ರಾಜ್ಯ

ಮಾನವನ ದುರಾಸೆಯಿಂದಲೇ ಅರಣ್ಯ ಸಂಪತ್ತು ನಾಶವಾಗುತ್ತಿದೆ: ಸಚಿವ ಈಶ್ವರ ಖಂಡ್ರೆ ಬೇಸರ

ಬೆಂಗಳೂರು: ಅರಣ್ಯ ಅಧಿಕಾರಿಗಳು ಜನರಿಗೆ ಕಾಡಿನ ಮಹತ್ವ ತಿಳಿಸಿ ಮತ್ತು ಹಸಿರು ಹೊದಿಕೆ ಹೆಚ್ಚಳ ಏಕೆ ಎಂಬ ಬಗ್ಗೆ ಜಾಗೃತಿ ಮೂಡಿಸುವುದರ ಜೊತೆಗೆ ಪ್ರಾಮಾಣಿಕವಾಗಿ ಸಸಿನೆಟ್ಟು ಬೆಳೆಸುವ ಇಚ್ಛಾಶಕ್ತಿ ಪ್ರದರ್ಶಿಸಿದರೆ ರಾಜ್ಯದ ಅರಣ್ಯ ವ್ಯಾಪ್ತಿ ಕೆಲವೇ ವರ್ಷಗಳಲ್ಲಿ ಶೇ.33ಕ್ಕೆ ತಲುಪುವುದರಲ್ಲಿ ಸಂದೇಹವಿಲ್ಲ ಎಂದು ಅರಣ್ಯ ಸಚಿವ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ.

ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸಾಧನೆಗೆ ಅಸಾಧ್ಯವಾದದ್ದು ಯಾವುದೂ ಇಲ್ಲ. ಆದರೆ ಸಾಧಿಸುವ ಛಲ, ಇಚ್ಛಾಶಕ್ತಿ ಇರಬೇಕು. ಅರಣ್ಯ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುವ ಪ್ರತಿಯೊಬ್ಬರೂ ಕಾಡನ್ನು ಉಳಿಸಿ, ಬೆಳೆಸುವ ಸಂಕಲ್ಪ ಮಾಡಿ, ಹೊಸ ಒತ್ತುವರಿಗೆ ಅವಕಾಶ ನೀಡದೆ, ಮಾನವೀಯ ನೆಲೆಗಟ್ಟಿನಲ್ಲಿ ಈಗಾಗಲೇ ಆಗಿರುವ ಒತ್ತುವರಿ ತೆರವು ಮಾಡಿಸಬೇಕು ಎಂದು ಸೂಚಿಸಿದರು.

ಜಾಗತಿಕ ತಾಪಮಾನ ಏರಿಕೆ ಮತ್ತು ಹವಾಮಾನ ಬದಲಾವಣೆಯ ಪರಿಣಾಮ ಪ್ರಕೃತಿ, ಪರಿಸರದ ಮೇಲಾಗುತ್ತಿದೆ. ಮಾಲಿನ್ಯ ಹೆಚ್ಚಳದಿಂದ ಕಡಿಯುವ ನೀರೂ ವಿಷವಾಗಿ ಜನರು ಅಸ್ವಸ್ಥರಾಗುತ್ತಿರುವುದನ್ನು ನೋಡುತ್ತಿದ್ದೇವೆ. ಈ ನಿಟ್ಟಿನಲ್ಲಿ ಪರಿಸರ, ಪ್ರಕೃತಿ ಉಳಿಸುವ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯ ಆಗಬೇಕು. ಸುಸ್ಥಿರ ಅಭಿವೃದ್ಧಿಗೆ ಒತ್ತು ನೀಡಬೇಕು ಎಂದು ಸಲಹೆ ನೀಡಿದರು.

1864ರ ಜನವರಿ 11ರಂದು ಅರಣ್ಯ ಸಂರಕ್ಷಣೆಗಾಗಿ ಮೈಸೂರು ಅರಣ್ಯ ಇಲಾಖೆ ಸ್ಥಾಪಿಸಲಾಯಿತು. 1700ರ ದಶಕದಲ್ಲಿ ಸೇನೆಯ ಬಳಕೆಗಾಗಿ ಇದ್ದ ಮದ್ರಾಸು-ಕಣ್ಣೂರು ರಸ್ತೆಯ ನಿರ್ವಹಣೆಗಾಗಿ ಅತ್ಯುತ್ತಮ ತೇಗದ ಮರಗಳು ಸೇರಿದಂತೆ ಅರಣ್ಯ ನಾಶವಾಯಿತು. ನಂತರ 1799ರ ಮೈಸೂರು ಯುದ್ಧದ ಬಳಿಕ ಶ್ರೀರಂಗಪಟ್ಟಣದ ಪತನವಾದ ಮೇಲೆ ಮೈಸೂರಿನ ಸ್ಥಳೀಯ ವೃಕ್ಷ ಸಂಪತ್ತಿನ ಮೇಲೆ ಪ್ರಭಾವ ಬೀರಿತು ಎಂದ ಇತಿಹಾಸದ ಘಟನೆಗಳನ್ನು ಸ್ಮರಿಸಿದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಬೆಳ್ಳಂಬೆಳಗ್ಗೆ JCB ಘರ್ಜನೆ ; ಸರ್ಕಾರಿ ಜಾಗ ಅಕ್ರಮ ತೆರವು

