ಬೆಂಗಳೂರು: ಕಾಡಾನೆ ದಾಳಿಗೆ ಬನ್ನೇರುಘಟ್ಟ ವನ್ಯಜೀವಿ ವಲಯದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಫಾರೆಸ್ಟ್ ಗಾರ್ಡ್ ಬಲಿಯಾಗಿದ್ದಾರೆ.
ಬನ್ನೇರುಘಟ್ಟ ವನ್ಯಜೀವಿ ವಲಯದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಿಬ್ಬಂದಿ ಮಾದಣ್ಣ ಕಲ್ಕೆರೆ ಗಸ್ತಿನ ದೊಡ್ಡ ಬಂಡೆ ಅರಣ್ಯ ಪ್ರದೇಶದ ಬಳಿ ರಾತ್ರಿ 12:30ರ ಸುಮಾರಿನಲ್ಲಿ ಕಾವಲು ಕಾಯುತ್ತಿದ್ದ ಸಂದರ್ಭದಲ್ಲಿ ಕಾಡಾನೆಯ ದಾಳಿ ಮಾಡಿದೆ. ತೀವ್ರ ಹಾನಿಗೊಳಗಾಗ ಮಾದಣ್ಣ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಕಳೆದ ಆರು ತಿಂಗಳಲ್ಲಿ ಒಂದೇ ಗ್ರಾಮದ ಮೂವರು ಆನೆ ದಾಳಿಗೆ ತುತ್ತಾಗಿದ್ದು, ಇಲಾಖೆ ವಿರುದ್ಧ ಗ್ರಾಮಸ್ಥರು ಆಕ್ರೋಶ ಹೊರ ಹಾಕಿದ್ದು, ಆನೆ ದಾಳಿಯಿಂದ ಶಾಶ್ವತ ಪರಿಹಾರಕ್ಕಾಗಿ ಆಗ್ರಹಿಸಿದ್ದಾರೆ.
ಇನ್ನು ಬನ್ನೇರುಘಟ್ಟ ವನ್ಯಜೀವಿ ವಲಯದಲ್ಲಿ ನಿನ್ನೆ ರಾತ್ರಿ ಕಾವಲು ಕಾಯುತ್ತಿದ್ದ ವೇಳೆ ಆನೆ ದಾಳಿಯಿಂದ ಮೃತಪಟ್ಟ ಅರಣ್ಯ ಸಿಬ್ಬಂದಿ ಮಾದಣ್ಣ ಪಾರ್ಥಿವ ಶರೀರಕ್ಕೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅಂತಿಮ ನಮನ ಸಲ್ಲಿಸಿದರು.
ಈ ಬಗ್ಗೆ ಮಾತನಾಡಿರುವ ಅರಣ್ಯ ಸಚಿವ ಈಶ್ವರ್ ಖಂಡ್ರೆ, ಆನೆಗಳ ಇರುವಿಕೆಯನ್ನು ಪತ್ತೆ ಮಾಡುವಲ್ಲಿ ನೈಪುಣ್ಯತೆ ಹೊಂದಿದ್ದ ಮಾದಣ್ಣ ನಿಧನಕ್ಕೆ ಸಂತಾಪ ಸೂಚಿಸುತ್ತೇನೆ. ಕಾಡಾನೆಯನ್ನು ತಕ್ಷಣ ಕಾಡಿಗೆ ಮರಳಿಸಲು ಕ್ರಮವಹಿಸುವಂತೆ ಮತ್ತು ಮೃತರ ಕುಟುಂಬಕ್ಕೆ ನಿಯಮಾನುಸಾರ ತತ್ ಕ್ಷಣವೇ ಪರಿಹಾರ ವಿತರಿಸುವಂತೆ ಸೂಚಿಸಿದ್ದೇನೆ ಎಂದರು.
ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…
ಹುಣಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2026ರ ದಸರಾ ಗಜಪಯಣಕ್ಕೆ ಇಂದು ಅದ್ಧೂರಿ ಚಾಲನೆ ದೊರೆತಿದೆ. ಮೈಸೂರು ಜಿಲ್ಲಾ…
ತಮಿಳುನಾಡಿಗೆ ಮುಂದಿನ ಹದಿನೈದು ದಿನಗಳ ಕಾಲ ನಿತ್ಯ ಒಂಬತ್ತು ಸಾವಿರ ಕ್ಯುಸೆಕ್ಸ್ ಕಾವೇರಿ ನದಿ ನೀರು ಹರಿಸಬೇಕಾಗಿರುವುದು ಅಘಾತಕಾರಿ ಸಂಗತಿಯಾಗಿದೆ.…
ಮೈಸೂರು ನಗರವು ‘ಸ್ವಚ್ಛ ನಗರಿ’, ‘ಸಾಂಸ್ಕೃತಿಕ ನಗರಿ’ ಮತ್ತು ‘ಪಾರಂಪರಿಕನಗರಿ’ ಎಂದೇ ಖ್ಯಾತವಾಗಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಈ ಹೆಮ್ಮೆಯ…
ಎಐಸಿಸಿ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಹಿರಿಯ ಮುಖಂಡರಾದ, ಮಲ್ಲಿಕಾರ್ಜುನ ಖರ್ಗೆ ಅವರು ಉತ್ತರಖಂಡದ ಹಲ್ದ್ವಾನಿಯದಲ್ಲಿ ಭಾಷಣ ಮಾಡಿದ ಸ್ಥಳವನ್ನು ಶುದ್ಧೀಕರಣ…
ನವೀನ್ ಡಿಸೋಜ ಕೊಡಗಿನಲ್ಲಿ ಇಲ್ಲಿಯವರೆಗೆ ಶೇ.೩೭ರಷ್ಟು ಮಳೆ ಕೊರತೆ; ಭರದಿಂದ ಸಾಗಿದ ಬಿತ್ತನೆ ಕಾರ್ಯ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ವಾಡಿಕೆಗಿಂತ…