ಬೆಂಗಳೂರು: ಅರಣ್ಯ ಅಧಿಕಾರಿಗಳು ಜನರಿಗೆ ಕಾಡಿನ ಮಹತ್ವ ತಿಳಿಸಿ ಮತ್ತು ಹಸಿರು ಹೊದಿಕೆ ಹೆಚ್ಚಳ ಏಕೆ ಎಂಬ ಬಗ್ಗೆ ಜಾಗೃತಿ ಮೂಡಿಸುವುದರ ಜೊತೆಗೆ ಪ್ರಾಮಾಣಿಕವಾಗಿ ಸಸಿನೆಟ್ಟು ಬೆಳೆಸುವ ಇಚ್ಛಾಶಕ್ತಿ ಪ್ರದರ್ಶಿಸಿದರೆ ರಾಜ್ಯದ ಅರಣ್ಯ ವ್ಯಾಪ್ತಿ ಕೆಲವೇ ವರ್ಷಗಳಲ್ಲಿ ಶೇ.33ಕ್ಕೆ ತಲುಪುವುದರಲ್ಲಿ ಸಂದೇಹವಿಲ್ಲ ಎಂದು ಅರಣ್ಯ ಸಚಿವ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸಾಧನೆಗೆ ಅಸಾಧ್ಯವಾದದ್ದು ಯಾವುದೂ ಇಲ್ಲ. ಆದರೆ ಸಾಧಿಸುವ ಛಲ, ಇಚ್ಛಾಶಕ್ತಿ ಇರಬೇಕು. ಅರಣ್ಯ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುವ ಪ್ರತಿಯೊಬ್ಬರೂ ಕಾಡನ್ನು ಉಳಿಸಿ, ಬೆಳೆಸುವ ಸಂಕಲ್ಪ ಮಾಡಿ, ಹೊಸ ಒತ್ತುವರಿಗೆ ಅವಕಾಶ ನೀಡದೆ, ಮಾನವೀಯ ನೆಲೆಗಟ್ಟಿನಲ್ಲಿ ಈಗಾಗಲೇ ಆಗಿರುವ ಒತ್ತುವರಿ ತೆರವು ಮಾಡಿಸಬೇಕು ಎಂದು ಸೂಚಿಸಿದರು.
ಜಾಗತಿಕ ತಾಪಮಾನ ಏರಿಕೆ ಮತ್ತು ಹವಾಮಾನ ಬದಲಾವಣೆಯ ಪರಿಣಾಮ ಪ್ರಕೃತಿ, ಪರಿಸರದ ಮೇಲಾಗುತ್ತಿದೆ. ಮಾಲಿನ್ಯ ಹೆಚ್ಚಳದಿಂದ ಕಡಿಯುವ ನೀರೂ ವಿಷವಾಗಿ ಜನರು ಅಸ್ವಸ್ಥರಾಗುತ್ತಿರುವುದನ್ನು ನೋಡುತ್ತಿದ್ದೇವೆ. ಈ ನಿಟ್ಟಿನಲ್ಲಿ ಪರಿಸರ, ಪ್ರಕೃತಿ ಉಳಿಸುವ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯ ಆಗಬೇಕು. ಸುಸ್ಥಿರ ಅಭಿವೃದ್ಧಿಗೆ ಒತ್ತು ನೀಡಬೇಕು ಎಂದು ಸಲಹೆ ನೀಡಿದರು.
1864ರ ಜನವರಿ 11ರಂದು ಅರಣ್ಯ ಸಂರಕ್ಷಣೆಗಾಗಿ ಮೈಸೂರು ಅರಣ್ಯ ಇಲಾಖೆ ಸ್ಥಾಪಿಸಲಾಯಿತು. 1700ರ ದಶಕದಲ್ಲಿ ಸೇನೆಯ ಬಳಕೆಗಾಗಿ ಇದ್ದ ಮದ್ರಾಸು-ಕಣ್ಣೂರು ರಸ್ತೆಯ ನಿರ್ವಹಣೆಗಾಗಿ ಅತ್ಯುತ್ತಮ ತೇಗದ ಮರಗಳು ಸೇರಿದಂತೆ ಅರಣ್ಯ ನಾಶವಾಯಿತು. ನಂತರ 1799ರ ಮೈಸೂರು ಯುದ್ಧದ ಬಳಿಕ ಶ್ರೀರಂಗಪಟ್ಟಣದ ಪತನವಾದ ಮೇಲೆ ಮೈಸೂರಿನ ಸ್ಥಳೀಯ ವೃಕ್ಷ ಸಂಪತ್ತಿನ ಮೇಲೆ ಪ್ರಭಾವ ಬೀರಿತು ಎಂದ ಇತಿಹಾಸದ ಘಟನೆಗಳನ್ನು ಸ್ಮರಿಸಿದರು.
ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…
ಮಂಡ್ಯ: ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…
ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…
ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…
ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…
ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…