ರಾಜ್ಯ

ಸಿದ್ದರಾಮಯ್ಯ ಯಾವ ಪುರುಷಾರ್ಥಕ್ಕೆ ಸಾಧನಾ ಸಮಾವೇಶ ಮಾಡುತ್ತಿದ್ದಾರೆ: ಅಶ್ವಥ್‌ ನಾರಾಯಣ್‌ ಪ್ರಶ್ನೆ

ಬೆಂಗಳೂರು : ಕಳೆದ ಎರಡೂವರೆ ವರ್ಷಗಳ ಅವಧಿಯಲ್ಲಿ ಯಾವುದೇ ಒಂದೇ ಒಂದು ಸಾಧನೆ ಮಾಡದಿದ್ದರೂ ಮೈಸೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಯಾವ ಪುರುಷಾರ್ಥಕ್ಕೆ ಸಾಧನಾ ಸಮಾವೇಶ ಮಾಡುತ್ತಿದ್ದಾರೆ ಎಂದು ಬಿಜೆಪಿ ಮಾಜಿ ಸಚಿವ ಹಾಗೂ ಶಾಸಕ ಅಶ್ವತ್ಥ ನಾರಾಯಣ ಪ್ರಶ್ನಿಸಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಅಧಿಕಾರಕ್ಕೆ ಬಂದ ನಂತರ ಕಾಂಗ್ರೆಸ್‌‍ ಸರ್ಕಾರ ಯಾವ ಕ್ಷೇತ್ರದಲ್ಲೂ ಹೇಳಿಕೊಳ್ಳುವಂತಹ ಸಾಧನೆ ಮಾಡಿಲ್ಲ. ಆದರೂ ಸಾಧನಾ ಸಮಾವೇಶ ಮಾಡಲು ಹೊರಟಿದೆ ಎಂದು ವಾಗ್ದಾಳಿ ನಡೆಸಿದರು.

ನಿಮ್ಮ ಸಾಧನೆ ಏನು ಅಂದರೆ, ಯಾವ ಸಚಿವರು ಎಷ್ಟು ದುಡ್ಡು ಹೊಡೆದರು ಎಂದು ಹೇಳಬೇಕು. ನಿಮ್ಮ ಸಾಧನೆ ಹಣ ಹೊಡೆದಿದ್ದು ಮಾತ್ರ. ಅವಕಾಶವಾದಿತನ ಹೇಗೆ ಬಳಸಿಕೊಂಡೆವು ಎನ್ನುವುದು. ತುಷ್ಟೀಕರಣ ಮಾಡಿ, ಕಾನೂನು ಸುವ್ಯವಸ್ಥೆ ಕುಸಿಯಲು ಅತ್ಯಂತ ಕೆಟ್ಟ ಆಡಳಿತ ನಿಮ್ಮದು ಎನ್ನುವುದೇ ಸಾಕ್ಷಿ ಎಂದು ಟೀಕಾಪ್ರಹಾರ ನಡೆಸಿದರು.

ಕಾಂಗ್ರೆಸ್‌‍ ಆಡಳಿತಕ್ಕೆ ಬಂದು ದುರಾಡಳಿತ ನೀಡುತ್ತಿದೆ. ಜನರನ್ನ ನಂಬಿಸಿ ಹೆಚ್ಚು ಬಹುಮತ ಪಡೆದಿದೆ. ಸರ್ಕಾರ ಆರಂಭದ ದಿನಗಳಿಂದಲೂ ಜನರಿಗೆ ಅನ್ಯಾಯ, ದ್ರೋಹ, ಭ್ರಷ್ಟಾಚಾರ ಮಾಡುತ್ತಾ ಬಂದಿದೆ. ಈ ರೀತಿ ಸರ್ಕಾರ ನೂರಾರು ಹಗರಣ ಮಾಡಿದೆ ಎಂದು ಆರೋಪಿಸಿದರು.

