ರಾಜ್ಯ

ಈಶ್ವರ ಖಂಡ್ರೆ ಸೂಚನೆ : ಕಾಡುಗೋಡಿಯಲ್ಲಿ ಅರಣ್ಯ ಇಲಾಖೆ ಕಾರ್ಯಾಚರಣೆ

2 ವರ್ಷದಲ್ಲಿ ಒಟ್ಟು 248 ಎಕರೆ ಅರಣ್ಯ ಒತ್ತುವರಿ ತೆರವು

ಬೆಂಗಳೂರು : ಅರಣ್ಯ, ಪರಿಸರ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ ಖಂಡ್ರೆ (Eshwara Khandre) ಅವರ ಸೂಚನೆ ಮೇರೆಗೆ ಬೆಂಗಳೂರು ಪೂರ್ವ ತಾಲೂಕು ಬಿದರಹಳ್ಳಿ ಹೋಬಳಿ, ಕಾಡುಗೋಡಿ ಪ್ಲಾಂಟೇಷನ್‌ನ ಸರ್ವೆ ನಂ.1ರಲ್ಲಿ 120 ಎಕರೆ ಅರಣ್ಯ ಭೂಮಿ ಒತ್ತುವರಿ ತೆರವುಗೊಳಿಸಲಾಗಿದೆ.

ಬಿಗಿ ಪೊಲೀಸ್ ಬಂದೋಬಸ್ತ್ ನಲ್ಲಿ ಇಂದು ಬೆಳಗ್ಗೆಯೇ ಜೆಸಿಬಿಯೊಂದಿಗೆ ಕಾರ್ಯಾಚರಣೆಗೆ ಇಳಿದ ಬೆಂಗಳೂರು ನಗರ ಅರಣ್ಯ ಇಲಾಖೆ ಅಧಿಕಾರಿಗಳ ನೇತೃತ್ವದ ತಂಡ ಕಾಡುಗೋಡಿಯ ಪ್ಲಾಂಟೇಷನ್‌ನ ಅರಣ್ಯ ಭೂಮಿಯ ಒತ್ತುವರಿ ತೆರವು ಮಾಡಿ, ಮರು ವಶಕ್ಕೆ ಪಡೆದು, ಗಡಿ ಗುರುತಿಸಿ ಸ್ಥಳೀಯ ಪ್ರಭೇದದ ಸಸಿಗಳನ್ನು ನೆಡುವ ಕಾರ್ಯದಲ್ಲಿ ನಿರತರಾಗಿದ್ದಾರೆ.

ಇಂದು ವಶಪಡಿಸಿಕೊಳ್ಳಲಾದ ಅರಣ್ಯ ಭೂಮಿಯ ಮಾರುಕಟ್ಟೆ ಮೌಲ್ಯ ಸುಮಾರು 4 ಸಾವಿರ ಕೋಟಿ ರೂಪಾಯಿಗೂ ಅಧಿಕ ಎಂದು ಅಂದಾಜಿಸಲಾಗಿದೆ. ಕಾಡುಗೋಡಿ ಅರಣ್ಯ ಪ್ರದೇಶ ಕುರಿತಂತೆ ಇತ್ತೀಚೆಗೆ ನಡೆದ ಸಭೆಯಲ್ಲಿ ಅರಣ್ಯ ಸಚಿವ ಈಶ್ವರ ಬಿ ಖಂಡ್ರೆ ಅವರು, ಬೆಂಗಳೂರು ವ್ಯಾಪಕವಾಗಿ ಬೆಳೆಯುತ್ತಿದ್ದು, ಹಸಿರು ಹೊದಿಕೆ ದಿನದಿಂದ ದಿನಕ್ಕೆ ಕ್ಷೀಣಿಸುತ್ತಿದೆ. ಹೀಗಾಗಿ ಶ್ವಾಸತಾಣಗಳ ಸಂರಕ್ಷಣೆ ಮಾಡಬೇಕು, ನಿಯಮಾನುಸಾರ ಅರಣ್ಯ ಭೂಮಿ ಒತ್ತುವರಿ ತೆರವು ಮಾಡಬೇಕು ಎಂದು ಸ್ಪಷ್ಟ ಸೂಚನೆ ನೀಡಿದ್ದರು.

2 ವರ್ಷದಲ್ಲಿ ಒಟ್ಟು 248 ಎಕರೆ ಅರಣ್ಯ ಒತ್ತುವರಿ ತೆರವು: ಈಶ್ವರ ಖಂಡ್ರೆ ಅವರು ಅರಣ್ಯ ಸಚಿವರಾಗಿ ಅಧಿಕಾರ ವಹಿಸಿಕೊಂಡ ಬಳಿಕ ಕಳೆದ 2 ವರ್ಷದಲ್ಲಿ ಬೆಂಗಳೂರಿನಲ್ಲಿ ಒಟ್ಟು 128 ಎಕರೆ ಅರಣ್ಯ ಭೂಮಿ ಒತ್ತವರಿ ತೆರವುಗೊಳಿಸಲಾಗಿದ್ದು, ಈ 120 ಎಕರೆ ಸೇರಿದರೆ, ಒಟ್ಟು 248 ಎಕರೆ ಆಗಲಿದ್ದು, ಇದರ ಮಾರುಕಟ್ಟೆ ಮೌಲ್ಯ 8 ಸಾವಿರ ಕೋಟಿ ರೂ.ಗೂ ಅಧಿಕವಾಗಿದೆ.

