ರಾಜ್ಯ

ಮಾನವನ ದುರಾಸೆಯಿಂದಲೇ ಅರಣ್ಯ ಸಂಪತ್ತು ನಾಶವಾಗುತ್ತಿದೆ: ಸಚಿವ ಈಶ್ವರ ಖಂಡ್ರೆ ಬೇಸರ

ಬೆಂಗಳೂರು: ಅರಣ್ಯ ಅಧಿಕಾರಿಗಳು ಜನರಿಗೆ ಕಾಡಿನ ಮಹತ್ವ ತಿಳಿಸಿ ಮತ್ತು ಹಸಿರು ಹೊದಿಕೆ ಹೆಚ್ಚಳ ಏಕೆ ಎಂಬ ಬಗ್ಗೆ ಜಾಗೃತಿ ಮೂಡಿಸುವುದರ ಜೊತೆಗೆ ಪ್ರಾಮಾಣಿಕವಾಗಿ ಸಸಿನೆಟ್ಟು ಬೆಳೆಸುವ ಇಚ್ಛಾಶಕ್ತಿ ಪ್ರದರ್ಶಿಸಿದರೆ ರಾಜ್ಯದ ಅರಣ್ಯ ವ್ಯಾಪ್ತಿ ಕೆಲವೇ ವರ್ಷಗಳಲ್ಲಿ ಶೇ.33ಕ್ಕೆ ತಲುಪುವುದರಲ್ಲಿ ಸಂದೇಹವಿಲ್ಲ ಎಂದು ಅರಣ್ಯ ಸಚಿವ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ.

ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸಾಧನೆಗೆ ಅಸಾಧ್ಯವಾದದ್ದು ಯಾವುದೂ ಇಲ್ಲ. ಆದರೆ ಸಾಧಿಸುವ ಛಲ, ಇಚ್ಛಾಶಕ್ತಿ ಇರಬೇಕು. ಅರಣ್ಯ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುವ ಪ್ರತಿಯೊಬ್ಬರೂ ಕಾಡನ್ನು ಉಳಿಸಿ, ಬೆಳೆಸುವ ಸಂಕಲ್ಪ ಮಾಡಿ, ಹೊಸ ಒತ್ತುವರಿಗೆ ಅವಕಾಶ ನೀಡದೆ, ಮಾನವೀಯ ನೆಲೆಗಟ್ಟಿನಲ್ಲಿ ಈಗಾಗಲೇ ಆಗಿರುವ ಒತ್ತುವರಿ ತೆರವು ಮಾಡಿಸಬೇಕು ಎಂದು ಸೂಚಿಸಿದರು.

ಜಾಗತಿಕ ತಾಪಮಾನ ಏರಿಕೆ ಮತ್ತು ಹವಾಮಾನ ಬದಲಾವಣೆಯ ಪರಿಣಾಮ ಪ್ರಕೃತಿ, ಪರಿಸರದ ಮೇಲಾಗುತ್ತಿದೆ. ಮಾಲಿನ್ಯ ಹೆಚ್ಚಳದಿಂದ ಕಡಿಯುವ ನೀರೂ ವಿಷವಾಗಿ ಜನರು ಅಸ್ವಸ್ಥರಾಗುತ್ತಿರುವುದನ್ನು ನೋಡುತ್ತಿದ್ದೇವೆ. ಈ ನಿಟ್ಟಿನಲ್ಲಿ ಪರಿಸರ, ಪ್ರಕೃತಿ ಉಳಿಸುವ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯ ಆಗಬೇಕು. ಸುಸ್ಥಿರ ಅಭಿವೃದ್ಧಿಗೆ ಒತ್ತು ನೀಡಬೇಕು ಎಂದು ಸಲಹೆ ನೀಡಿದರು.

