ಬೆಂಗಳೂರು: ಸ್ವಪ್ರತಿಷ್ಠೆಯಿಂದ ಹೋರಾಟ ಮಾಡ್ತಿರೋದು ಅವರಿಗೆ ಶೋಭೆ ತರಲ್ಲ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಬೇಸರ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯತ್ನಾಳ್ ಹಾಗೂ ಎಲ್ಲರೂ ಕೂಡ ತಮ್ಮ ಹೋರಾಟ ಬಿಟ್ಟು ನಮ್ಮ ಜೊತೆ ಕೈಜೋಡಿಸಿ ಎಂದು ವಿಜಯೇಂದ್ರ ಮನವಿ ಮಾಡಿದ್ದರು. ಆದರೆ ಅವರ ಸ್ವಪ್ರತಿಷ್ಠೆಯಿಂದ ಪ್ರತ್ಯೇಕ ಹೋರಾಟ ಮಾಡುತ್ತಿರುವುದು ಅವರಿಗೆ ಶೋಭೆ ತರುವುದಿಲ್ಲ. ಈಗಲಾದರೂ ಜಾಗೃತರಾಗಿ ಪಕ್ಷ ಬಲಪಡಿಸಲು ಸಹಕಾರ ನೀಡುವಂತೆ ಕೋರುತ್ತೇನೆ. ನಾವು ಕೂಡ ಮನವಿ ಮಾಡುತ್ತೇವೆ. ಆದರೆ ಉಳಿದದ್ದು ಅವರಿಗೆ ಹಾಗೂ ಕೇಂದ್ರ ನಾಯಕರಿಗೆ ಬಿಟ್ಟ ವಿಚಾರ ಎಂದರು.
ಇನ್ನು ಮೂರು ಕ್ಷೇತ್ರಗಳ ಉಪಚುನಾವಣೆ ಫಲಿತಾಂಶದ ಬಗ್ಗೆ ಮಾತನಾಡಿದ ಅವರು, ಮೂರು ಕ್ಷೇತ್ರಗಳಲ್ಲೂ ನಿರೀಕ್ಷೆ ಮೀರಿ ನಮಗೆ ಹಿನ್ನಡೆಯಾಗಿದೆ. ಏನು ಕೊರತೆಯಾಗಿದೆ ಎಂಬುದರ ಬಗ್ಗೆ ಎಲ್ಲರೂ ಕುಳಿತು ಚರ್ಚೆ ಮಾಡುತ್ತೇವೆ. ಇನ್ನು ಮುಂದೆ ಹೀಗಾಗದಂತೆ ಎಚ್ಚರಿಕೆ ವಹಿಸಿ ಕೆಲಸ ಮಾಡುತ್ತೇವೆ. ಮೂರು ಕ್ಷೇತ್ರಗಳ ಸೋಲಿಗೆ ನಾನು ಹಾಗೂ ವಿಜಯೇಂದ್ರ ಕಾರಣ ಎನ್ನುವ ಪ್ರಶ್ನೆ ಬರಲ್ಲ. ಎಲ್ಲರೂ ಸೇರಿ ಜವಾಬ್ದಾರಿ ಹೊರಬೇಕಾಗುತ್ತದೆ ಎಂದರು.
ಬೆಂಗಳೂರು : ಮುಖ್ಯಮಂತ್ರಿ ಸ್ಥಾನದಿಂದ ನಿರ್ಗಮಿಸುವ ಮೊದಲು ಸಿದ್ದರಾಮಯ್ಯ ಅವರು ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ಅವರನ್ನು ಕರ್ನಾಟಕ ರಾಜ್ಯ ಮಾನವ…
ಬೆಂಗಳೂರು : ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ.ಶಿವಕುಮಾರ್ ಆಯ್ಕೆ ಆಗಿದ್ದಾರೆ. ಡಿಕೆಶಿ ಅವರ ಹೆಸರನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ…
ಕೊಳ್ಳೇಗಾಲ : ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ದಲಿತರ ಸ್ಥಿತಿ ಎಂದು ಮಾಜಿ ಸಚಿವ ಎನ್.ಮಹೇಶ್ ಮಾರ್ಮಿಕವಾಗಿ…
ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ಬೆನ್ನಲ್ಲಿಯೇ ನೂತನ ಮುಖ್ಯಮಂತ್ರಿ ಆಯ್ಕೆ ಮತ್ತು ಪ್ರಮಾಣವಚನ ಸ್ವೀಕಾರಕ್ಕೆ…
ಹನೂರು : ಜಮೀನಿನಲ್ಲಿ ಕುರಿ ಮೇಯಿಸುತ್ತಿದ್ದ ಧನಗಾಹಿ ಮೇಲೆ ಚಿರತೆ ದಾಳಿ ನಡೆಸಿದ ವೇಳೆ ಕೂದಲೆಳೆ ಅಂತರದಲ್ಲಿ ಪ್ರಾಣಪಾಯದಿಂದ ಪಾರಾಗಿದ್ದಾರೆ.…
ಇಂಫಾಲ: ಮಣಿಪುರದ ಇಂಫಾಲ ಪಶ್ಚಿಮ ಮತ್ತು ಪೂರ್ವ ಜಿಲ್ಲೆಗಳಲ್ಲಿ ಎರಡು ನಿಷೇಧಿತ ಸಂಘಟನೆಗಳಿಗೆ ಸೇರಿದ ಐದು ಉಗ್ರರನ್ನು ಭದ್ರತಾ ಪಡೆಗಳು…