ರಾಜ್ಯ

ಕ್ಷೇತ್ರದ ಅಭಿವೃದ್ಧಿ, ದೇವಸ್ಥಾನಗಳ ಅಭಿವೃದ್ಧಿಗಾಗಿ ಪ್ರಾಧಿಕಾರ ರಚನೆ: ಸಿಎಂ ಸಿದ್ದರಾಮಯ್ಯ

ಮೈಸೂರು: ಚಾಮುಂಡಿ ತಾಯಿ ಸನ್ನಿಧಿಯಲ್ಲಿ ಗುಣಮಟ್ಟದ ವ್ಯವಸ್ಥೆ ಕಲ್ಪಿಸದಿದ್ದರೆ ಸಂಬಂಧಪಟ್ಟವರ ಮೇಲೆ ಸೂಕ್ತ ಕ್ರಮ ಕೈಗೊಳ್ಳುವುದು ಖಚಿತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಚ್ಚರಿಸಿದರು.

ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಮೊದಲ ಸಭೆಯನ್ನು ತಾಯಿ ಸನ್ನಿಧಿಯಲ್ಲೇ ನಡೆಸಿ ಪ್ರಸ್ತಾವಿಕವಾಗಿ ಮಾತನಾಡಿದರು‌.

ಹಿಂದೆಯೂ ಸಮಿತಿ ಇತ್ತು. ಆದರೆ ಪ್ರಾಧಿಕಾರ ರಚನೆಯಿಂದಾಗಿ ಅಭಿವೃದ್ಧಿಗೆ ಹೆಚ್ಚಿನ ಅಧಿಕಾರ ಮತ್ತು ಅವಕಾಶ ಒದಗಿದಂತಾಗಿದೆ ಎಂದರು.

ಇಲ್ಲಿಗೆ ಬರುವ ಭಕ್ತರಿಗೆ ಹೆಚ್ಚಿನ ಮತ್ತು ಉನ್ನತ ಮಟ್ಟದ ಆರೋಗ್ಯಕರ ಸವಲತ್ತು ಹಾಗೂ ಸೌಲಭ್ಯಗಳನ್ನು ಒದಗಿಸುವುದು ನಮ್ಮ ಗುರಿಯಾಗಿದೆ ಎಂದರು.

ಶ್ರೀ ಕ್ಷೇತ್ರ ಹಾಗೂ ದೇವಸ್ಥಾನದ ಸಂಪ್ರದಾಯ ಮತ್ತು ಚರಿತ್ರೆ, ಘನತೆಯನ್ನು ಕಾಪಾಡುವ ಜೊತೆಗೆ ಉನ್ನತೀಕರಿಸಬೇಕು ಎಂದರು.

ಪ್ರಾಧಿಕಾರ ವ್ಯವಸ್ಥಿತವಾಗಿ ನಡೆಯಬೇಕು. ಕಾಲ ಕಾಲಕ್ಕೆ ಸಭೆಗಳು ನಡೆದು ಹೆಚ್ಚಿನ ಶ್ರಮ ಶುಚಿತ್ವಕ್ಕೆ ಹಾಕಬೇಕು. ಕಸವನ್ನು ಆಗ್ಗಿಂದಾಗೇ ತೆರವುಗೊಳಿಸಬೇಕು. ವಾಹನಗಳ ಸಂಖ್ಯೆಯೂ ಹೆಚ್ಚಾಗಿದೆ. ವಾಹನ ನಿಲುಗಡೆಗೆ ಇನ್ನಷ್ಟು ಸುಸಜ್ಜಿತ ವ್ಯವಸ್ಥೆ ಕಲ್ಪಿಸಬೇಕಿದೆ.

