ಹಾವೇರಿ: ಬಜೆಟ್ ಮಂಡನೆಗೂ ಮುನ್ನ ಸಿಎಂ ಸಿದ್ದರಾಮಯ್ಯ ಅವರು ಕಳೆದ ವರ್ಷದ ಬಜೆಟ್ನಲ್ಲಿ ಮೀಸಲಿಟ್ಟ ಹಣವೆಷ್ಟು ಖರ್ಚಾಗಿರುವ ಹಣವೆಷ್ಟು ಎಂಬುದನ್ನು ಶ್ವೇತಪತ್ರ ಹೊರಡಿಸಬೇಕು. ಇಲ್ಲದಿದ್ದರೆ, ರಾಜ್ಯ ಸರ್ಕಾರ ಎಲ್ಲಿ ವಿಫಲವಾಗಿದೆ ಎನ್ನುವುದನ್ನು ಬ್ಲ್ಯಾಕ್ ಪೇಪರ್ ಬಿಡುಗಡೆ ಮಾಡಲು ರಾಜ್ಯ ಬಿಜೆಪಿ ಘಟಕ ಸಿದ್ದರಾಗಬೇಕು ಎಂದು ಸೂಚಿಸುವುದಾಗಿ ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಈ ಬಗ್ಗೆ ಹಾವೇರಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಕಾಂಗ್ರೆಸ್ನ ಆಂತರಿಕ ವಿಚಾರದಲ್ಲಿ ಯಾವುದೇ ರೀತಿಯ ಹೇಳಿಕೆ ನೀಡಲು ಸಿದ್ಧವಿಲ್ಲ. ಜನರು ಇವರಿಗೆ ಆಡಳಿತ ನಡೆಸಲು ಅವಕಾಶ ಕೊಟ್ಟಿದ್ದಾರೆ. ಅದನ್ನು ಮಾಡಲು ಇವರಿಗೆ ಸಮಯವಿಲ್ಲ. ಯಾಕೆಂದರೆ ರಾಜ್ಯದಲ್ಲಿ ಆರ್ಥಿಕ ಪರಿಸ್ಥಿತಿ ಸರಿ ಇಲ್ಲ. ಸಿಎಂ ಸಿದ್ದರಾಮಯ್ಯ ಅವರು ಹಿಂದುಳಿದ ವರ್ಗಗಳ ಇಲಾಖೆ ಹಾಗೂ ನಿಗಮಗಳ ಅಧಿಕಾರಿಗಳ ಸಭೆ ನಡೆಸಿದ್ದಾರೆ. ಈ ವರ್ಷ ಹಿಂದುಳಿದ ವರ್ಗಗಳ ನಿಗಮಗಳಿಗೆ ಎಷ್ಟು ಹಣ ಖರ್ಚಾಗಿದೆ ಎಂದು ಸಿಎಂ ಮಾಡಿರುವ ಸಭೆಯಲ್ಲಿ ಚರ್ಚೆಯೇ ಆಗಲಿಲ್ಲ. ಹಿಂದುಳಿದ ವರ್ಗಗಳ ನಾಯಕರು ಸಿಎಂ ಸಿದ್ದರಾಮಯ್ಯರನ್ನು ಕೇಳಬೇಕಿತ್ತು. ಅದನ್ನು ವಿರೋಧ ಪಕ್ಷವಾಗಿ ಬಿಜೆಪಿ ಮಾಡುತ್ತದೆ ಎಂದು ಹೇಳಿದರು.
ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಹಗರಣದ ಸಂಬಂಧ ಹೆಚ್ಚಿನ ವಿಚಾರಣೆಗಾಗಿ ಮಾಜಿ ಆಯುಕ್ತ ದಿನೇಶ್…
ಮಡಿಕೇರಿ : ದುಬಾರೆ ಶಿಬಿರದ ಸಾಕಾನೆ ತಕ್ಷ ಅನಾರೋಗ್ಯದಿಂದ ಸೋಮವಾರ ರಾತ್ರಿ ಮೃತಪಟ್ಟಿದೆ. ಡಿ.೮ರಂದು ರಾತ್ರಿ ೯.೩೦ರ ಸಮಯದಲ್ಲಿ ತಕ್ಷ…
ಮೈಸೂರು : ಕೇಳಿದ ತಕ್ಷಣ ಹಣ ಕೊಡಲಿಲ್ಲ ಎಂಬ ಕಾರಣಕ್ಕಾಗಿ ಸ್ನೇಹಿತನ ಮೇಲೆ ಯುವಕನೊಬ್ಬ ಚಾಕುವಿನಿಂದ ಇರಿದಿರುವ ಘಟನೆ ನಗರದಲ್ಲಿ…
ಮೈಸೂರು : ಲೈಂಗಿಕವಾಗಿ ಸಹಕರಿಸಿದಲ್ಲಿ ಚೆನ್ನಾಗಿ ನೋಡಿಕೊಳ್ಳುತ್ತೀನಿ ಎಂದು ಮಹಿಳಾ ಉದ್ಯೋಗಿಗೆ ಕಿರುಕುಳ ನೀಡಿದ ಖಾಸಗಿ ಕಾರ್ಖಾನೆ ಮಾಲೀಕನ ವಿರುದ್ದ…
ಮೈಸೂರು : ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ದೇವಿಯ ದರ್ಶನ ಹಾಗೂ ಸಮೂಹ ದೇವಾಲಯಗಳ ಸೇವೆಗಳ ಶುಲ್ಕಗಳನ್ನು ಏರಿಸಿರುವ ರಾಜ್ಯ…
ಬೆಳಗಾವಿ : ರಾಜ್ಯದಲ್ಲಿ 545 ಪಿಎಸ್ಐ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ಈಗಾಗಲೇ ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ. ಮೂರು ತಿಂಗಳ…