ರಾಜ್ಯ

ಪ್ರವಾಸಿ ತಾಣ ಮುಳ್ಳಯ್ಯನಗಿರಿ ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು : ಎಕ್ಕರೆಗಟ್ಟಲೆ ಅರಣ್ಯ ಭಸ್ಮ!

ಚಿಕ್ಕಮಗಳೂರು : ರಾಜ್ಯದ ಅತ್ಯಂತ ಎತ್ತರದ ಪ್ರದೇಶ ಹಾಗೂ ಪ್ರವಾಸಿ ತಾಣವಾಗಿರುವ ಚಿಕ್ಕಮಗಳೂರು ತಾಲೂಕಿನ ಚಂದ್ರದ್ರೋಣ ಪರ್ವತಗಳ ಸಾಲಿನ ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಕಾಡ್ಗಿಚ್ಚು ಹಬ್ಬಿದ್ದು ಬೆಂಕಿಯ ಕೆನ್ನಾಲಿಗೆ ನೂರಾರು ಎಕರೆ ಅರಣ್ಯ ಸಂಪೂರ್ಣ ಸುಟ್ಟು ಕರಕಲಾಗಿದೆ.

ಮುಳ್ಳಯ್ಯನಗಿರಿ ತಪ್ಪಲು ಅಂದ್ರೆನೆ ಅಪರೂಪದ ಸಸ್ಯ ಸಂಪತ್ತಿನ ರಾಶಿ. ಬಿಸಿಲಿನ ಝಳಕ್ಕೆ ಬೆಂಕಿಯ ಕೆನ್ನಾಲಿಗೆ ಹೆಚ್ಚಿದ ಪರಿಣಾಮ ನೂರಾರು ಎಕರೆ ಅಪರೂಪದ ಸಸ್ಯರಾಶಿ ಕೂಡ ಸುಟ್ಟು ಭಸ್ಮವಾಗಿದೆ.

ಸ್ಥಳಕ್ಕೆ ಭೇಟಿ ನೀಡಿರುವ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿಯನ್ನ ನಂದಿಸಲು ಹರಸಾಹಸ ಪಡ್ತಿದ್ದಾರೆ‌. ಅರಣ್ಯ ಇಲಾಖೆ, ಅಗ್ನಿ ಶಾಮಕ ಸಿಬ್ಬಂದಿಗಳ ಜೊತೆ ಸ್ಥಳಿಯರು ಕೂಡ ಬೆಂಕಿ ನಂದಿಸಲು ಕೈಜೋಡಿಸಿದ್ದಾರೆ.

ಆದರೆ, ಭಾರೀ ಗಾಳಿಗೆ ಬೆಂಕಿಯ ಜ್ವಾಲೆ ಹರಡುತ್ತಲೇ ಇದ್ದು ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸಲು ಹೋರಾಡುತ್ತಿದ್ದಾರೆ. ಇಂದು ಭಾನುವಾರವಾಗಿರೋದ್ರಿಂದ ನೂರಾರು ಪ್ರವಾಸಿಗರು ಕೂಡ ಸಿಕ್ಕಿಬಿದ್ದಿದ್ದಾರೆ.

ಮುಳ್ಳಯ್ಯನಗಿರಿ ಮಾರ್ಗದಲ್ಲೇ ಬೆಂಕಿ ಹತ್ತಿರೋದ್ರಿಂದ ರಸ್ತೆ ಬದಿಯಲ್ಲೂ ಬೆಂಕಿ ಹತ್ತಿಕೊಂಡಿದ್ದು ಕೆಲ ಪ್ರವಾಸಿಗರು ಮುಳ್ಳಯ್ಯನಗಿರಿಯಿಂದ ಚಿಕ್ಕಮಗಳೂರಿಗೆ ಬರಲು ಸಾಧ್ಯವಾಗದೇ ಮುಳ್ಳಯ್ಯನಗಿರಿ ಮಾರ್ಗದಲ್ಲೇ ಜಾಮ್ ಆಗಿದ್ದಾರೆ.

ಅರಣ್ಯ ಅಧಿಕಾರಿಗಳು ಬೆಂಕಿಯ ಜ್ವಾಲೆ ಸ್ವಲ್ಪ ಕಡಿಮೆಯಾದ ಬಳಿಕ ಕಳಿಸುತ್ತೇವೆ ಎಂದು ಹೇಳಿ ಅಲ್ಲೆ ಉಳಿಸಿಕೊಂಡಿದ್ದಾರೆ. ಆದರೆ, ಬೆಂಕಿಯಿಂದ ಪ್ರವಾಸಿಗರು ಸೇರಿದಂತೆ ಯಾರಿಗೂ ತೊಂದರೆಯಾಗಿಲ್ಲ. ಅಗ್ನಿ ಶಾಮಕ ಸಿಬ್ಬಂದಿಗಳು ರಸ್ತೆಯಲ್ಲಿ ನಿಂತು ಆಕಾಶಕ್ಕೆ ನೀರನ್ನ ಚಿಮ್ಮಿಸುವ ಮೂಲಕ ಬೆಂಕಿಯನ್ನ ನಂದಿಸಿದ್ದಾರೆ.