1864ರ ಜನವರಿ 11ರಂದು ಅರಣ್ಯ ಸಂರಕ್ಷಣೆಗಾಗಿ ಮೈಸೂರು ಅರಣ್ಯ ಇಲಾಖೆ ಸ್ಥಾಪಿಸಲಾಯಿತು. 1700ರ ದಶಕದಲ್ಲಿ ಸೇನೆಯ ಬಳಕೆಗಾಗಿ ಇದ್ದ ಮದ್ರಾಸು-ಕಣ್ಣೂರು ರಸ್ತೆಯ ನಿರ್ವಹಣೆಗಾಗಿ ಅತ್ಯುತ್ತಮ ತೇಗದ ಮರಗಳು ಸೇರಿದಂತೆ ಅರಣ್ಯ ನಾಶವಾಯಿತು. ನಂತರ 1799ರ ಮೈಸೂರು ಯುದ್ಧದ ಬಳಿಕ ಶ್ರೀರಂಗಪಟ್ಟಣದ ಪತನವಾದ ಮೇಲೆ ಮೈಸೂರಿನ ಸ್ಥಳೀಯ ವೃಕ್ಷ ಸಂಪತ್ತಿನ ಮೇಲೆ ಪ್ರಭಾವ ಬೀರಿತು ಎಂದ ಇತಿಹಾಸದ ಘಟನೆಗಳನ್ನು ಸ್ಮರಿಸಿದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಮಂಡ್ಯ | ಪೊಲೀಸ್ ಠಾಣೆಯಿಂದ ತಪ್ಪಿಸಿಕೊಂಡು ಬಂದಿದ್ದ ಕೈದಿ ಜನರ ಕೈಗೆ ಸಿಕ್ಕಿಬಿದ್ದ

ಮಂಡ್ಯ : ಕೈಯ್ಯಲ್ಲಿ ಬೇಡಿ ಹಾಕಿ ಕೊಂಡಿರುವಾಗಲೇ ಠಾಣೆಯಿಂದ ತಪ್ಪಿಸಿಕೊಂಡು ಬಂದ ಕಳ್ಳನೊಬ್ಬ ಜನರ ಕೈಗೆ ಸಿಕ್ಕಿಬಿದ್ದಿರುವ ಘಟನೆ ಇಲ್ಲಿನ…

48 mins ago

ದಸರಾ ಗಜಪಡೆ ವೀಕ್ಷಣೆ ಟಿಕೆಟ್‌ ರದ್ದು

ಮೈಸೂರು: ಮೊನ್ನೆಯಷ್ಟೇ ಲಿಂಗಾಂಬುಧಿ ಉದ್ಯಾನ ಪ್ರವೇಶಕ್ಕೆ ಶುಲ್ಕ ನಿಗದಿಪಡಿಸಿ ಪರಿಸರವಾದಿಗಳ ಕೆಂಗಣ್ಣಿಗೆ ಗುರಿಯಾಗಿದ್ದ ಅರಣ್ಯ ಇಲಾಖೆ ಅಧಿಕಾರಿಗಳು ಅರಮನೆ ಅಂಗಳದಲ್ಲಿ…

2 hours ago

ನೇಪಾಳ ದುರಂತ | ಮೃತದೇಹದ ಮೇಲಿದ್ದ ಚಿನ್ನ ಕಳವು ; ಇಬ್ಬರು ಆರೋಪಿಗಳ ಬಂಧನ

ಎಚ್ಚೆತ್ತ ಪೊಲೀಸ್ ಆಡಳಿತ ; ಇಬ್ಬರು ಆರೋಪಿಗಳ ಬಂಧನ ಕಠ್ಮಂಡು : ನೇಪಾಳದಲ್ಲಿ ಸಂಭವಿಸಿರುವ ಭೀಕರ ಮಹಾಪೂರ ಹಾಗೂ ಭೂಕುಸಿತದಿಂದಾಗಿ…

2 hours ago

ಸೋನಿಯಾ ಗಾಂಧಿ ಆತ್ಮಚರಿತ್ರೆ ; ರಾಜಕೀಯ, ಸಾಹಿತ್ಯಿಕ ವಲಯದಲ್ಲಿ ಕೋಲಾಹಲ

ಹೊಸದಿಲ್ಲಿ : ಯುಪಿಎ ಒಕ್ಕೂಟದ ಹಿರಿಯ ನಾಯಕಿ ಹಾಗೂ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ…

2 hours ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ಈ ಬಾರಿ ಮೆರವಣಿಗೆಗೆ ಸೇನೆಗೆ ಆಹ್ವಾನ ಎಂದ ಸಿಎಂ ಡಿಕೆಶಿ

ಮೈಸೂರು: ಈ ಬಾರಿಯ ಮೈಸೂರು ದಸರಾ ಮೆರವಣಿಗೆಗೆ ಸೇನೆ ಹಾಗೂ ವಾಯುಸೇನೆಯನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್‌…

7 hours ago

ಮೈಕ್ರೋ ಫೈನಾನ್ಸ್‌ ಕಿರುಕುಳ: ವ್ಯಕ್ತಿ ಆತ್ಮಹತ್ಯೆ

ಹುಣಸೂರು: ತಾಲೂಕಿನ ನಂಜಾಪುರ ಗ್ರಾಮದಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ನಂಜಾಪುರದಲ್ಲಿ…

10 hours ago