಕಾನೂನು ಸುವ್ಯವಸ್ಥೆ ಕುಸಿಯಲು ಅತ್ಯಂತ ಕೆಟ್ಟ ಆಡಳಿತ ನಿಮ್ಮದು ಎನ್ನುವುದೇ ಸಾಕ್ಷಿ ಎಂದು ಟೀಕಾಪ್ರಹಾರ ನಡೆಸಿದರು.

ಕಾಂಗ್ರೆಸ್‌‍ ಆಡಳಿತಕ್ಕೆ ಬಂದು ದುರಾಡಳಿತ ನೀಡುತ್ತಿದೆ. ಜನರನ್ನ ನಂಬಿಸಿ ಹೆಚ್ಚು ಬಹುಮತ ಪಡೆದಿದೆ. ಸರ್ಕಾರ ಆರಂಭದ ದಿನಗಳಿಂದಲೂ ಜನರಿಗೆ ಅನ್ಯಾಯ, ದ್ರೋಹ, ಭ್ರಷ್ಟಾಚಾರ ಮಾಡುತ್ತಾ ಬಂದಿದೆ. ಈ ರೀತಿ ಸರ್ಕಾರ ನೂರಾರು ಹಗರಣ ಮಾಡಿದೆ ಎಂದು ಆರೋಪಿಸಿದರು.

ಒಂದು ಒಳ್ಳೆಯ ಕೆಲಸ ಮಾಡಿಲ್ಲ. ಒಂದೇ ಒಂದು ಸಾಧನೆ ಮಾಡದಿದ್ದರೂ ಮೈಸೂರಿನಲ್ಲಿ ಸಾಧನಾ ಸಮಾವೇಶ ಮಾಡಲು ಹೊರಟಿದ್ದಾರೆ. ಯಾವ ಆತ್ಮಸಾಕ್ಷಿಯ ಮೇಲೆ ಸಮಾವೇಶ ಮಾಡಲು ಹೊರಟಿದ್ದಾರೆ. ಮುಡಾ ಹಗರಣ ನಡೆದಿದೆ, ಸಿಎಂ ಆದವರು ಈ ಬಗ್ಗೆ ಏನು ಹೇಳುತ್ತಾರೆ. ನಿವೇಶನ ಏಕೆ ವಾಪಸ್‌‍ ಕೊಟ್ಟಿದ್ದಾರೆ ಎಂದು ಪ್ರಶ್ನೆ ಮಾಡಿದರು.

ಕಮೀಷನ್‌ ಪಡೆದು, ಶೇ. 80-90 ರಷ್ಟು ಭ್ರಷ್ಟಾಚಾರ ಮಾಡಿದ್ದಾರೆ. ಅನೇಕರು ಹಣದ ವಿಚಾರದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಸರ್ಕಾರದ ಅವಧಿಯಲ್ಲಿ ಅಧಿಕಾರಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇತಿಹಾಸದಲ್ಲಿ ಮೊದಲ ಬಾರಿಗೆ ಅಧಿಕಾರಿಗಳೇ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಸ್ಮಾರ್ಟ್‌ ಮೀಟರ್‌ ಹಗರಣ, ಬೆಲೆ ಏರಿಕೆ, ಮಹಾರಾಷ್ಟ್ರದಲ್ಲಿ ವಿದ್ಯುತ್‌ ದರ ಇಳಿಸುತ್ತಿದ್ದಾರೆ. ಇಲ್ಲಿ ನೋಡಿದರೆ ಪ್ರತಿಯೊಂದು ದರ ಹೆಚ್ಚಳ ಮಾಡುತ್ತಿದ್ದಾರೆ. ಔಷಧಿ ಕೊಡಲಾಗದ ಸರ್ಕಾರ, ಬಾಣಂತಿಯರ ಸರಣಿ ಸಾವಾಗಿದೆ. ಕಾಲ್ತುಳಿತದಿಂದ ಸಾವು ನಡೆದಿದೆ, ಅದನ್ನೂ ಸಮರ್ಥನೆ ಮಾಡಿಕೊಳ್ಳುತ್ತಿದ್ದಾರೆ. ಗ್ಯಾರಂಟಿ ದುಡ್ಡು ಕೊಡಲು, ಗ್ಯಾರಂಟಿ ಇಲ್ಲ ಅಂತಿದ್ದಾರೆ. ಗ್ಯಾರಂಟಿ ಸಮಿತಿ ಸದಸ್ಯರೇ ದುಡ್ಡು ಕೊಡಲು ಹಣ ಇಲ್ಲ ಎನ್ನುತ್ತಾರೆ. ಅದೇನು ಸಂಬಳಾನಾ ಕೊಡೋಕೆ ಅಂತಿದ್ದಾರೆ. ನೇರವಾಗಿ ಜನರ ಜೇಬಿಂದ ಹಣ ತಗೋತಿದ್ರೆ, ಅದು ಕಾಂಗ್ರೆಸ್‌‍ ಸರ್ಕಾರ ಎಂದು ಕಿಡಿಕಾರಿದರು.

ಆಂದೋಲನ ಡೆಸ್ಕ್

Recent Posts

ರಷ್ಯಾ ಮೇಲೆ ಉಕ್ರೇನ್‌ ಭೀಕರ ಡ್ರೋನ್‌ ದಾಳಿ: 4 ಮಂದಿ ಸಾವು

ಮಾಸ್ಕೋ: ಉಕ್ರೇನ್‌ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್‌ ದಾಳಿ ನಡೆಸಿದೆ. ಈ ವೈಮಾನಿಕ…

38 mins ago

ಮೈಸೂರಿನಲ್ಲಿ ಜನರೊಂದಿಗೆ ಜನತಾದಳ ಕಾರ್ಯಕ್ರಮ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ…

2 hours ago

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…

2 hours ago

ಕಳೆದ ಮೂರು ದಿನಗಳಿಂದ ಮಹದೇಶ್ವರ ಬೆಟ್ಟಕ್ಕೆ ಲಕ್ಷಾಂತದ ಮಂದಿ ಭಕ್ತರು ಭೇಟಿ

ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…

2 hours ago

ಕಾಡಿನಲ್ಲಿ ಅಕ್ರಮವಾಗಿ ಚರ್ಚ್‌ ನಿರ್ಮಾಣ: 40ಕ್ಕೂ ಹೆಚ್ಚು ಜನರ ಬಂಧನ

ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್‌ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…

3 hours ago

ಹಾರ್ಮುಜ್‌ ದಾಟಿ ಸುರಕ್ಷಿತವಾಗಿ ಭಾರತಕ್ಕೆ ಬಂತು 20,000 ಟನ್‌ ಎಲ್‌ಪಿಜಿ ಟ್ಯಾಂಕರ್‌

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್‍ಪಿಜಿಯನ್ನು ಹೊತ್ತ…

3 hours ago