ರಾಜ್ಯ

ಮಾಜಿ ಸಿಎಂ ಎಸ್.ಎಂ.ಕೃಷ್ಣ ನಿಧನಕ್ಕೆ ಅಧಿವೇಶನದಲ್ಲಿ ಸಂತಾಪ ಸೂಚಿಸಿದ ಸಿಎಂ ಸಿದ್ದರಾಮಯ್ಯ

ಬೆಳಗಾವಿ: ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಅವರು ವಿಧಾನಸಭಾ ಅಧಿವೇಶನದಲ್ಲಿ ಸಂತಾಪ ಸೂಚಿಸಿದ್ದಾರೆ.

ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರು, ಮುತ್ಸದ್ದಿತನ, ದೂರದೃಷ್ಟಿ ಉಳ್ಳವರಾಗಿದ್ದರು. ದೀರ್ಘಕಾಲ ರಾಜಕಾರಣದಲ್ಲಿ‌ ಸಕ್ರಿಯರಾಗಿದ್ದರು.‌

ನಾನು ವಿದ್ಯಾರ್ಥಿ ಆಗಿದ್ದಾಗ ಎಸ್.ಎಂ.ಕೃಷ್ಣ ಅವರು ಕರೆದಿದ್ದ ಪ್ರಜಾ ಸೋಷಿಯಲಿಸ್ಟ್ ಪಾರ್ಟಿಯ ಸಭೆಯಲ್ಲಿ ಭಾಗವಹಿಸಿದ್ದೆ. ಬಳಿಕ ನಾನು ಲೋಹಿಯಾ ಅವರ ಸಮಾಜವಾದಿ ಪಕ್ಷ ಸೇರ್ಪಡೆಯಾದೆ.

ಎಸ್.ಎಂ.ಕೃಷ್ಣ ಅವರು 1962ರಲ್ಲೇ ಸ್ವತಂತ್ರವಾಗಿ ವಿಧಾನಸಭೆಗೆ ಸ್ಪರ್ಧಿಸಿದ್ದರು. ವಿಧಾನಸಭೆ, ವಿಧಾನ‌ಪರಿಷತ್, ರಾಜ್ಯಸಭೆ, ಲೋಕಸಭೆ ನಾಲ್ಕೂ ಸದನಗಳ ಸದಸ್ಯರೂ ಆಗಿದ್ದು, ರಾಜ್ಯದ ಮುಖ್ಯಮಂತ್ರಿ, ವಿಧಾನಸಭೆ ಸ್ಪೀಕರ್, ಕೇಂದ್ರ ಸಚಿವರು ಹಾಗೂ ರಾಜ್ಯಪಾಲರೂ ಆಗಿದ್ದ ಅಪರೂಪದ ರಾಜಕಾರಣಿ.

ಎಸ್.ಎಂ.ಕೃಷ್ಣ ಅವರು ಮಹಾರಾಷ್ಟ್ರ ರಾಜ್ಯಪಾಲರಾಗಿದ್ದಾಗಲೇ ನಾನು ಕಾಂಗ್ರೆಸ್ ಸೇರಿದ್ದು. ಅವರು ರಾಜ್ಯಪಾಲರಾಗಿದ್ದಾಗ ನಾನು ಅವರನ್ನು ಭೇಟಿಯಾಗಿ, ನಾನು ಕಾಂಗ್ರೆಸ್ ಸೇರುವ ತೀರ್ಮಾನವನ್ನು ಅವರಿಗೆ ತಿಳಿಸಿದೆ. ಅವರು ನನ್ನ ತೀರ್ಮಾನವನ್ನು ಸ್ವಾಗತಿಸಿದ್ದರು.

ಒಳ್ಳೆ ಸಂಸದೀಯ ಪಟು, ಎಲ್ಲರನ್ನೂ ಗೌರವದಿಂದ ಕಾಣುತ್ತಿದ್ದರು‌. ಯಾವತ್ತೂ ದ್ವೇಷದ ರಾಜಕಾರಣ ಮಾಡಿದವರಲ್ಲ. ಅವರ ಕಾಲದಲ್ಲೇ ಡಾ.ರಾಜ್ ಕುಮಾರ್ ಅವರ ಅಪಹರಣ ಆಗಿತ್ತು, ಆ ಸಂದರ್ಭದ ದೊಡ್ಡ ಸವಾಲನ್ನು ಎದುರಿಸಿದ್ದರು. ಅದನ್ನು ಯಶಸ್ವಿಯಾಗಿ ನಿಭಾಯಿಸಿದ್ದರು.

ಬೆಂಗಳೂರನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ, ಸಿಂಗಾಪುರದಂತೆ ಮಾಡಬೇಕು ಎನ್ನುವ ಉದ್ದೇಶ ಹೊಂದಿದ್ದರು. ಬೆಂಗಳೂರಿಗೆ ಸಿಲಿಕಾನ್ ವ್ಯಾಲಿ ಆಫ್ ಇಂಡಿಯಾ ಎನ್ನುವ ಹೆಗ್ಗಳಿಕೆ ಬರಲು ಎಸ್.ಎಂ.ಕೃಷ್ಣ ಅವರ ಕೊಡುಗೆ ಅಪಾರ.

ಕಾಂಗ್ರೆಸ್ ಮೂಲಕ ಸುದೀರ್ಘ ರಾಜಕಾರಣ ಮಾಡಿ ಬಿಜೆಪಿ ಸೇರಿ ಒಂದು ವರ್ಷಕ್ಕೆ ರಾಜಕೀಯ ನಿವೃತ್ತಿ ಘೋಷಿಸಿದ ದಕ್ಷ ಆಡಳಿತಗಾರ, ಸಜ್ಜನ-ಮುತ್ಸದ್ದಿ ರಾಜಕಾರಣಿ ಆಗಿದ್ದರು.

ಈಗ ಅವರ ಅಗಲಿಕೆ ನೋವುಂಟು ಮಾಡಿದೆ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಂತಾಪ ಸೂಚಿಸಿದ್ದಾರೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 26, ಶುಕ್ರವಾರ  

10 mins ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಕನ್ನಡಕ್ಕೊಂದು ಒಟಿಟಿ, ʼಗರುಡ ಪುರಾಣʼ ಇತ್ಯಾದಿ

‘ವೆನ್ ಯು ವಾಂಟ್ ಟು ಡು ಸಮ್‌ತಿಂಗ್ ಡು ಇಟ್; ಆರ್ ಎಲ್ಸ್ ವಿಟ್ ನೆಸ್‌ಇಟ್’ ಇದು ಅತ್ಯಂತ ಪ್ರಚಲಿತವಿರುವ…

16 mins ago

ಹಿಟಾಚಿ ಮೇಲೆ ಬಿದ್ದ ಗೋಡೆ: ಚಾಲಕ ಪಾರು

ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…

16 hours ago

ಕೆಎಸ್‌ಓಯುಗೆ ನೂತನ ಕುಲಪತಿಯಾಗಿ ಡಾ.ಜ್ಞಾನ ಪ್ರಕಾಶ್ ನೇಮಕ

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಶಿಕ್ಷಣತಜ್ಞ, ವಿಜ್ಞಾನಿ ಪ್ರೊ.ಎ.ಪಿ.ಜ್ಞಾನಪ್ರಕಾಶ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.…

17 hours ago

ಕಾಡಾನೆ ದಾಳಿ: ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಮಹಿಳೆ

ಕೃಷ್ಣಾ ಸಿದ್ದಾಪುರ ವಿರಾಜಪೇಟೆ: ತಾಲೂಕಿನ ಪಳ್ಳಕೆರೆ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಕೆಲಸಕ್ಕೆ ತೆರಳಿದ್ದ…

18 hours ago

ಮಾಜಿ ಸಿಎಂ ದೇವರಾಜ ಅರಸು ನೂತನ ಪ್ರತಿಮೆ ಅನಾವರಣ

ಮೈಸೂರು: ಮೈಸೂರು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದ ಬಳಿ ಮಾಜಿ ಸಿಎಂ ದೇವರಾಜ ಅರಸು ಅವರ ನೂತನ ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಗಿದೆ.…

19 hours ago