ರಾಜ್ಯ

ಪ್ರವಾಸಿ ತಾಣ ಮುಳ್ಳಯ್ಯನಗಿರಿ ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು : ಎಕ್ಕರೆಗಟ್ಟಲೆ ಅರಣ್ಯ ಭಸ್ಮ!

ಚಿಕ್ಕಮಗಳೂರು : ರಾಜ್ಯದ ಅತ್ಯಂತ ಎತ್ತರದ ಪ್ರದೇಶ ಹಾಗೂ ಪ್ರವಾಸಿ ತಾಣವಾಗಿರುವ ಚಿಕ್ಕಮಗಳೂರು ತಾಲೂಕಿನ ಚಂದ್ರದ್ರೋಣ ಪರ್ವತಗಳ ಸಾಲಿನ ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಕಾಡ್ಗಿಚ್ಚು ಹಬ್ಬಿದ್ದು ಬೆಂಕಿಯ ಕೆನ್ನಾಲಿಗೆ ನೂರಾರು ಎಕರೆ ಅರಣ್ಯ ಸಂಪೂರ್ಣ ಸುಟ್ಟು ಕರಕಲಾಗಿದೆ.

ಮುಳ್ಳಯ್ಯನಗಿರಿ ತಪ್ಪಲು ಅಂದ್ರೆನೆ ಅಪರೂಪದ ಸಸ್ಯ ಸಂಪತ್ತಿನ ರಾಶಿ. ಬಿಸಿಲಿನ ಝಳಕ್ಕೆ ಬೆಂಕಿಯ ಕೆನ್ನಾಲಿಗೆ ಹೆಚ್ಚಿದ ಪರಿಣಾಮ ನೂರಾರು ಎಕರೆ ಅಪರೂಪದ ಸಸ್ಯರಾಶಿ ಕೂಡ ಸುಟ್ಟು ಭಸ್ಮವಾಗಿದೆ.

ಸ್ಥಳಕ್ಕೆ ಭೇಟಿ ನೀಡಿರುವ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿಯನ್ನ ನಂದಿಸಲು ಹರಸಾಹಸ ಪಡ್ತಿದ್ದಾರೆ‌. ಅರಣ್ಯ ಇಲಾಖೆ, ಅಗ್ನಿ ಶಾಮಕ ಸಿಬ್ಬಂದಿಗಳ ಜೊತೆ ಸ್ಥಳಿಯರು ಕೂಡ ಬೆಂಕಿ ನಂದಿಸಲು ಕೈಜೋಡಿಸಿದ್ದಾರೆ.

ಆದರೆ, ಭಾರೀ ಗಾಳಿಗೆ ಬೆಂಕಿಯ ಜ್ವಾಲೆ ಹರಡುತ್ತಲೇ ಇದ್ದು ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸಲು ಹೋರಾಡುತ್ತಿದ್ದಾರೆ. ಇಂದು ಭಾನುವಾರವಾಗಿರೋದ್ರಿಂದ ನೂರಾರು ಪ್ರವಾಸಿಗರು ಕೂಡ ಸಿಕ್ಕಿಬಿದ್ದಿದ್ದಾರೆ.

ಮುಳ್ಳಯ್ಯನಗಿರಿ ಮಾರ್ಗದಲ್ಲೇ ಬೆಂಕಿ ಹತ್ತಿರೋದ್ರಿಂದ ರಸ್ತೆ ಬದಿಯಲ್ಲೂ ಬೆಂಕಿ ಹತ್ತಿಕೊಂಡಿದ್ದು ಕೆಲ ಪ್ರವಾಸಿಗರು ಮುಳ್ಳಯ್ಯನಗಿರಿಯಿಂದ ಚಿಕ್ಕಮಗಳೂರಿಗೆ ಬರಲು ಸಾಧ್ಯವಾಗದೇ ಮುಳ್ಳಯ್ಯನಗಿರಿ ಮಾರ್ಗದಲ್ಲೇ ಜಾಮ್ ಆಗಿದ್ದಾರೆ.

ಅರಣ್ಯ ಅಧಿಕಾರಿಗಳು ಬೆಂಕಿಯ ಜ್ವಾಲೆ ಸ್ವಲ್ಪ ಕಡಿಮೆಯಾದ ಬಳಿಕ ಕಳಿಸುತ್ತೇವೆ ಎಂದು ಹೇಳಿ ಅಲ್ಲೆ ಉಳಿಸಿಕೊಂಡಿದ್ದಾರೆ. ಆದರೆ, ಬೆಂಕಿಯಿಂದ ಪ್ರವಾಸಿಗರು ಸೇರಿದಂತೆ ಯಾರಿಗೂ ತೊಂದರೆಯಾಗಿಲ್ಲ. ಅಗ್ನಿ ಶಾಮಕ ಸಿಬ್ಬಂದಿಗಳು ರಸ್ತೆಯಲ್ಲಿ ನಿಂತು ಆಕಾಶಕ್ಕೆ ನೀರನ್ನ ಚಿಮ್ಮಿಸುವ ಮೂಲಕ ಬೆಂಕಿಯನ್ನ ನಂದಿಸಿದ್ದಾರೆ.