ಇದನ್ನು ಓದಿದ್ರಾ..?: – 4.5 ಲಕ್ಷ ಮೆಟ್ರಿಕ್ ಟನ್ ಕಬ್ಬು ಅರಿಯುವ ಗುರಿ : ಶಾಸಕ ಗಣಿಕ ರವಿಕುಮಾರ್

ಆಂದೋಲನ ಡೆಸ್ಕ್

Recent Posts

ಹೆಣ್ಣು ಮಗು ಮಾರಾಟ ; ಐವರ ಬಂಧನ

ಚಾಮರಾಜನಗರ : ಆರು ತಿಂಗಳ ಹೆಣ್ಣು ಮಗುವನ್ನು ಮಾರಾಟ ಮಾಡಿರುವ ಪ್ರಕರಣ ನಗರದಲ್ಲಿ ನಡೆದಿದ್ದು, ಈ ಸಂಬಂಧ ಪೋಷಕರು ಸೇರಿದಂತೆ…

2 hours ago

ವೃದ್ಧೆಯನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ : ಗಡಿ ಜಿಲ್ಲೆಯಲ್ಲಿ ಅಮಾನವೀಯ ಘಟನೆ

ಹನೂರು : ಜಮೀನಿನಲ್ಲಿ ಹುರುಳಿ ಫಸಲನ್ನು ಹಸು ಮೇಯ್ದಿದ್ದದನ್ನು ಪ್ರಶ್ನೆಸಿದ್ದಕ್ಕೆ ವೃದ್ಧೆಯನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿರುವ ಅಮಾನವೀಯ ಘಟನೆ…

2 hours ago

ಹಾಸನದಲ್ಲಿ ಜಾ.ದಳ ಶಕ್ತಿ ಪ್ರದರ್ಶನ : ಚುನಾವಣೆಗೆ ತಯಾರಾಗುವಂತೆ ಕಾರ್ಯಕರ್ತರಿಕೆ ಎಚ್‌ಡಿಕೆ ಕರೆ

ಹಾಸನ : ಮುಂದಿನ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೆ ಸಿದ್ಧತೆ ನಡೆಸುವ ಸಂದೇಶವನ್ನು ರಾಜ್ಯದ ಜನರಿಗೆ ತಲುಪಿಸುವ ಗುರಿಯೊಂದಿಗೆ ನಗರದಲ್ಲಿ ಆಯೋಜಿಸಿದ್ದ…

3 hours ago

ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ; 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

ಮಳವಳ್ಳಿ : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಹತ್ತುಕ್ಕೂ ಹೆಚ್ಚು ಮಂದಿ ತೀವ್ರವಾಗಿ ಗಾಯಗೊಂಡಿರುವ ಘಟನೆ ಹೊಸಹಳ್ಳಿ…

3 hours ago

ನಂಜನಗೂಡು | ಶ್ರೀಕಂಠೇಶ್ವರ ದೇವಾಲಯದ ಮುಂದಿನ ಅನಧಿಕೃತ ಅಂಗಡಿ ತೆರವು

ನಂಜನಗೂಡು : ಶ್ರೀಕಂಠೇಶ್ವರ ದೇವಾಲಯದ ಆವರಣದಲ್ಲಿನ ಅನಧಿಕೃತ ಅಂಗಡಿಗಳನ್ನು ಇಂದು(ಜ.24) ಮತ್ತೋಮ್ಮೆ ತೆರವು ಗೊಳಿಸಲಾಯಿತು. ದೇವಾಲಯದ ನೂತನ ಕಾರ್ಯನಿರ್ವಾಹಕ ಅಧಿಕಾರ…

4 hours ago

ಚಿನ್ನ ಕಳ್ಳ ಸಾಗಾಣಿಕೆ ಪತ್ತೆ : 2.89 ಕೋಟಿ ರೂ. ಮೌಲ್ಯದ ಚಿನ್ನ ವಶ

ಮುಂಬೈ : ಸೌದಿ ಅರೇಬಿಯಾದಿಂದ ಅಂತರರಾಷ್ಟ್ರೀಯ ಕೊರಿಯರ್ ಟರ್ಮಿನಲ್‌ನಲ್ಲಿ ಸಾಗಿಸುತ್ತಿದ್ದ ಗ್ರೈಂಡರ್‌ನಲ್ಲಿ ಬಚ್ಚಿಟ್ಟಿದ್ದ 2.89 ಕೋಟಿ ರೂ.ಮೌಲ್ಯದ ಚಿನ್ನವನ್ನು ಕಂದಾಯ…

4 hours ago