ಮೈಸೂರು : ಮೈಸೂರು ನಗರದಲ್ಲಿ ಬೆಳ್ಳಂಬೆಳಿಗ್ಗೆ ಜೆಸಿಬಿ ಘರ್ಜನೆ ಕೇಳಿ ಬಂದಿದ್ದು, ಸರ್ಕಾರಿ ಭೂಮಿಯನ್ನು ಒತ್ತುವರಿ ಮಾಡಿಕೊಂಡಿದ್ದ ಜಾಗವನ್ನು ಸರ್ಕಾರದ…

21 mins ago

ಡ್ರಗ್ಸ್‌ ಹಾವಳಿ ನಿಯಂತ್ರಣದಲ್ಲಿ ಸಿಸಿಬಿ ವೈಫಲ್ಯ ; ಕಮಿಷನರ್ ಸೀಮಾ ಲಾಟ್ಕರ್ ಸಿಬ್ಬಂದಿಗೆ ಬಿಗ್ ಶಾಕ್!

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇತ್ತೀಚಿಗೆ ಮಾದಕ ವಸ್ತುಗಳ (ಡ್ರಗ್ಸ್) ತಯಾರಿಕೆ ಮತ್ತು ಮಾರಾಟದ ಜಾಲಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ…

1 hour ago

ಹೊತ್ತಿ ಉರಿದ ಖಾಸಗಿ ಬಸ್‌ : ಸಂಪೂರ್ಣ ಕರಕಲು ; 40 ಪ್ರಯಾಣಿಕರು ಬಚಾವ್‌

ಬೆಂಗಳೂರು : ನೆಲಮಂಗಲ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಬೆಂಗಳೂರಿನಿಂದ ಯಾದಗಿರಿ ಕಡೆಗೆ ಹೊರಟಿದ್ದ ಖಾಸಗಿ ನಾನ್-ಎಸಿ ಸ್ಲೀಪರ್ ಬಸ್‌ವೊಂದು…

2 hours ago

ಓದುಗರ ಪತ್ರ: ಯುಜಿಡಿ ಕೇಬಲ್; ಸೆಸ್ಕ್ ನಿರ್ಲಕ್ಷ್ಯ

ಯುಜಿಡಿ ಕೇಬಲ್; ಸೆಸ್ಕ್ ನಿರ್ಲಕ್ಷ್ಯ ಮೈಸೂರಿನ ಬಹುತೇಕ ಎಲ್ಲ ಬಡಾವಣೆಗಳಲ್ಲೂ, ಚಾಮುಂಡೇಶ್ವರಿ ವಿದ್ಯುತ್ ನಿಗಮ (ಸೆಸ್ಕ್)ನಿಂದ ಅಂಡರ್ ಗ್ರೌಂಡ್ ಕೇಬಲ್…

6 hours ago

ಓದುಗರ ಪತ್ರ: ನ್ಯಾಯಾಂಗ ಬಡಾವಣೆಗೆ ಹೆಚ್ಚಿನ ಬಸ್ ಸೌಲಭ್ಯ ಕಲ್ಪಿಸಿ

ಮೈಸೂರಿನ ರಾಜರಾಜೇಶ್ವರಿ ನಗರದ ಬಳಿಯ ನ್ಯಾಯಾಂಗ ಬಡಾವಣೆಯಲ್ಲಿ ಐದಕ್ಕೂ ಹೆಚ್ಚು ಸರ್ಕಾರಿ ವಸತಿನಿಲಯಗಳಿದ್ದು, ಬೆಳಿಗ್ಗೆ ಹಾಗೂ ಸಂಜೆ ಸಾಕಷ್ಟು ನಗರ…

6 hours ago

ಓದುಗರ ಪತ್ರ: ಮಹಾರಾಣಿ ಕಾಲೇಜು ಆವರಣದಲ್ಲಿನ ಕಸ ತೆರವುಗೊಳಿಸಿ

ಮೈಸೂರಿನ ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿನ ಆವರಣದಲ್ಲಿ ಪ್ಲಾಸ್ಟಿಕ್ ಬಾಟಲಿ, ಪ್ಲೇಟ್, ಚೀಲಗಳು ಹಾಗೂ ಮರದ ಎಲೆಗಳು ತುಂಬಿದ್ದು, ಅನೈರ್ಮಲ್ಯದ…

6 hours ago