ಮಂಗಳೂರು: ಧರ್ಮಸ್ಥಳ ವಿರುದ್ಧ ಪಿತೂರಿ ನಡೆಸಿ ಷಡ್ಯಂತ್ರ ನಡೆಸಲು ವಿದೇಶದಿಂದ ಫಂಡಿಂಗ್ ಆಗುತ್ತಿದೆ. ಇದೆಲ್ಲವೂ ಹೊರಗೆ ಬರಬೇಕಾದರೆ ಪ್ರಕರಣವನ್ನು ರಾಜ್ಯ ಸರ್ಕಾರ ಎನ್ಐಎ ಅಥವಾ ಸಿಬಿಐಗೆ ವಹಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಆಗ್ರಹಿಸಿದ್ದಾರೆ.
ಧರ್ಮಸ್ಥಳ ಚಲೋ ನಡೆಸಿರುವ ಬಿಜೆಪಿ ನಾಯಕರು ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯೇಂದ್ರ ಅವರು, ಧರ್ಮಸ್ಥಳ ಬಗ್ಗೆ ನಡೆಯುತ್ತಿರುವ ಅಪಪ್ರಚಾರಕ್ಕೆ ಇತಿಶ್ರೀ ಹಾಡಲು ನಾವು ಯಾತ್ರೆ ನಡೆಸುತ್ತಿದ್ದೇವೆ. ಕ್ಷೇತ್ರದ ವಿರುದ್ಧ ಪಿತೂರಿಗೆ ವಿದೇಶದಿಂದ ಫಂಡಿಂಗ್ ಆಗುತ್ತಿದೆ. ಈ ಬಗ್ಗೆ ಎನ್ಐಎ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.
ಧರ್ಮಸ್ಥಳ ಪ್ರಕರಣದ ಹಿಂದೆ ಇರುವ ದುಷ್ಟ ಶಕ್ತಿಗಳು ಬಹಿರಂಗ ಆಗಬೇಕು. ಹಿಂದೂ ಸಮಾಜವನ್ನು ರಕ್ಷಣೆ ಮಾಡುವ ಕೆಲಸ ಆಗಬೇಕು. ಎಸ್ಐಟಿಯವರು ಬಂಧಿಸಿರುವುದು ಸಣ್ಣಪುಟ್ಟ ವ್ಯಕ್ತಿಗಳನ್ನು. ಇದರ ಹಿಂದೆ ಬಲಾಢ್ಯರು ಕೂಡ ಇದ್ದಾರೆ. ಅವರನ್ನು ಹೊರಗೆಳೆಯುವ ಕೆಲಸವಾಗಬೇಕು. ಇದಕ್ಕಾಗಿಯೇ ಪ್ರಕರಣವನ್ನು ಎನ್ಐಎ ತನಿಖೆಗೆ ವಹಿಸಲಿ ಎಂದು ಮತ್ತೊಮ್ಮೆ ಆಗ್ರಹಿಸಿದರು.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…