ಶ್ರೀ ಕ್ಷೇತ್ರದ ಅಭಿವೃದ್ಧಿಗೆ ಹಣಕ್ಕೆ ತೊಂದರೆ ಇಲ್ಲ. ಕೇಳಿದಷ್ಟು ಹಣವನ್ನು ಕೇಳಿದಾಗಲೆಲ್ಲಾ ಒದಗಿಸಲಾಗುತ್ತಿದ್ದರೂ ಕೆಲಸಗಳು ಮಾತ್ರ ನಿರೀಕ್ಷಿತ ವೇಗದಲ್ಲಿ ನಡೆಯುತ್ತಿಲ್ಲ. ಇದನ್ನು ನಾನು ಸಹಿಸಲ್ಲ. ಸಮಯಕ್ಕೆ ಸರಿಯಾಗಿ ಕೆಲಸ ಮಾಡದಿದ್ದರೆ ನಾನು ಮುಲಾಜಿಲ್ಲದೆ ಕ್ರಮ ತೆಗೆದುಕೊಳ್ಳುತ್ತೇನೆ ಎಂದು ಎಚ್ಚರಿಸಿದರು.

ತಾಯಿ, ಶಕ್ತಿ ದೇವತೆ ಚಾಮುಂಡಿ ದೇವಿ ಬಗ್ಗೆ ಕೋಟ್ಯಂತರ ಮಂದಿಗೆ ಅಪಾರ ಭಕ್ತಿ, ಶ್ರದ್ಧೆ, ನಂಬಿಕೆ ಇದೆ. ದೇಶದ ಮೂಲೆ ಮೂಲೆಗಳಿಂದ ಭಕ್ತರು ಬರುತ್ತಾರೆ. ಇವರೆಲ್ಲರಿಗೂ ಅಗತ್ಯ ಸವಲತ್ತುಗಳನ್ನು ಒದಗಿಸಬೇಕು ಎಂದು ಸ್ಪಷ್ಟ ಸೂಚನೆ ನೀಡಿದರು.

ತಾಯಿ ಸನ್ನಿದಿಯಲ್ಲಿ ಗುಣಮಟ್ಟದ ವ್ಯವಸ್ಥೆ ಕಲ್ಪಿಸದಿದ್ದರೆ ಸಂಬಂಧಪಟ್ಟವರ ಮೇಲೆ ಸೂಕ್ತ ಕ್ರಮ ಕೈಗೊಳ್ಳುವುದು ಖಚಿತ ಎಂದು ಎಚ್ಚರಿಸಿದರು.

ಕೊಪ್ಪಳ ಹುಲಿಗಮ್ಮ ದೇವಸ್ಥಾನ ಮತ್ತು ಘಾಟಿ ಸುಬ್ರಮಣ್ಯ ದೇವಸ್ಥಾನಗಳ ಹೆಚ್ಚಿನ ಅಭಿವೃದ್ಧಿಗಾಗಿ ಪ್ರಾಧಿಕಾರ ರಚನೆ ಬಗ್ಗೆಯೂ ಹೆಚ್ಚಿನ ಬೇಡಿಕೆ ಇದೆ. ಈ ಬಗ್ಗೆಯೂ ಮುಂದುವರೆಯುವ ಅಗತ್ಯವಿದೆ ಎಂದರು.

ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್.ಸಿ.ಮಹದೇವಪ್ಪ, ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್, ಪಶು ಸಂಗೋಪನಾ ಸಚಿವ ಕೆ.ವೆಂಕಟೇಶ್, ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ, ಶಾಸಕರಾದ ಯತೀಂದ್ರ ಸಿದ್ದರಾಮಯ್ಯ, ರವಿಶಂಕರ್, ಡಾ.ತಿಮ್ಮಯ್ಯ, ಹರೀಶ್ ಗೌಡ, ಜಿ.ಟಿ.ದೇವೇಗೌಡ, ವಿವೇಕಾನಂದ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಓದುಗರ ಪತ್ರ: ಚುಟುಕು ಸಾಹಿತ್ಯ ಪ್ರಶಸ್ತಿ ಸೇರ್ಪಡೆ ಸ್ವಾಗತಾರ್ಹ

