Mysore
27
few clouds

Social Media

ಭಾನುವಾರ, 15 ಫೆಬ್ರವರಿ 2026
Light
Dark

ಅರಣ್ಯ ಒತ್ತುವರಿ, ಉಪಗ್ರಹ ಆಧಾರಿತ ಎಚ್ಚರಿಕೆ ವ್ಯವಸ್ಥೆ ರೂಪಿಸಲು ಸಚಿವ ಈಶ್ವರ್‌ ಖಂಡ್ರೆ ಸೂಚನೆ

ಬೆಂಗಳೂರು: ರಾಜ್ಯದ ಅರಣ್ಯ ಸಂಪತ್ತಿನ ಸಂರಕ್ಷಣೆ ಮತ್ತು ಅರಣ್ಯ ಒತ್ತುವರಿಯನ್ನು ಪರಿಣಾಮಕಾರಿಯಾಗಿ ತಡೆಯಲು ಅತ್ಯಾಧುನಿಕ ತಂತ್ರಜ್ಞಾನದ ಬಳಕೆಯ ಅಗತ್ಯವಿದ್ದು, ಉಪಗ್ರಹ ಆಧಾರಿತ ಎಚ್ಚರಿಕೆ ರವಾನೆ ವ್ಯವಸ್ಥೆ ರೂಪಿಸುವಂತೆ ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಸೂಚನೆ ನೀಡಿದ್ದಾರೆ.

ಬೆಂಗಳೂರಿನ ಅರಣ್ಯ ಭವನದಲ್ಲಿಂದು ಉನ್ನತಾಧಿಕಾರಿಗಳೊಂದಿಗೆ ನಡೆದ ಅರಣ್ಯ ಭೂಮಿ ಒತ್ತುವರಿ ತಡೆ ಮತ್ತು ವೃಕ್ಷ ಸಂರಕ್ಷಣೆ ಕುರಿತ ಸಭೆಯಲ್ಲಿ ಸಚಿವರು ಸೂಚನೆ ನೀಡಿದರು.

ಈಗಾಗಲೇ ಅಕ್ಷಾಂಶ ಮತ್ತು ರೇಖಾಂಶದ ಆಧಾರದ ಮೇಲೆ ಜಿಯೋ ರೆಫರೆನ್ಸ್‌ ಮೂಲಕ ರಾಜ್ಯದ ಅರಣ್ಯ ಪ್ರದೇಶದ ಗಡಿಗಳನ್ನು ಗುರುತಿಸಲಾಗಿದ್ದು, ಈ ದತ್ತಾಂಶವನ್ನು ಕರ್ನಾಟಕ ರಾಜ್ಯ ದೂರಸಂವೇದಿ ಅನ್ವಯಿಕ ಕೇಂದ್ರಕ್ಕೆ ಮಾಹಿತಿ ನೀಡಿ, ಮರಗಳ ಕಡಿತಲೆ ಮತ್ತು ಭೂ ಒತ್ತುವರಿಯ ಕುರಿತಂತೆ ಸಕಾಲಿಕ ಎಚ್ಚರಿಕೆ ನೀಡುವ ವ್ಯವಸ್ಥೆಯೊಂದನ್ನು ಆದಷ್ಟು ಶೀಘ್ರದಲ್ಲೇ ಜಾರಿಗೆ ತರಲಾಗುತ್ತದೆ.

ಅರಣ್ಯ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡರೆ ಇಸ್ರೋದ ರಾಷ್ಟ್ರೀಯ ದೂರ ಸಂವೇದಿ ಕೇಂದ್ರಕ್ಕೆ ಮಾಹಿತಿ ಬರುತ್ತದೆ. ಅಲ್ಲಿಂದ ಭಾರತೀಯ ಅರಣ್ಯ ಸರ್ವೇಕ್ಷಣಾ ಇಲಾಖೆಗೆ ಮಾಹಿತಿ ರವಾನೆ ಆಗುತ್ತದೆ. ಬಳಿಕ ಸಂಬಂಧಿತ ಅರಣ್ಯ ವಲಯದ ಸಿಬ್ಬಂದಿಗೆ ಎಚ್ಚರಿಕೆ ಹೋಗಲು ಇರುವ ವ್ಯವಸ್ಥೆಯ ಮಾದರಿಯಲ್ಲಿಯೇ ಮರಗಳ ಅಕ್ರಮ ಕಡಿತಲೆ ಮತ್ತು ಅರಣ್ಯ ಭೂಮಿ ಒತ್ತುವರಿಗೂ ಒಂದು ಎಚ್ಚರಿಕೆ ರವಾನೆ ವ್ಯವಸ್ಥೆ ಕಲ್ಪಿಸಿ ಎಂದು ಖಡಕ್‌ ಸೂಚನೆ ನೀಡಿದರು.

ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳ ಮಟ್ಟದಲ್ಲಿ ಬಾಕಿ ಇರುವ ಎಲ್ಲಾ 64 ಎ ಪ್ರಕರಣಗಳನ್ನು ಮತ್ತು ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳ ಮುಂದಿರುವ ಮೇಲ್ಮನವಿಯನ್ನು ಕಾಲಮಿತಿಯಲ್ಲಿ ಅಂದರೆ ಒಂದು ವರ್ಷದೊಳಗೆ ಇತ್ಯರ್ಥಪಡಿಸುವಂತೆ ಸೂಚನೆ ನೀಡಿದರು.

 

Tags:
error: Content is protected !!