ರಾಜ್ಯ

ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬ್ಲ್ಯಾಕ್‌ ಪೇಪರ್‌ ಬಿಡುಗಡೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಹಾವೇರಿ: ಬಜೆಟ್‌ ಮಂಡನೆಗೂ ಮುನ್ನ ಸಿಎಂ ಸಿದ್ದರಾಮಯ್ಯ ಅವರು ಕಳೆದ ವರ್ಷದ ಬಜೆಟ್‌ನಲ್ಲಿ ಮೀಸಲಿಟ್ಟ ಹಣವೆಷ್ಟು ಖರ್ಚಾಗಿರುವ ಹಣವೆಷ್ಟು ಎಂಬುದನ್ನು ಶ್ವೇತಪತ್ರ ಹೊರಡಿಸಬೇಕು. ಇಲ್ಲದಿದ್ದರೆ, ರಾಜ್ಯ ಸರ್ಕಾರ ಎಲ್ಲಿ ವಿಫಲವಾಗಿದೆ ಎನ್ನುವುದನ್ನು ಬ್ಲ್ಯಾಕ್‌ ಪೇಪರ್‌ ಬಿಡುಗಡೆ ಮಾಡಲು ರಾಜ್ಯ ಬಿಜೆಪಿ ಘಟಕ ಸಿದ್ದರಾಗಬೇಕು ಎಂದು ಸೂಚಿಸುವುದಾಗಿ ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಈ ಬಗ್ಗೆ ಹಾವೇರಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಕಾಂಗ್ರೆಸ್‌ನ ಆಂತರಿಕ ವಿಚಾರದಲ್ಲಿ ಯಾವುದೇ ರೀತಿಯ ಹೇಳಿಕೆ ನೀಡಲು ಸಿದ್ಧವಿಲ್ಲ. ಜನರು ಇವರಿಗೆ ಆಡಳಿತ ನಡೆಸಲು ಅವಕಾಶ ಕೊಟ್ಟಿದ್ದಾರೆ. ಅದನ್ನು ಮಾಡಲು ಇವರಿಗೆ ಸಮಯವಿಲ್ಲ. ಯಾಕೆಂದರೆ ರಾಜ್ಯದಲ್ಲಿ ಆರ್ಥಿಕ ಪರಿಸ್ಥಿತಿ ಸರಿ ಇಲ್ಲ. ಸಿಎಂ ಸಿದ್ದರಾಮಯ್ಯ ಅವರು ಹಿಂದುಳಿದ ವರ್ಗಗಳ ಇಲಾಖೆ ಹಾಗೂ ನಿಗಮಗಳ ಅಧಿಕಾರಿಗಳ ಸಭೆ ನಡೆಸಿದ್ದಾರೆ. ಈ ವರ್ಷ ಹಿಂದುಳಿದ ವರ್ಗಗಳ ನಿಗಮಗಳಿಗೆ ಎಷ್ಟು ಹಣ ಖರ್ಚಾಗಿದೆ ಎಂದು ಸಿಎಂ ಮಾಡಿರುವ ಸಭೆಯಲ್ಲಿ ಚರ್ಚೆಯೇ ಆಗಲಿಲ್ಲ. ಹಿಂದುಳಿದ ವರ್ಗಗಳ ನಾಯಕರು ಸಿಎಂ ಸಿದ್ದರಾಮಯ್ಯರನ್ನು ಕೇಳಬೇಕಿತ್ತು. ಅದನ್ನು ವಿರೋಧ ಪಕ್ಷವಾಗಿ ಬಿಜೆಪಿ ಮಾಡುತ್ತದೆ ಎಂದು ಹೇಳಿದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಉಪಚುನಾವಣೆ ಸಿಎಂಗೆ ಕಬ್ಬಿಣದ ಕಡಲೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ

ದಾವಣಗೆರೆ: ಈ ಉಪಚುನಾವಣೆಗಳು ಕಾಂಗ್ರೆಸ್ ಸರ್ಕಾರ, ಮುಖ್ಯಮಂತ್ರಿಗಳಿಗೆ ಕಬ್ಬಿಣದ ಕಡಲೆ ಆಗಿ ಪರಿವರ್ತನೆ ಆಗಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು…

