ಕನಕಗಿರಿ : ಮುಂದಿನ ವರ್ಷ ಕನಕಗಿರಿ ಅಭಿವೃದ್ಧಿ ಪ್ರಾಧಿಕಾರವನ್ನು ರಚನೆ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ ಮಾಡಿದರು.
ಕೊಪ್ಪಳ ಜಿಲ್ಲೆಯ ಐತಿಹಾಸಿಕ ಕನಕಗಿರಿ ಉತ್ಸವವನ್ನು ಭವ್ಯವಾದ “ರಾಜಾ ಉಡಚಪ್ಪ ನಾಯಕ” ವೇದಿಕೆಯಲ್ಲಿ ಉದ್ಘಾಟಿಸಿ ಮಾತನಾಡಿದ ಅವರು, ಕನಕಗಿರಿ ಉತ್ಸವವನ್ನು ನಿರಂತರವಾಗಿ ನಡೆಸಲು, ಕನಕಗಿರಿಯ ಸರ್ವತೋಮುಖ ಅಭಿವೃದ್ಧಿಗೆ ನಾನು ಮತ್ತು ನಮ್ಮ ಸರ್ಕಾರ ಸದಾ ಬದ್ದವಾಗಿದೆ ಎಂದರು.
ಸರ್ವೋದಯ, ಸರ್ವದರ್ಮ, ಸಾಮಾಜಿಕ ನ್ಯಾಯದಲ್ಲಿ ನಂಬಿಕೆ ಇಟ್ಟುಕೊಂಡಿರುವವನು ನಾನು. ಈ ದಿಕ್ಕಿನಲ್ಲೇ ನಮ್ಮ ಸರ್ಕಾರ ಮುನ್ನಡೆಯಲಿದೆ. ಕೊಪ್ಪಳ ನನ್ನದೇ ಕ್ಷೇತ್ರ. ಈ ಜಿಲ್ಲೆಯ ಜನರ ಪ್ರೀತಿಗೆ ನಾನು ಸದಾ ಋಣಿ ಎಂದು ಕೃತಜ್ಞತೆ ಸಲ್ಲಿಸಿದರು.
ಶ್ರೀ ವೇದಮೂರ್ತಿ ಭುವನೇಶ್ವರಯ್ಯ ತಾತನವರ ದಿವ್ಯ ಸಾನ್ನಿದ್ಯದಲ್ಲಿ ನಡೆದ ಉತ್ಸವದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖಾ ಸಚಿವರೂ, ಕೊಪ್ಪಳ ಜಿಲ್ಲಾ ಸಚಿವರಾದ ಶಿವರಾಜ್ ತಂಗಡಗಿ ಸಂಗಪ್ಪ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾದ ರಾಯರೆಡ್ಡಿ, ಸಂಸದರಾದ ಕರಡಿ ಸಂಗಣ್ಣ, ಶಾಸಕರಾದ ರಾಘವೇಂದ್ರ ಹಿಟ್ನಾಳ್, ಜನಾರ್ಧನರೆಡ್ಡಿ, ದೊಡ್ಡನಗೌಡ ಪಾಟೀಲ್, ಇಕ್ಬಾಲ್ ಅನ್ಸಾರಿ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್ಎನ್ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್ಎನ್ಎಲ್ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…