ಬೆಂಗಳೂರು: ರಾಜ್ಯದ ಅರಣ್ಯ ಸಂಪತ್ತಿನ ಸಂರಕ್ಷಣೆ ಮತ್ತು ಅರಣ್ಯ ಒತ್ತುವರಿಯನ್ನು ಪರಿಣಾಮಕಾರಿಯಾಗಿ ತಡೆಯಲು ಅತ್ಯಾಧುನಿಕ ತಂತ್ರಜ್ಞಾನದ ಬಳಕೆಯ ಅಗತ್ಯವಿದ್ದು, ಉಪಗ್ರಹ ಆಧಾರಿತ ಎಚ್ಚರಿಕೆ ರವಾನೆ ವ್ಯವಸ್ಥೆ ರೂಪಿಸುವಂತೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಸೂಚನೆ ನೀಡಿದ್ದಾರೆ.
ಬೆಂಗಳೂರಿನ ಅರಣ್ಯ ಭವನದಲ್ಲಿಂದು ಉನ್ನತಾಧಿಕಾರಿಗಳೊಂದಿಗೆ ನಡೆದ ಅರಣ್ಯ ಭೂಮಿ ಒತ್ತುವರಿ ತಡೆ ಮತ್ತು ವೃಕ್ಷ ಸಂರಕ್ಷಣೆ ಕುರಿತ ಸಭೆಯಲ್ಲಿ ಸಚಿವರು ಸೂಚನೆ ನೀಡಿದರು.
ಈಗಾಗಲೇ ಅಕ್ಷಾಂಶ ಮತ್ತು ರೇಖಾಂಶದ ಆಧಾರದ ಮೇಲೆ ಜಿಯೋ ರೆಫರೆನ್ಸ್ ಮೂಲಕ ರಾಜ್ಯದ ಅರಣ್ಯ ಪ್ರದೇಶದ ಗಡಿಗಳನ್ನು ಗುರುತಿಸಲಾಗಿದ್ದು, ಈ ದತ್ತಾಂಶವನ್ನು ಕರ್ನಾಟಕ ರಾಜ್ಯ ದೂರಸಂವೇದಿ ಅನ್ವಯಿಕ ಕೇಂದ್ರಕ್ಕೆ ಮಾಹಿತಿ ನೀಡಿ, ಮರಗಳ ಕಡಿತಲೆ ಮತ್ತು ಭೂ ಒತ್ತುವರಿಯ ಕುರಿತಂತೆ ಸಕಾಲಿಕ ಎಚ್ಚರಿಕೆ ನೀಡುವ ವ್ಯವಸ್ಥೆಯೊಂದನ್ನು ಆದಷ್ಟು ಶೀಘ್ರದಲ್ಲೇ ಜಾರಿಗೆ ತರಲಾಗುತ್ತದೆ.
ಅರಣ್ಯ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡರೆ ಇಸ್ರೋದ ರಾಷ್ಟ್ರೀಯ ದೂರ ಸಂವೇದಿ ಕೇಂದ್ರಕ್ಕೆ ಮಾಹಿತಿ ಬರುತ್ತದೆ. ಅಲ್ಲಿಂದ ಭಾರತೀಯ ಅರಣ್ಯ ಸರ್ವೇಕ್ಷಣಾ ಇಲಾಖೆಗೆ ಮಾಹಿತಿ ರವಾನೆ ಆಗುತ್ತದೆ. ಬಳಿಕ ಸಂಬಂಧಿತ ಅರಣ್ಯ ವಲಯದ ಸಿಬ್ಬಂದಿಗೆ ಎಚ್ಚರಿಕೆ ಹೋಗಲು ಇರುವ ವ್ಯವಸ್ಥೆಯ ಮಾದರಿಯಲ್ಲಿಯೇ ಮರಗಳ ಅಕ್ರಮ ಕಡಿತಲೆ ಮತ್ತು ಅರಣ್ಯ ಭೂಮಿ ಒತ್ತುವರಿಗೂ ಒಂದು ಎಚ್ಚರಿಕೆ ರವಾನೆ ವ್ಯವಸ್ಥೆ ಕಲ್ಪಿಸಿ ಎಂದು ಖಡಕ್ ಸೂಚನೆ ನೀಡಿದರು.
ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳ ಮಟ್ಟದಲ್ಲಿ ಬಾಕಿ ಇರುವ ಎಲ್ಲಾ 64 ಎ ಪ್ರಕರಣಗಳನ್ನು ಮತ್ತು ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳ ಮುಂದಿರುವ ಮೇಲ್ಮನವಿಯನ್ನು ಕಾಲಮಿತಿಯಲ್ಲಿ ಅಂದರೆ ಒಂದು ವರ್ಷದೊಳಗೆ ಇತ್ಯರ್ಥಪಡಿಸುವಂತೆ ಸೂಚನೆ ನೀಡಿದರು.
ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…
ಮುಂಬೈ: ಬಾಲಿವುಡ್ನ ಭಾಯಿಜಾನ್ ಸಲ್ಮಾನ್ ಖಾನ್ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…
ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…
ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…