It’s been two and a half years without grants for MLAs: MP Basavaraj Bommai mocks
ಬೆಂಗಳೂರು: ರಾಜಕೀಯ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಹಾವೇರಿ ವಿಶ್ವವಿದ್ಯಾನಿಲಯವು ನೀಡಲು ತೀರ್ಮಾನಿಸಿದ್ದ ಗೌರವ ಡಾಕ್ಟರೇಟ್ ಪದವಿಯನ್ನು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮಾಯಿ ತಿರಸ್ಕರಿಸಿದ್ದಾರೆ.
ಈ ಬಗ್ಗೆ ಎಕ್ಸ್ನಲ್ಲಿ ಮಾಹಿತಿ ನೀಡಿರುವ ಅವರು, ಹಾವೇರಿ ವಿಶ್ವವಿದ್ಯಾಲಯವು ತಮ ಸಿಂಡಿಕೇಟ್ ಸಭೆಯಲ್ಲಿ ನನಗೆ ಗೌರವ ಡಾಕ್ಟರೇಟ್ ನೀಡಲು ತೀರ್ಮಾನಿಸಿರುವುದಕ್ಕೆ ಕುಲಪತಿಗಳು, ಉಪಕುಲಪತಿಗಳು, ಕುಲಸಚಿವರು ಹಾಗೂ ಸಿಂಡಿಕೇಟ್ ಸದಸ್ಯರಿಗೆ ಹೃತ್ಪೂರ್ವಕ ಕೃತಜ್ಞತೆಗಳು ಮತ್ತು ಧನ್ಯವಾದಗಳು ಎಂದು ಹೇಳಿದ್ದಾರೆ.
ನಾನು ಗೌರವ ಡಾಕ್ಟರೇಟ್ ಸ್ವೀಕರಿಸುವುದಿಲ್ಲವೆಂದು ಈಗಾಗಲೇ ಕುಲಪತಿಗಳಿಗೆ ತಿಳಿಸಿದ್ದೇನೆ. ನಾನು ಸಾರ್ವಜನಿಕ ಸೇವೆಯಲ್ಲಿ ಇರುವುದರಿಂದ ಸಾರ್ವಜನಿಕ ಸೇವೆಗೆ ಯಾವುದೇ ಪ್ರಶಸ್ತಿಯನ್ನು ಅಪೇಕ್ಷಿಸುವುದಿಲ್ಲ. ಜನರ ಪ್ರೀತಿ ಮತ್ತು ವಿಶ್ವಾಸವೇ ನನಗೆ ಅತ್ಯಂತ ದೊಡ್ಡ ಗೌರವವೆಂದು ಭಾವಿಸುತ್ತೇನೆ. ಆದ್ದರಿಂದ ಗೌರವ ಡಾಕ್ಟರೇಟ್ ಸ್ವೀಕರಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಗೌರವ ಡಾಕ್ಟರೇಟ್ ಎಂಬುದು ದೀರ್ಘಕಾಲದಿಂದ ಯಾವುದಾದರೂ ಕ್ಷೇತ್ರದಲ್ಲಿ ವಿಶಿಷ್ಟ ಮತ್ತು ಮಹತ್ತರ ಸೇವೆ ಸಲ್ಲಿಸಿದವರಿಗೆ ನೀಡಬೇಕಾದ ಗೌರವ ಎಂಬುದು ನನ್ನ ಅಭಿಪ್ರಾಯ. ಹೀಗಾಗಿ ಇದನ್ನು ಅಂಥ ಸಾಧಕರಿಗೆ ನೀಡಬೇಕು. ರಾಜಕಾರಣಿಗಳಿಗೆ ಅಥವಾ ಸ್ವಯಂ ಪ್ರೇರಣೆಯಿಂದ ಸಮಾಜಸೇವೆಯಲ್ಲಿ ತೊಡಗಿರುವವರಿಗೆ ನೀಡುವುದು ಸಮಂಜಸವಲ್ಲ ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯ ಎಂದಿದ್ದಾರೆ.
ಮತ್ತೊಮೆ ವಿನಯಪೂರ್ವಕವಾಗಿ ಗೌರವ ಡಾಕ್ಟರೇಟ್ ಸ್ವೀಕರಿಸುವುದಿಲ್ಲವೆಂದು ತಿಳಿಸುತ್ತಾ, ಹಾವೇರಿ ವಿಶ್ವವಿದ್ಯಾಲಯಕ್ಕೆ ನನ್ನ ಹೃತ್ಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ ಎಂದು ಬೊಮ್ಮಾಯಿ ಹೇಳಿದ್ದಾರೆ.
ಬೆಂಗಳೂರು: ಉಗಾಂಡಾದಿಂದ ಬಂದಿದ್ದ ಮಹಿಳೆಯಲ್ಲಿ ಎಬೋಲಾ ಸೋಂಕಿನ ಲಕ್ಷಣಗಳು ಪತ್ತೆಯಾಗಿದ್ದು, ಆಕೆಯನ್ನು ಪ್ರತ್ಯೇಕ ವಾರ್ಡ್ನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸೋಂಕು ದೃಢೀಕರಣಕ್ಕಾಗಿ…
ತಿರುವನಂತಪುರ: ಸಿಎಂಆರ್ಎಲ್ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ತೀವ್ರಗೊಳಿಸಿರುವ ಜಾರಿ ನಿರ್ದೇಶನಾಲಯ ಇಂದು ಕೇರಳದ ಮಾಜಿ ಸಿಎಂ…
ಬೆಂಗಳೂರು: ನಾಳೆ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಸಲ್ಲಿಸುವ ಸಾಧ್ಯತೆಗಳು ದಟ್ಟವಾಗಿವೆ. ಮೇ.29ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯುವ…
ಎಸ್.ಎಸ್.ಭಟ್ ನಂಜನಗೂಡು: ಅಧಿಕಾರಿಗಳ ನೋಟಿಸ್ಗೂ ಕ್ಯಾರೆ ಎನ್ನದ ಶ್ರೀಕಂಠೇಶ್ವರ ದೇವಾಲಯದ ಸಿಬ್ಬಂದಿ ನಂಜನಗೂಡು: ಇಲ್ಲಿನ ಪ್ರಸಿದ್ಧ ಶ್ರೀಕಂಠೇಶ್ವರ ದೇವಾಲಯದ ಕಪಿಲಾ…
ಬ್ಯೂಟಿ ಪಾರ್ಲರ್ಗಳನ್ನು ತೆರೆದು ಅದರಿಂದ ಬದುಕು ನಡೆಸಲು ತರಬೇತಿ ೨೦೧೪ರಲ್ಲಿ ದೆಹಲಿಯ ಅಂಶು ರಜಪೂತ್ ೧೫ ವರ್ಷದವಳಾಗಿದ್ದಾಗ ಎಂದಿನಂತೆ ತನ್ನ…
ಎಸ್.ಸಿ. ದಿನೇಶ್ ಕುಮಾರ್, ಹಿರಿಯ ಪತ್ರಕರ್ತರು ಕಾಕ್ರೋಚ್ ಜನತಾ ಪಾರ್ಟಿ ನಮ್ಮ ದೇಶದ ಯುವಜನರ ಹತಾಶೆ, ಸಿಟ್ಟು, ಆಕ್ರೋಶಕ್ಕೆ ಹಿಡಿದ…