5 mins ago

ಇಟಲಿ ಬಳಿ ಘೋರ ದುರಂತ: ಸಮುದ್ರದಲ್ಲಿ ದೋಣಿ ಮುಳುಗಿ 71 ಜನ ನಾಪತ್ತೆ

ರೋಮ್:‌ ಇಟಲಿ ಕರಾವಳಿಯಲ್ಲಿ ಭೀಕರ ಬೋಟ್‌ ದುರಂತ ಸಂಭವಿಸಿದ್ದು, ಮೆಡಿಟೇರಿಯನ್‌ ಸಮುದ್ರದಲ್ಲಿ ಬೋಟ್‌ ಮುಳುಗಿ 71 ಜನರು ನಾಪತ್ತೆಯಾಗಿದ್ದಾರೆ. ಈಸ್ಟರ್‌…

26 mins ago

ಕಾಳಸಂತೆಯಲ್ಲಿ ಗ್ಯಾಸ್ ಸಿಲಿಂಡರ್ ಮಾರಾಟ ವಿಚಾರ: ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯೆ

ಮೈಸೂರು: ಕಾಳಸಂತೆಯಲ್ಲಿ ಗ್ಯಾಸ್‌ ಸಿಲಿಂಡರ್‌ ಮಾರಾಟವಾಗುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಪ್ರತಿಕ್ರಿಯೆ ನೀಡಿದ್ದಾರೆ. ಇರಾನ್‌ ಮೇಲೆ ಇಸ್ರೇಲ್‌…

37 mins ago

ಇನ್ನೂ ಎರಡು ವರ್ಷ ಸಿದ್ದರಾಮಯ್ಯನವರೇ ಸಿಎಂ: ಗೃಹ ಸಚಿವ ಪರಮೇಶ್ವರ್‌

ಮೈಸೂರು: ಇನ್ನೂ ಎರಡು ವರ್ಷಗಳ ಕಾಲ ಸಿದ್ದರಾಮಯ್ಯನವರೇ ಸಿಎಂ ಆಗಿ ಮುಂದುವರಿಯಲಿದ್ದಾರೆ ಎಂದು ಗೃಹ ಸಚಿವ ಪರಮೇಶ್ವರ್‌ ಅವರು ಸಿಎಂ…

46 mins ago

ಡೊನಾಲ್ಡ್‌ ಟ್ರಂಪ್‌ ಡೆಡ್‌ಲೈನ್‌ಗೆ ಇರಾನ್‌ ಕೌಂಟರ್‌: ಏನದು ಗೊತ್ತಾ.?

ಟೆಹರಾನ್:‌ ನಷ್ಟ ಪರಿಹಾರವಿಲ್ಲದೇ ಹಾರ್ಮುಜ್‌ ಜಲಸಂಧಿ ಓಪನ್‌ ಮಾಡಲ್ಲ ಎಂದು ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ಗೆ ಇರಾನ್‌ ಕೌಂಟರ್‌ ಕೊಟ್ಟಿದೆ.…

1 hour ago

ದೇಶದಲ್ಲಿ ಎಲ್‌ಪಿಜಿ ಕೊರತೆ ಇಲ್ಲ: 5 ಕೆಜಿ ಗ್ಯಾಸ್‌ ಸಿಲಿಂಡರ್‌ಗಳ ಪೂರೈಕೆ ಹೆಚ್ಚಿಸಿದ ಕೇಂದ್ರ ಸರ್ಕಾರ

ನವದೆಹಲಿ: ಅಮೇರಿಕಾ ಮತ್ತು ಇರಾನ್‌ ನಡುವಿನ ಯುದ್ಧ ಮುಂದುವರಿದಿರುವ ಹಿನ್ನೆಲೆಯಲ್ಲಿ ಎಲ್‌ಪಿಜಿ ಆತಂಕದಲ್ಲಿದ್ದ ಜನರಿಗೆ ಕೇಂದ್ರ ಸರ್ಕಾರ ಮತ್ತೊಂದು ಅಭಯ…

2 hours ago