Eshwara Khandre
2 ವರ್ಷದಲ್ಲಿ ಒಟ್ಟು 248 ಎಕರೆ ಅರಣ್ಯ ಒತ್ತುವರಿ ತೆರವು
ಬೆಂಗಳೂರು : ಅರಣ್ಯ, ಪರಿಸರ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ ಖಂಡ್ರೆ (Eshwara Khandre) ಅವರ ಸೂಚನೆ ಮೇರೆಗೆ ಬೆಂಗಳೂರು ಪೂರ್ವ ತಾಲೂಕು ಬಿದರಹಳ್ಳಿ ಹೋಬಳಿ, ಕಾಡುಗೋಡಿ ಪ್ಲಾಂಟೇಷನ್ನ ಸರ್ವೆ ನಂ.1ರಲ್ಲಿ 120 ಎಕರೆ ಅರಣ್ಯ ಭೂಮಿ ಒತ್ತುವರಿ ತೆರವುಗೊಳಿಸಲಾಗಿದೆ.
ಬಿಗಿ ಪೊಲೀಸ್ ಬಂದೋಬಸ್ತ್ ನಲ್ಲಿ ಇಂದು ಬೆಳಗ್ಗೆಯೇ ಜೆಸಿಬಿಯೊಂದಿಗೆ ಕಾರ್ಯಾಚರಣೆಗೆ ಇಳಿದ ಬೆಂಗಳೂರು ನಗರ ಅರಣ್ಯ ಇಲಾಖೆ ಅಧಿಕಾರಿಗಳ ನೇತೃತ್ವದ ತಂಡ ಕಾಡುಗೋಡಿಯ ಪ್ಲಾಂಟೇಷನ್ನ ಅರಣ್ಯ ಭೂಮಿಯ ಒತ್ತುವರಿ ತೆರವು ಮಾಡಿ, ಮರು ವಶಕ್ಕೆ ಪಡೆದು, ಗಡಿ ಗುರುತಿಸಿ ಸ್ಥಳೀಯ ಪ್ರಭೇದದ ಸಸಿಗಳನ್ನು ನೆಡುವ ಕಾರ್ಯದಲ್ಲಿ ನಿರತರಾಗಿದ್ದಾರೆ.
ಇಂದು ವಶಪಡಿಸಿಕೊಳ್ಳಲಾದ ಅರಣ್ಯ ಭೂಮಿಯ ಮಾರುಕಟ್ಟೆ ಮೌಲ್ಯ ಸುಮಾರು 4 ಸಾವಿರ ಕೋಟಿ ರೂಪಾಯಿಗೂ ಅಧಿಕ ಎಂದು ಅಂದಾಜಿಸಲಾಗಿದೆ. ಕಾಡುಗೋಡಿ ಅರಣ್ಯ ಪ್ರದೇಶ ಕುರಿತಂತೆ ಇತ್ತೀಚೆಗೆ ನಡೆದ ಸಭೆಯಲ್ಲಿ ಅರಣ್ಯ ಸಚಿವ ಈಶ್ವರ ಬಿ ಖಂಡ್ರೆ ಅವರು, ಬೆಂಗಳೂರು ವ್ಯಾಪಕವಾಗಿ ಬೆಳೆಯುತ್ತಿದ್ದು, ಹಸಿರು ಹೊದಿಕೆ ದಿನದಿಂದ ದಿನಕ್ಕೆ ಕ್ಷೀಣಿಸುತ್ತಿದೆ. ಹೀಗಾಗಿ ಶ್ವಾಸತಾಣಗಳ ಸಂರಕ್ಷಣೆ ಮಾಡಬೇಕು, ನಿಯಮಾನುಸಾರ ಅರಣ್ಯ ಭೂಮಿ ಒತ್ತುವರಿ ತೆರವು ಮಾಡಬೇಕು ಎಂದು ಸ್ಪಷ್ಟ ಸೂಚನೆ ನೀಡಿದ್ದರು.
2 ವರ್ಷದಲ್ಲಿ ಒಟ್ಟು 248 ಎಕರೆ ಅರಣ್ಯ ಒತ್ತುವರಿ ತೆರವು: ಈಶ್ವರ ಖಂಡ್ರೆ ಅವರು ಅರಣ್ಯ ಸಚಿವರಾಗಿ ಅಧಿಕಾರ ವಹಿಸಿಕೊಂಡ ಬಳಿಕ ಕಳೆದ 2 ವರ್ಷದಲ್ಲಿ ಬೆಂಗಳೂರಿನಲ್ಲಿ ಒಟ್ಟು 128 ಎಕರೆ ಅರಣ್ಯ ಭೂಮಿ ಒತ್ತವರಿ ತೆರವುಗೊಳಿಸಲಾಗಿದ್ದು, ಈ 120 ಎಕರೆ ಸೇರಿದರೆ, ಒಟ್ಟು 248 ಎಕರೆ ಆಗಲಿದ್ದು, ಇದರ ಮಾರುಕಟ್ಟೆ ಮೌಲ್ಯ 8 ಸಾವಿರ ಕೋಟಿ ರೂ.ಗೂ ಅಧಿಕವಾಗಿದೆ.
ಇದನ್ನು ಓದಿದ್ರಾ..?: – 4.5 ಲಕ್ಷ ಮೆಟ್ರಿಕ್ ಟನ್ ಕಬ್ಬು ಅರಿಯುವ ಗುರಿ : ಶಾಸಕ ಗಣಿಕ ರವಿಕುಮಾರ್
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…
ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…
ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…
ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…
ರಾಜೇಶ್ ಬೆಂಡರವಾಡಿ ಪಶುಸಂಗೋಪನೆ, ರೇಷ್ಮೆ ಖಾತೆ ಹಂಚಿಕೆ; ಉಭಯ ಕ್ಷೇತ್ರಗಳಲ್ಲಿ ಅನುಭವ ಇರುವ ಹಿನ್ನೆಲೆ ಚಾಮರಾಜನಗರ: ರಾಜ್ಯದಲ್ಲಿ ಎರಡನೇ ಹಂತದಲ್ಲಿ…