ಬಿಸಿಲ ದಗೆಗೆ ಅರಣ್ಯ ಸಂಪೂರ್ಣ ಒಣಗಿ ನಿಂತಿರೋದ್ರಿಂದ ನೋಡನೋಡುತ್ತಿದ್ದಂತೆ ನೂರಾರು ಎಕರೆ ಅರಣ್ಯ ಬೆಂಕಿಗಾಹುತಿಯಾಗಿದ್ದು ಪ್ರಾಣಿ ಪಕ್ಷಿಗಳ ಜೀವಕ್ಕೂ ಕುತ್ತು ಉಂಟಾಗಿದೆ.

andolanait

Recent Posts

ಉಡುಪಿ ಮಲ್ಪೆ ಬಳಿ ದೋಣಿ ಪಲ್ಟಿ: ಮೈಸೂರಿನ ಇಬ್ಬರು ಸಾವು

ಉಡುಪಿ: ಇಲ್ಲಿನ ಮಲ್ಪೆ ಕೋಡಿಬೆಂಗ್ರೆ ಬೀಷಚ್‌ ಸಮೀಪ ಪ್ರವಾಸಿ ದೋಣಿ ಮುಗುಚಿದ ಪರಿಣಾಮ ತೀವ್ರ ಅಸ್ವಸ್ಥಗೊಂಡಿದ್ದ ಮೈಸೂರಿನ ಇಬ್ಬರು ಮೃತಪಟ್ಟಿರುವ…

11 hours ago

ಜೆಡಿಎಸ್‌ ಬಿಟ್ಟಿದ್ದು ದ್ರೋಹ ಹೇಗಾಗುತ್ತೆ: ಶಾಸಕ ಶಿವಲಿಂಗೇಗೌಡ

ಹಾಸನ: ನಾನು ಜೆಡಿಎಸ್‌ ಬಿಟ್ಟು ಹೋದರೆ ದ್ರೋಹ ಹೇಗಾಗುತ್ತದೆ? ನಾನು ಅಲ್ಲಿದ್ದರೆ ಇನ್ನೊಂದು ಸೀಟ್‌ ಜಾಸ್ತಿ ಆಗೋದು ಅಷ್ಟೇ. ಏನು…

11 hours ago

ಭಾಷಣ ಮಾಡದೇ ತೆರಳುತ್ತಿದ್ದ ರಾಜ್ಯಪಾಲರಿಗೆ ಅಡ್ಡಿಪಡಿಸಿದ ವಿಚಾರ: ರಾಷ್ಟ್ರಪತಿಗೆ ವರದಿ ರವಾನಿಸಿದ ಲೋಕಭವನ

ಬೆಂಗಳೂರು: ವಿಧಾನಮಂಡಲ ವಿಶೇಷ ಜಂಟಿ ಅಧಿವೇಶನದಲ್ಲಿ ಭಾಷಣ ಮಾಡದೇ ತೆರಳುತ್ತಿದ್ದ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರಿಗೆ ಕಾಂಗ್ರೆಸ್‌ ಸದಸ್ಯರು…

12 hours ago

ಮಳವಳ್ಳಿ: ಈಜಲು ಹೋಗಿದ್ದ ಯುವಕ ಸಾವು

ಮಳವಳ್ಳಿ: ಮಳವಳ್ಳಿ ತಾಲ್ಲೂಕಿನ ಹಲಗೂರು ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದಾಗ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟ ಘಟನೆ…

12 hours ago

ಮಂಡ್ಯದಲ್ಲಿ 3 ಕೋಟಿ ವೆಚ್ಚದಲ್ಲಿ ಗಾಂಧಿಭವನ ನಿರ್ಮಾಣ: ಸಚಿವ ಚಲುವರಾಯಸ್ವಾಮಿ

ಮಂಡ್ಯ: ಮಹಾತ್ಮ ಗಾಂಧೀಜಿ ಅವರ ವಿಚಾರಧಾರೆಗಳನ್ನು ಯುವ ಪೀಳಿಗೆಗೆ ತಲುಪಿಸುವ ಕೆಲಸವನ್ನು ಗಾಂಧಿ ಭವನದಲ್ಲಿ ಮಾಡಲಾಗುವುದು ಎಂದು ಮಂಡ್ಯ ಜಿಲ್ಲಾ…

12 hours ago

ಗ್ರಾಮ ಪಂಚಾಯತ್‌ಗಳ 590 ಸಿಬ್ಬಂದಿಗಳಿಗೆ ಅನುಮೋದನೆ: ಆದೇಶ ಪ್ರತಿ ವಿತರಿಸಿದ ಸಚಿವ ಎನ್‌.ಚಲುವರಾಯಸ್ವಾಮಿ

ಮಂಡ್ಯ: ಮಂಡ್ಯ ಜಿಲ್ಲೆಯ ವ್ಯಾಪ್ತಿಯ ಗ್ರಾಮ ಪಂಚಾಯತ್‌ಗಳಲ್ಲಿ ದಿನಾಂಕ:31-10-2017ಕ್ಕೂ ಪೂರ್ವದಲ್ಲಿ ಗ್ರಾಮ ಪಂಚಾಯತ್ ನಿಂದ ನೇಮಕಗೊಂಡು ನೀರುಗಂಟಿ, ಸ್ವಚ್ಛತಗಾರ, ಅಟೆಂಡರ್…

12 hours ago