೨೦೨೫-೨೬ನೇ ಸಾಲಿಗೆ ಕನ್ನಡ ಪುಸ್ತಕ ಪ್ರಾಧಿಕಾರವು ಅರ್ಹ ಸಾಹಿತಿಗಳಿಗೆ ಪ್ರಶಸ್ತಿಯನ್ನು ಪ್ರಕಟಿಸಿದ್ದು ಅದರಲ್ಲಿ ಇದೇ ಮೊದಲ ಬಾರಿಗೆ ಚುಟುಕು ಸಾಹಿತ್ಯಕ್ಕೂ…

20 hours ago

ವೈಚಾರಿಕ ಕ್ರಾಂತಿಯ ವಚನಕಾರ ಹಡಪದ ಅಪ್ಪಣ್ಣ

ಎಚ್.ಹಾಲಪ್ಪ ಅಸಮಾನತೆ, ಶೋಷಣೆ, ಅಂಧಶ್ರದ್ಧೆ ವಿರುದ್ಧ ವಚನ ರಚಿಸಿದ ಹಡಪದ ಅಪ್ಪಣ್ಣ ಜಯಂತಿ ಇಂದು ೧೨ನೇ ಶತಮಾನದ ವಚನ ಚಳವಳಿ…

20 hours ago

ಹವಾಮಾನ ಬದಲಾವಣೆ; ಹುಲಿಗಳಿಗೆ ಹೊಸ ಅಪಾಯ?

ಶ್ರೇಯಸ್ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಜುಲೈ ೨೯ರಂದು ವಿಶ್ವ ಹುಲಿ ದಿನವನ್ನು ಆಚರಿಸುವಾಗ, ಭಾರತದ ಹುಲಿ ಸಂರಕ್ಷಣೆಯ ಯಶಸ್ಸನ್ನು ನಾವು…

20 hours ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಗೌರವ್ ಶುಕ್ಲಾ ಎಂಬ ‘ಸಮವಸ್ತ್ರವಿಲ್ಲದ ಸೈನಿಕ’

‘ಸಪೋರ‍್ಟ್ ಅವರ್ ಹೀರೋಸ್’ ಸರ್ಕಾರೇತರ ಸಂಸ್ಥೆ ಸ್ಥಾಪನೆ  ೩೬ವರ್ಷ ಪ್ರಾಯದ ಗೌರವ್ ಶುಕ್ಲಾ(ಕುಳಿತವರಲ್ಲಿ ಎಡ ಬದಿ)ರ ತಂದೆ ೨೮ ವರ್ಷಗಳ…

20 hours ago

ಮಲ್ಲಳ್ಳಿ ಜಲಪಾತದ ರೋಪ್‌ವೇ ಯೋಜನೆಗೆ ವೇಗ

ಲಕ್ಷ್ಮೀಕಾಂತ್ ಕೊಮಾರಪ್ಪ ಸೋಮವಾರಪೇಟೆ: ತಾಲ್ಲೂಕಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ ಮಲ್ಲಳ್ಳಿ ಜಲಪಾತದಲ್ಲಿ ಬಹುನಿರೀಕ್ಷಿತ ರೋಪ್‌ವೇ ಯೋಜನೆಗೆ ವೇಗ ದೊರೆತಿದೆ.…

20 hours ago

ಮೀನುಗಾರಿಕೆ ಉತ್ತೇಜನಕ್ಕೆ ಸಂಚಾರ ಮತ್ಸ್ಯ ವಾಹಿನಿ

ಕೆ.ಬಿ.ರಮೇಶನಾಯಕ ಮೈಸೂರು: ಹಲವು ರೋಗಗಳಿಗೆ ರಾಮಬಾಣವಾದ ಹಾಗೂ ಆರೋಗ್ಯಕ್ಕೆ ಹಿತಕರ ಎನ್ನಲಾಗಿರುವ ಮೀನು ಆಹಾರವನ್ನು ಜನಸಾಮಾನ್ಯರಿಗೆ ಸುಲಭವಾಗಿ ದೊರೆಯುವಂತೆ ಮಾಡಲು…

20 hours ago