ಚಿಕ್ಕಮಗಳೂರು: ಜಿಲ್ಲೆಯ ಚಾರ್ಮಾಡಿ ಘಾಟ್ನಲ್ಲಿ ನಿನ್ನೆ ತಡರಾತ್ರಿ ಕಾಡ್ಗಿಚ್ಚು ಕಾಣಿಸಿದ್ದು, ನೂರಾರು ಎಕರೆಯ ಅರಣ್ಯ ನಾಶವಾಗಿದೆ. ಈ ವೇಳೆ ಬೆಂಕಿಯನ್ನು ನಂದಿಸಲು ಅಗ್ನಿಶಾಮಕ ಸಿಬ್ಬಂದಿಯವರು ಹರಸಾಹಸ ಮಾಡಿದ್ದಾರೆ.
ಕಳೆದ ವಾರವಷ್ಟೇ ಚಾರ್ಮಾಡಿ ಘಾಟ್ನ ಬಿದಿರುತಳ ತಪ್ಪಲಿನ ಕಾಡಿನಲ್ಲಿ ಕಾಡ್ಗಿಚ್ಚು ಆವರಿಸಿ ಅರಣ್ಯ ಹಾಗೂ ಪ್ರಾಣಿ ಸಂಕುಲ ನಾಶವಾಗಿತ್ತು. ಇದೀಗ ಮತ್ತೊಮ್ಮೆ ಶುಕ್ರವಾರ(ಜನವರಿ.24)ದಂದು ತಡರಾತ್ರಿ ಭಾರಿ ಪ್ರಮಾಣದಲ್ಲಿ ಕಾಡ್ಗಿಚ್ಚು ಆವರಿಸಿದ್ದು, ನೂರಾರು ಎಕರೆಯ ಶೋಲಾ ಅರಣ್ಯ ಸುಟ್ಟು ಭಸ್ಮವಾಗಿದೆ. ಈ ವಿಷಯ ತಿಳಿದ ಕೂಡಲೇ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿದ್ದು, ಬೆಂಕಿ ನಂದಿಸಲು ಹರಸಾಹಸ ಮಾಡಿದ್ದಾರೆ.
ಅಗ್ನಿಶಾಮಕ ಸಿಬ್ಬಂದಿಯವರು ರಸ್ತೆಬದಿ ಬೆಂಕಿಯನ್ನು ನಂದಿಸಿದರೆ, ಅರಣ್ಯ ಅಧಿಕಾರಿಗಳು ಹಾಗೂ ಸ್ಥಳೀಯರು ಗುಡ್ಡ ಹತ್ತಿ ಬೆಂಕಿ ನಂದಿಸಲು ಸಾಧ್ಯವಾಗದೇ ಪರದಾಡಿದ್ದಾರೆ. ಬೆಂಕಿಯ ಕೆನ್ನಾಲಿಗೆ 10 ಕಿ.ಮೀ.ನಷ್ಟು ದೂರಕ್ಕೆ ಬೆಂಕಿ ಆವರಿಸಿದ್ದು, ಸ್ಥಳೀಯರಲ್ಲಿ ಆತಂಕ ಹುಟ್ಟಿಸಿತ್ತು. ಆದರೆ ಅಗ್ನಿಶಾಮಕ ಸಿಬ್ಬಂದಿ, ಅರಣ್ಯ ಅಧಿಕಾರಿಗಳು ಹಾಗೂ ಸ್ಥಳೀಯರ ಹೋರಾಟದಿಂದ ಇಂದು ಬೆಳಗ್ಗೆ 10 ಗಂಟೆ ವೇಳೆಗೆ ಬೆಂಕಿಯನ್ನು ಸಂಪೂರ್ಣವಾಗಿ ನಂದಿಸಿದ್ದಾರೆ.
ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…
ಆರ್ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…
ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…
ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್ಗೇಟ್ಗಳನ್ನು ಬಂದ್…