ಒಂದು ಒಳ್ಳೆಯ ಕೆಲಸ ಮಾಡಿಲ್ಲ. ಒಂದೇ ಒಂದು ಸಾಧನೆ ಮಾಡದಿದ್ದರೂ ಮೈಸೂರಿನಲ್ಲಿ ಸಾಧನಾ ಸಮಾವೇಶ ಮಾಡಲು ಹೊರಟಿದ್ದಾರೆ. ಯಾವ ಆತ್ಮಸಾಕ್ಷಿಯ ಮೇಲೆ ಸಮಾವೇಶ ಮಾಡಲು ಹೊರಟಿದ್ದಾರೆ. ಮುಡಾ ಹಗರಣ ನಡೆದಿದೆ, ಸಿಎಂ ಆದವರು ಈ ಬಗ್ಗೆ ಏನು ಹೇಳುತ್ತಾರೆ. ನಿವೇಶನ ಏಕೆ ವಾಪಸ್‌‍ ಕೊಟ್ಟಿದ್ದಾರೆ ಎಂದು ಪ್ರಶ್ನೆ ಮಾಡಿದರು.

ಕಮೀಷನ್‌ ಪಡೆದು, ಶೇ. 80-90 ರಷ್ಟು ಭ್ರಷ್ಟಾಚಾರ ಮಾಡಿದ್ದಾರೆ. ಅನೇಕರು ಹಣದ ವಿಚಾರದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಸರ್ಕಾರದ ಅವಧಿಯಲ್ಲಿ ಅಧಿಕಾರಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇತಿಹಾಸದಲ್ಲಿ ಮೊದಲ ಬಾರಿಗೆ ಅಧಿಕಾರಿಗಳೇ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಸ್ಮಾರ್ಟ್‌ ಮೀಟರ್‌ ಹಗರಣ, ಬೆಲೆ ಏರಿಕೆ, ಮಹಾರಾಷ್ಟ್ರದಲ್ಲಿ ವಿದ್ಯುತ್‌ ದರ ಇಳಿಸುತ್ತಿದ್ದಾರೆ. ಇಲ್ಲಿ ನೋಡಿದರೆ ಪ್ರತಿಯೊಂದು ದರ ಹೆಚ್ಚಳ ಮಾಡುತ್ತಿದ್ದಾರೆ. ಔಷಧಿ ಕೊಡಲಾಗದ ಸರ್ಕಾರ, ಬಾಣಂತಿಯರ ಸರಣಿ ಸಾವಾಗಿದೆ. ಕಾಲ್ತುಳಿತದಿಂದ ಸಾವು ನಡೆದಿದೆ, ಅದನ್ನೂ ಸಮರ್ಥನೆ ಮಾಡಿಕೊಳ್ಳುತ್ತಿದ್ದಾರೆ. ಗ್ಯಾರಂಟಿ ದುಡ್ಡು ಕೊಡಲು, ಗ್ಯಾರಂಟಿ ಇಲ್ಲ ಅಂತಿದ್ದಾರೆ. ಗ್ಯಾರಂಟಿ ಸಮಿತಿ ಸದಸ್ಯರೇ ದುಡ್ಡು ಕೊಡಲು ಹಣ ಇಲ್ಲ ಎನ್ನುತ್ತಾರೆ. ಅದೇನು ಸಂಬಳಾನಾ ಕೊಡೋಕೆ ಅಂತಿದ್ದಾರೆ. ನೇರವಾಗಿ ಜನರ ಜೇಬಿಂದ ಹಣ ತಗೋತಿದ್ರೆ, ಅದು ಕಾಂಗ್ರೆಸ್‌‍ ಸರ್ಕಾರ ಎಂದು ಕಿಡಿಕಾರಿದರು.