ಬಿಸಿಲ ದಗೆಗೆ ಅರಣ್ಯ ಸಂಪೂರ್ಣ ಒಣಗಿ ನಿಂತಿರೋದ್ರಿಂದ ನೋಡನೋಡುತ್ತಿದ್ದಂತೆ ನೂರಾರು ಎಕರೆ ಅರಣ್ಯ ಬೆಂಕಿಗಾಹುತಿಯಾಗಿದ್ದು ಪ್ರಾಣಿ ಪಕ್ಷಿಗಳ ಜೀವಕ್ಕೂ ಕುತ್ತು ಉಂಟಾಗಿದೆ.

andolanait

Recent Posts

ಕ್ಯಾತನಹಳ್ಳಿಯಲ್ಲಿ ಅರ್ಧಕ್ಕೆ ನಿಂತ ಕಾಮಗಾರಿಗಳು

ಮಹೇಶ್ ಕರೋಠಿ ಕಿಕ್ಕೇರಿ: ಇಲ್ಲಿಗೆ ಸಮೀಪದ ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕ್ಯಾತನಹಳ್ಳಿ ಗ್ರಾಮದಲ್ಲಿ ಕಳೆದ ೨-೩ ವರ್ಷಗಳಿಂದ ಹಲವು…

25 mins ago

ಓದುಗರ ಪತ್ರ: ಬಂದರು ಎಂದರೆ…

ನೆಂಟರಿಷ್ಟರು ಮನೆಗೆ ಬಂದರು ಎಂದರೆ... ಏನು ಎತ್ತ, ಹೇಗೆ ಅವರ ಆತಿಥ್ಯ? ಇಂಥ ಸಂಕಷ್ಟಗಳಿಗೆಲ್ಲಾ ಕಾರಣ,ಬಂದ್ ಆಗಿರುವ ಆ ಹಾರ್ಮುಜ್…

29 mins ago

ಓದುಗರ ಪತ್ರ: ರಸ್ತೆ ಡುಬ್ಬಗಳಿಗೆ ಬಿಳಿ ಬಣ್ಣ ಬಳಿಯಿರಿ

ಮೈಸೂರಿನಿಂದ ಎಚ್.ಡಿ.ಕೋಟೆ ಮಾರ್ಗದಲ್ಲಿ ಬರುವ ಮಾದಾಪುರ ಗ್ರಾಮದಿಂದ ಕೆ. ಬೆಳತ್ತೂರು ಹಾಗೂ ಲೆಂಕೆ ಗ್ರಾಮದವರೆಗೂ ರಸ್ತೆ ಡಾಂಬರೀಕರಣವಾಗಿದೆ. ಈ ರಸ್ತೆಯಲ್ಲಿ…

31 mins ago

ಓದುಗರ ಪತ್ರ: ರಾಜಕೀಯದ ಪ್ರಚಾರ ಸಾಧನವಾಗುತ್ತಿರುವ ಜಾತ್ರೆಗಳು

ಜಾತ್ರೆಗಳು ಹಾಗೂ ಹಬ್ಬಗಳು ಗ್ರಾಮದ ಎಲ್ಲಾ ಜನರು ಒಟ್ಟುಗೂಡಿ ಮಾಡುವ ಕಾರ್ಯಕ್ರಮವಾಗಿವೆ. ಇದರಲ್ಲಿ ಜನರ ಒಗ್ಗಟ್ಟು, ಪರಸ್ಪರ ಸಹಕಾರ ಕಾಣುತ್ತೇವೆ.…

33 mins ago

ಓದುಗರ ಪತ್ರ: ಸೆಸ್ಕ್ ಯುಜಿ ಕೇಬಲ್ ಮುಂಜಾಗ್ರತೆ ವಹಿಸಿ

ಮೈಸೂರಿನ ಬಹುತೇಕ ಎಲ್ಲ ಬಡಾವಣೆಗಳಲ್ಲೂ, ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್)ದಿಂದ ಅಂಡರ್ ಗ್ರೌಂಡ್ ಕೇಬಲ್ ಅನ್ನು ಅಳಡಿಸುತ್ತಿದ್ದು, ಕಾಮಗಾರಿಯ…

36 mins ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ಕೆನೆಪದರ ಪರಿಶಿಷ್ಟರಿಗೆ ಬೇಡವೆನ್ನುವ ಕೇಂದ್ರಕ್ಕೆ ಮತ್ತೆ ಸುಪ್ರೀಂ ತಾಕೀತು

ಮೀಸಲಾತಿ ವ್ಯವಸ್ಥೆ ಜಾರಿ ಸಂಬಂಧ ಪರ ಮತ್ತು ವಿರೋಧದ ಚರ್ಚೆ ಹಾದಿ ಬೀದಿ, ಹಳ್ಳಿಯ ಪಂಚಾಯಿತಿ ಕಟ್ಟೆಗಳಲ್ಲಿ ಮತ್ತು ಖಾಸಗಿಯಾಗಿ…

40 mins ago