ರಾಜ್ಯ

ಧರ್ಮಸ್ಥಳ ವಿರುದ್ಧ ಷಡ್ಯಂತ್ರಕ್ಕೆ ವಿದೇಶಿ ಹಣ ಬಳಕೆ: ಶಾಸಕ ಭರತ್‌ ಶೆಟ್ಟಿ ಹೊಸ ಬಾಂಬ್‌

ಬೆಂಗಳೂರು: ಧರ್ಮಸ್ಥಳ ವಿರುದ್ಧ ಷಡ್ಯಂತ್ರಕ್ಕೆ ವಿದೇಶಿ ಹಣ ಬಳಕೆ ಮಾಡಲಾಗಿದೆ ಎಂದು ಶಾಸಕ ಭರತ್‌ ಶೆಟ್ಟಿ ಹೊಸ ಬಾಂಬ್‌ ಸಿಡಿಸಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಧರ್ಮಸ್ಥಳ ವಿರುದ್ಧ ಷಡ್ಯಂತ್ರಕ್ಕೆ ವಿದೇಶಿ ಹಣ ಬಳಕೆ ಆಗಿದೆ ಎಂಬ ಬಗ್ಗೆ ನಮಗೆ ಬಲ್ಲ ಮೂಲಗಳಿಂದ ಮಾಹಿತಿ ಬಂದಿದೆ.

ಇಡಿ ಅಥವಾ ಎನ್‌ಐಎ ತನಿಖೆಯಾದರೆ ಯಾರೆಲ್ಲಾ ಖಾತೆಗಳಿಗೆ ಎಲ್ಲಿಂದ ಹಣ ಎಷ್ಟು ಬಂದಿದೆ ಎಂದು ಗೊತ್ತಾಗಲಿದೆ. ಈಗಾಗಲೇ ಷಡ್ಯಂತ್ರ ನಡೆದಿದೆ ಎಂಬ ಬಗ್ಗೆ ನಾವೂ ಹೇಳುತ್ತಿದ್ದೇವೆ. ಕಾಂಗ್ರೆಸ್‌ನವರೂ ಹೇಳುತ್ತಿದ್ದಾರೆ. ಹಾಗಾಗಿ ಇಡಿ ಅಥವಾ ಎನ್‌ಐಎ ತನಿಖೆಗೆ ಕೊಡಲಿ ಎಂದು ಆಗ್ರಹಿಸಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಸೌಜನ್ಯ ಪ್ರಕರಣದಲ್ಲೂ ನ್ಯಾಯ ಸಿಗಬೇಕು. ಕೆಲವರು ಸೌಜನ್ಯ ಹತ್ಯೆ ಬಗ್ಗೆ ದಾಖಲೆ ಇದೆ. ಈ ಬಗ್ಗೆ ಹೇಳುವವರೆಲ್ಲಾ ಎಸ್‌ಐಟಿಗೆ ಆ ದಾಖಲೆಗಳನ್ನು ಕೊಡಲಿ. ಎಸ್‌ಐಟಿ ಅವರಿಗೆ ಸೌಜನ್ಯ ಕೇಸ್‌ ತನಿಖೆ ಮಾಡಲು ಅವಕಾಶ ಇದ್ದರೆ, ತನಿಖೆ ಮಾಡಲಿ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಕಾಲೇಜು ವಿದ್ಯಾರ್ಥಿನಿಯರಿಗೆ ಬಿಸಿಯೂಟ ಶ್ಲಾಘನೀಯ

ಮೈಸೂರಿನ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಜಿ.ಟಿ.ದೇವೇಗೌಡರ ನೇತೃತ್ವದಲ್ಲಿ ಇಸ್ಕಾನ್ ಸಂಸ್ಥೆಯ ಅಕ್ಷಯಪಾತ್ರೆ ಫೌಂಡೇಶನ್ ಸಹಯೋಗದೊಂದಿಗೆ…

2 hours ago

ಓದುಗರ ಪತ್ರ: ಪೊಲೀಸ್ ಅಧಿಕಾರಿಯ ಅಸಭ್ಯ ವರ್ತನೆ ಅಕ್ಷಮ್ಯ

ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಅವರ ಕಚೇರಿಯಲ್ಲಿ ಸಮವಸ್ತ್ರದಲ್ಲಿದ್ದಾಗಲೇ ಮಹಿಳೆಯೊಂದಿಗೆ ನಡೆಸಿದ್ದಾರೆ ಎನ್ನಲಾದ ರಾಸಲೀಲೆಯ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್…

2 hours ago

ಓದುಗರ ಪತ್ರ: ಅಮೆರಿಕ ಅಧ್ಯಕ್ಷರ ಹುಚ್ಚುತನ

ಉತ್ತರ ಅಟ್ಲಾಂಟಿಕ್ ಸಮುದ್ರದಲ್ಲಿ ಇರುವ ವಿಶ್ವದ ಅತಿದೊಡ್ಡ ದ್ವೀಪವಾಗಿರುವ ಹಾಗೂ ಡೆನ್ಮಾರ್ಕ್ ದೇಶದ ನಿಯಂತ್ರಣದಲ್ಲಿರುವ ‘ಗ್ರೀನ್ ಲ್ಯಾಂಡ್’ ದ್ವೀಪವನ್ನು ತನ್ನ…

2 hours ago

ಕಾಡ್ಗಿಚ್ಚು ತಡೆಗೆ ನಾನಾ ಮುಂಜಾಗ್ರತಾ ಕ್ರಮ

ನವೀನ್ ಡಿಸೋಜ ಅರಣ್ಯ ಇಲಾಖೆಯಿಂದ ಬೆಂಕಿ ರೇಖೆ ನಿರ್ಮಾಣ ಕಾರ್ಯ ಚುರುಕು; ಜನರಲ್ಲಿ ಜಾಗೃತಿ ಮೂಡಿಸಲು ಚಿಂತ ಮಡಿಕೇರಿ: ಬೇಸಿಗೆ…

2 hours ago

ಬಾಚಳ್ಳಿ ಆಂಜನೇಯಸ್ವಾಮಿ ಜಾತ್ರೋತ್ಸವಕ್ಕೆ ಸಕಲ ಸಿದ್ಧತೆ

ಎಂ ಯೋಗಾನಂದ್ ಜ.೨೩ರಿಂದ ೨೬ರವರೆಗೆ ಜಾತ್ರಾ ಮಹೋತ್ಸವ; ಮೆರುಗು ನೀಡಲಿರುವ ಗಾಡಿ ಓಡಿಸುವ ಸ್ಪರ್ಧೆ ಹುಣಸೂರು: ತಾಲ್ಲೂಕಿನ ಬಾಚಳ್ಳಿ ಗ್ರಾಮದಲ್ಲಿ…

2 hours ago