ಆಂದೋಲನ ಡೆಸ್ಕ್

Recent Posts

ಸಂಪ್ರದಾಯವಾಗಿ ನಡೆಯದ ವಿವಾಹ ಅಮಾನ್ಯ ; ಗುಜರಾತ್ ಹೈಕೋರ್ಟ್ ತೀರ್ಪು

ಸಪ್ತಪದಿ ಹಿಂದೂ ವಿವಾಹದ ಅಡಿಪಾಯ ; ಗುಜರಾತ್‌ ಹೈಕೋರ್ಟ್‌ ತೀರ್ಪು ಅಹಮದಾಬಾದ್ : ಸಪ್ತಪದಿಯಂತಹ ಸಾಂಪ್ರದಾಯಿಕ ವಿಧಿವಿಧಾನಗಳು ಮತ್ತು ಸಮಾರಂಭಗಳನ್ನು…

10 hours ago

ಬೋರ್‌ವೆಲ್, ಪಂಪ್‌ಸೆಟ್ ಕೇಬಲ್‌ ಕಳ್ಳತನ ಯುವಕರಿಗೆ ಧರ್ಮದೇಟು

ಮಂಡ್ಯ : ಬೋರ್‌ವೆಲ್, ಪಂಪ್‌ಸೆಟ್ ಕೇಬಲ್ ಕಳವು ಮಾಡುತ್ತಿದ್ದ ಅಪ್ರಾಪ್ತ ಬಾಲಕ ಸೇರಿದಂತೆ ಮೂವರನ್ನು ಸಾರ್ವಜನಿಕರೇ ಹಿಡಿದು ಕಂಬಕ್ಕೆ ಕಟ್ಟಿ…

11 hours ago

ವಿದ್ಯುತ್‌ ಶಾರ್ಟ್‌ ಸರ್ಕ್ಯೂಟ್‌ ; ಸುಟ್ಟು ಹೋದ 6 ಎಕರೆ ಕಬ್ಬು

ಹನೂರು : ಅತಿಯಾದ ಗಾಳಿಯ ರಭಸಕ್ಕೆ ವಿದ್ಯುತ್ ತಂತಿ ಒಂದಕ್ಕೊಂದು ಸ್ಪರ್ಶಿಸಿ ಬೆಂಕಿ ಹೊತ್ತಿಕೊಂಡು ಜಮೀನಿನಲ್ಲಿದ್ದ 6 ಎಕರೆ ಕಬ್ಬು…

13 hours ago

ಆಷಾಢ ಶುಕ್ರವಾರ, ಶನಿವಾರ, ಭಾನುವಾರ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ

ಮೈಸೂರು: ಆಷಾಢ ಶುಕ್ರವಾರ, ಶನಿವಾರ ಹಾಗೂ ಭಾನುವಾರ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಸಚಿವ ಯತೀಂದ್ರ…

16 hours ago

ಕಾರಂಜಿ ಕೆರೆ ಉದ್ಯಾನದಲ್ಲಿ ‘ಪರಿಸರ ಅನುಭವ ವಲಯ’

ಮೈಸೂರು: ಜೀವವೈವಿಧ್ಯ ತಾಣವಾಗಿರುವn ಹಾಗೂ ಪ್ರಕೃತಿಯ ಸೊಬಗಿನ ವಾತಾವರಣದಿಂದ ಕೂಡಿರುವ ಕಾರಂಜಿ ಕೆರೆ ಉದ್ಯಾನದಲ್ಲಿ ‘ಪರಿಸರ ಅನುಭವ ವಲಯ’ ನಿರ್ಮಾಣ…

17 hours ago

ಅಲೆಮಾರಿ ಜನಾಂಗ ನಾಡಿನ ಸಂಸ್ಕೃತಿಯ ಜೀವಂತಿಕೆ

ಟಿ.ಕೆ.ಹರೀಶ್ ಸಮುದಾಯಗಳಿಗೆ ಸೂರು, ಶಿಕ್ಷಣ ಒದಗಿಸುವುದು ಅತ್ಯಗತ್ಯ ಭಾರತೀಯ ಅಲೆಮಾರಿ ಜನಾಂಗಗಳು ಕೇವಲ ಸಂಚಾರಿಗಳಲ್ಲ; ಅವರು ನಮ್ಮ ಶ್ರೀಮಂತ ಸಾಂಸ್ಕೃತಿಕ…

23 hours ago